AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಮೆಎಣ್ಣೆ ಕೊರತೆ ಹಿನ್ನೆಲೆ ದೋಣಿಗಳಿಗೆ ಲಂಗರು ಹಾಕಿದ ಮೀನುಗಾರರು; ಸರ್ಕಾರಕ್ಕೆ ಉಗ್ರ ಪ್ರತಿಭಟನೆಯ ಎಚ್ಚರಿಕೆ

ಕರಾವಳಿಯಲ್ಲಿ ನಾಡದೋಣಿಗೆ ಪೂರೈಕೆಯಾಗುತ್ತಿರುವ ಸೀಮೆಎಣ್ಣೆ ಕಳೆದ ಮೂರು ತಿಂಗಳಿನಿಂದ ಮಾಯಾವಾಗಿದೆ. ಹೀಗಾಗಿ ಕರಾವಳಿಯ ಮೂರು ಜಿಲ್ಲೆಗಳಲ್ಲಿ ನಾಡದೋಣಿಗಳಿಗೆ ಲಂಗರು ಹಾಕಲಾಗಿದೆ. ಪರಿಣಾಮ ಮೀನುಗಾರಿಕೆಯನ್ನೇ ನೆಚ್ಚಿಕೊಂಡಿರುವ ಸಾವಿರಾರು ಕುಟುಂಬಗಳಿಗೆ ದಾರಿ ಕಾಣದಾಗಿದೆ.

ಸೀಮೆಎಣ್ಣೆ ಕೊರತೆ ಹಿನ್ನೆಲೆ ದೋಣಿಗಳಿಗೆ ಲಂಗರು ಹಾಕಿದ ಮೀನುಗಾರರು; ಸರ್ಕಾರಕ್ಕೆ ಉಗ್ರ ಪ್ರತಿಭಟನೆಯ ಎಚ್ಚರಿಕೆ
ಸೀಮೆಎಣ್ಣೆ ಕೊರತೆ ಹಿನ್ನೆಲೆ ಮೀನುಗಾರಿಕೆ ಸ್ಥಗಿತ
TV9 Web
| Edited By: |

Updated on:Nov 05, 2022 | 12:42 PM

Share

ಉಡುಪಿ: ಕರಾವಳಿ ಭಾಗದಲ್ಲಿ ಮೀನುಗಾರಿಕೆ ನಡೆಸುವ ಬಹುತೇಕ ದೋಣಿಗಳು ಸೀಮೆಎಣ್ಣೆ ಚಾಲಿತವಾಗಿವೆ. ದಕ್ಷಿಣ ಕನ್ನಡದ 1,345, ಉಡುಪಿ 4,896, ಉತ್ತರ ಕನ್ನಡ 1,789 ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಒಟ್ಟು 8,030 ಸೀಮೆಎಣ್ಣೆ ಚಾಲಿತ ದೋಣಿಗಳಿದ್ದು, ಮಾಸಿಕ 300 ಲೀಟರ್‌ನಂತೆ ವಾರ್ಷಿಕ 24,090 ಕೆ.ಎಲ್‌. ಸೀಮೆಎಣ್ಣೆ ಅಗತ್ಯವಿದೆ. ಒಂದು ದೋಣಿಯಲ್ಲಿ ಕನಿಷ್ಠ 6ರಂತೆ ಒಟ್ಟು 60,500 ನಾಡದೋಣಿ ಮೀನುಗಾರರಿದ್ದಾರೆ. ರಾಜ್ಯ ಸರಕಾರದ ಆದೇಶದಂತೆ ನಾಡದೋಣಿ ಮೀನುಗಾರರಿಗೆ ಆಗಸ್ಟ್‌ನಿಂದ ಸೀಮೆಎಣ್ಣೆ ಬಿಡುಗಡೆಯಾಗಬೇಕಿತ್ತಾದರೂ ಆಗಿಲ್ಲ. ಪ್ರಸ್ತುತ ಮೀನುಗಾರಿಕೆಗೆ ಉತ್ತಮ ಅವಕಾಶ ಇದ್ದರೂ ಸೀಮೆಎಣ್ಣೆ ಸಿಗದ ಕಾರಣ ಮೀನುಗಾರಿಕೆ ಸಾಧ್ಯವಾಗುತ್ತಿಲ್ಲ. ಬೇರೆ ಆದಾಯ ಇಲ್ಲದೆ ಕುಟುಂಬ ನಿರ್ವಹಣೆ ಕಷ್ಟವಾಗಿದೆ ಎಂದು ಮೀನುಗಾರರು ಹೇಳುತ್ತಾರೆ.

2013ರಿಂದ ಸರಕಾರದ ಆದೇಶದಂತೆ ನಾಡದೋಣಿಗಳಿಗೆ ಮಾಸಿಕ 300 ಲೀಟರ್‌ನಂತೆ ಸೀಮೆಎಣ್ಣೆ ನೀಡಲಾಗುತ್ತದೆ. ಆ ಅವಧಿಯಲ್ಲಿ ರಾಜ್ಯದಲ್ಲಿ 4,514 ನಾಡದೋಣಿಗಳಿದ್ದವು. ಆ ಪ್ರಕಾರವೇ ಪ್ರಸ್ತುತ ದಿನದಲ್ಲೂ ಸೀಮೆಎಣ್ಣೆ ಬಿಡುಗಡೆಯಾಗುತ್ತದೆ. ಪ್ರಸ್ತುತ 8,030 ನಾಡ ದೋಣಿಗಳಿದ್ದರೂ ಸರಕಾರ ಸೀಮೆ ಎಣ್ಣೆ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಸರಿಯಾಗಿ ಸೀಮೆಎಣ್ಣೆ ಪೂರೈಕೆ ಆಗದ ಮತ್ತು ಹೆಚ್ಚುವರಿ ಸೀಮೆಎಣ್ಣೆ ಪೂರೈಕೆಗೆ ಸರ್ಕಾರದ ಮೇಲೆ ಒತ್ತಡ ಹೇರಲು ಮೀನುಗಾರರು ಮುಂದಾಗಿದ್ದಾರೆ. ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟದ ವತಿಯಿಂದ ಸೀಮೆಎಣ್ಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ನ.7ರಂದು ರಾಜ್ಯ ಕರಾವಳಿಯ 3 ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗಳ ಎದುರು ಏಕಕಾಲದಲ್ಲಿ ಬೃಹತ್‌ ಪ್ರತಿಭಟನೆ ನಡೆಯಲಿದೆ. ಉಡುಪಿಯಲ್ಲಿ 20 ಸಾವಿರ ಮೀನುಗಾರರು ಸೇರಲಿದ್ದು, ಬೆಳಗ್ಗೆ 10ಕ್ಕೆ ಎಂಜಿಎಂ ಕಾಲೇಜು ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮೂಲಕ ತೆರಳಿ ಹಕ್ಕೊತ್ತಾಯ ನಡೆಸಲಿದ್ದಾರೆ.

ಒಟ್ಟಾರೆಯಾಗಿ ರಾಜ್ಯದ ಕರಾವಳಿಯಲ್ಲಿರುವ 8,030 ದೋಣಿಗಳಿದ್ದು, ಎಲ್ಲದಕ್ಕೂ 300 ಲೀಟರ್‌ಗಳಂತೆ ಸೀಮೆಎಣ್ಣೆ ಒದಗಿಸುವಂತೆ ಕೋರಿ ಮೀನುಗಾರರು ಸರಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಮೀನುಗಾರರ ಮನವಿಗೆ ಸರಕಾರ ಶೀಘ್ರ ಸ್ಪಂದನೆ ನೀಡದಿದ್ದರೆ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ಮೀನುಗಾರರು ನೀಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:42 pm, Sat, 5 November 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ