AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಕಾಲು ಸಂಕ ದಾಟುವಾಗ ನೀರಿಗೆ ಬಿದ್ದು ಕೊಚ್ಚಿ ಹೋದ ವಿದ್ಯಾರ್ಥಿನಿ; ಪೋಷಕರಿಗೆ ಧೈರ್ಯ ತುಂಬಿದ ಜಿಲ್ಲಾಧಿಕಾರಿ

ಕಾಲು ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದು ವಿದ್ಯಾರ್ಥಿನಿ ಕೊಚ್ಚಿಹೋದ ಘಟನೆ ಸಂಬಂಧ ಇಂದು ಜಿಲ್ಲಾಧಿಕಾರಿ ಕೂರ್ಮರಾವ್ ಅವರು ಬಾಲಕಿಯ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ.

ಉಡುಪಿ: ಕಾಲು ಸಂಕ ದಾಟುವಾಗ ನೀರಿಗೆ ಬಿದ್ದು ಕೊಚ್ಚಿ ಹೋದ ವಿದ್ಯಾರ್ಥಿನಿ; ಪೋಷಕರಿಗೆ ಧೈರ್ಯ ತುಂಬಿದ ಜಿಲ್ಲಾಧಿಕಾರಿ
ನೀರಿನಲ್ಲಿ ಕೊಚ್ಚಿಹೋದ ಬಾಲಕಿ ಮನೆಗೆ ಉಡುಪಿ ಜಿಲ್ಲಾಧಿಕಾರಿ ಭೇಟಿ
TV9 Web
| Edited By: Rakesh Nayak Manchi|

Updated on: Aug 09, 2022 | 12:51 PM

Share

ಉಡುಪಿ: ಕಾಲು ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದು ವಿದ್ಯಾರ್ಥಿನಿ ಕೊಚ್ಚಿಹೋದ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ನಿನ್ನೆ ನಡೆದಿದೆ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಪ್ಪರಿಕೆಯ ವಿದ್ಯಾರ್ಥಿನಿ ಸನ್ನಿಧಿ (7) ನೀರುಪಾಲದವಳು. ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಶಾಲೆಯಿಂದ ಮನೆಗೆ ಮರಳುತ್ತಿದ್ದ ಬೊಳಂಬಳ್ಳಿ ಗ್ರಾಮದ ನಿವಾಸಿ ಪ್ರದೀಪ್ ಪೂಜಾರಿ, ಸುಮಿತ್ರಾ ದಂಪತಿ ಪುತ್ರಿ ಸನ್ನಿಧಿ ಕಾಲು ಸಂಕದಲ್ಲಿ ನಡೆದುಕೊಂಡು ಬರುತ್ತಿದ್ದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದು, ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದಾಳೆ. ಸದ್ಯ ಸನ್ನಿಧಿಯ ಪತ್ತೆಗಾಗಿ ಭದ್ರತಾ ಸಿಬ್ಬಂದಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಘಟನೆ ಬಗ್ಗೆ ಮಾಹಿತಿ ತಿಳಿದ ಜಿಲ್ಲಾಧಿಕಾರಿ ಕೂರ್ಮರಾವ್ ಅವರು ಇಂದು ಬಾಲಕಿಯ ಮನೆಗೆ ಭೇಟಿ ನೀಡಿ ಪೋಷಕರಿಗೆ ಧೈರ್ಯ ತುಂಬಿದ್ದಾರೆ. ನಂತರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಊರಿನ ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿಯವರ ಮುಂದೆ ಕಾಲ್ತೋಡು ಗ್ರಾಮಸ್ಥರು ಹೇಳಿಕೊಂಡಿದ್ದಾರೆ.

ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ನೆರೆ ಪರಿಸ್ಥಿತಿ ತಲೆದೋರಿದ್ದು, ಅನೇಕ ಕಡೆಗಳಲ್ಲಿ ಹಾನಿಗಳು ಉಂಟಾಗಿವೆ. ಅದರಂತೆ 60ಕ್ಕೂ ಹೆಚ್ಚು ನಾಡದೋಣಿಗಳು ಶಿಥಿಲಗೊಂಡಿರುವ ಕಳುಹಿತ್ಲು ಪ್ರದೇಶಕ್ಕೂ ಜಿಲ್ಲಾಧಿಕಾರಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮಾತನಾಡಿ, ಈಗಾಗಲೇ ಸಂಭವಿಸಿದ ನಷ್ಟದ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ. ಸೂಕ್ತ ಪರಿಹಾರ ಒದಗಿಸುವ ಪ್ರಯತ್ನ ನಡೆಸುವುದಾಗಿ ಹೇಳಿದ್ದಾರೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ