AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malpe Beach: ಪಡುಕೆರೆಯಲ್ಲಿ ಪ್ರವಾಸಿಗರಿಂದ ರಾತ್ರಿ ಕಾಟ; ಕಡಿವಾಣಕ್ಕೆ ಸ್ಥಳೀಯರ ಮಾಸ್ಟರ್ ಪ್ಲಾನ್, ಪೊಲೀಸರ ಸಾಥ್

ಉಡುಪಿ ಜಿಲ್ಲೆಯ ಮಲ್ಪೆಯ ಪಡುಕೆರೆಯಲ್ಲಿ ರಾತ್ರಿ ಹೊತ್ತು ಪ್ರವಾಸಿಗರ ತೊಂದರೆಗಳಿಗೆ ಕಡಿವಾಣ ಹಾಕಲು ಸ್ಥಳೀಯರೇ ಸೇರಿ ಮಾಸ್ಟರ್ ಪ್ಲ್ಯಾನ್ ಹಾಕಿದ್ದು ಇದಕ್ಕೆ ಪೊಲೀಸರು ಸಹ ಸಾಥ್ ನೀಡಿದ್ದಾರೆ..

Malpe Beach: ಪಡುಕೆರೆಯಲ್ಲಿ ಪ್ರವಾಸಿಗರಿಂದ ರಾತ್ರಿ ಕಾಟ; ಕಡಿವಾಣಕ್ಕೆ ಸ್ಥಳೀಯರ ಮಾಸ್ಟರ್ ಪ್ಲಾನ್, ಪೊಲೀಸರ ಸಾಥ್
ಪಡುಕೆರೆ ಬೀಚ್​ನಲ್ಲಿ ಪ್ರವಾಸಿಗರ ತೊಂದರೆಗೆ ಕಡಿವಾಣ ಹಾಕಲು ಸ್ಥಳೀಯರಿಂದ ಮಾಸ್ಟರ್ ಪ್ಲಾನ್
TV9 Web
| Edited By: Rakesh Nayak Manchi|

Updated on: Oct 25, 2022 | 10:32 AM

Share

ಉಡುಪಿ: ಜಿಲ್ಲೆಯ ಪ್ರಖ್ಯಾತ ಮಲ್ಪೆ ಹಾಗೂ ಪಡುಕೆರೆ ಬೀಚ್ ಪ್ರವಾಸಿ ತಾಣಕ್ಕೆ ಸಾಕಷ್ಟು ಮಂದಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಕೆಲವರು ನಿಸರ್ಗದ ಸೌಂದರ್ಯವನ್ನು ಸವಿದು ವಾಪಾಸದರೆ ಇನ್ನು ಕೆಲವರು ಸ್ಥಳೀಯ ನಿವಾಸಿಗಳಿಗೆ ತೊಂದರೆ ನೀಡಲು ಮುಂದಾಗುತ್ತಾರೆ. ಬೀಚ್ ನೋಡುವ ನೆಪದಲ್ಲಿ ಬರುವ ಕೆಲವರು ಪಡುಕೆರೆಯಲ್ಲಿ ರಾತ್ರಿ ಹೊತ್ತು ಅನೈತಿಕ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಅಲ್ಲದೇ ಎಲ್ಲಿಂದರಲ್ಲಿ ವಾಹನ ಪಾರ್ಕ್ ಮಾಡಿ ಸ್ಥಳೀಯರಿಗೆ ತೊಂದರೆ ನೀಡುವ ಕೆಲಸವೂ ನಡೆಯುತ್ತಿದೆ. ಇದರಿಂದ ಕಿರಿಕಿರಿ ಅನುಭವಿಸಿದ ಸ್ಥಳೀಯರು ಪೋಸ್ಟರ್ ಹಾಕುವ  ಒಂದು ನಿರ್ಣಯವನ್ನು ಕೈಗೊಂಡಿದ್ದಾರೆ. ಅದರಂತೆ  ರಾತ್ರಿ 8ರಿಂದ ಬೆಳಗ್ಗೆ 6ರ ತನಕ ಈ ಪ್ರದೇಶಕ್ಕೆ ಪ್ರವಾಸಿಗರು ಬಾರದಂತೆ ಅಲ್ಲಲ್ಲಿ ಪೋಸ್ಟರ್ ಹಾಕಿದ್ದಾರೆ.

ಸದ್ಯ ಪ್ರವಾಸಿಗರ ಮಂಗಾಟಗಳಿಗೆ ಸ್ಥಳೀಯರು ಹಾಕಿದ ಪೋಸ್ಟರ್​ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು ಪ್ರವಾಸಿಗರ ಅನೈತಿಕ ಚಟುವಟಿಕೆಗೆ ಕಡಿವಾಣ ಬಿದ್ದಂತಾಗಿದೆ. ಪಡುಕೆರೆ ಭಾಗದಲ್ಲಿ ನಡೆಯುತ್ತಿರುವ ಅನೈತಿಕ ಚಟುವಟಿಕೆಯ ಬಗ್ಗೆ ಮಲ್ಪೆ ಠಾಣಾಧಿಕಾರಿಯವರಿಗೂ ಸಹ ದೂರನ್ನು ನೀಡಲಾಗಿದ್ದು ಬುಧವಾರ ಸ್ಥಳಕ್ಕೆ ಆಗಮಿಸಿ ಸ್ಥಳೀಯರ ನಿರ್ಧಾರವನ್ನು ಅವರೂ ಕೂಡ ಬೆಂಬಲಿಸಿದ್ದಾರೆ. ಮಾತ್ರವಲ್ಲದೇ ಇನ್ನು ಮುಂದೆ ಪಡುಕೆರೆ ಬೀಚ್​ಗೆ ಪ್ರವಾಸಿಗರು ರಾತ್ರಿ 8ರ ಬಳಿಕ ಬಾರದಂತೆ ನಾವೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಒಟ್ಟಾರೆಯಾಗಿ ಜಿಲ್ಲೆಯ ಬಹುತೇಕ ಪ್ರವಾಸಿ ಸ್ಥಳಗಳಲ್ಲಿ ಈ ಸಮಸ್ಯೆ ಇದೆ. ಪ್ರವಾಸದ ನೆಪದಲ್ಲಿ ಬರುವ ಕೆಲವರು ಉಳಿದವರಿಗೂ ಅಸಹ್ಯ ಬರುವಂತೆ ನಡೆದುಕೊಳ್ಳುವುದಲ್ಲದೆ ಪರಿಸರವನ್ನು ಹಾಳು ಮಾಡುತ್ತಿದ್ದಾರೆ. ಸದ್ಯ ಮಲ್ಪೆ ಪರಿಸರದವರ ಬುದ್ಧಿವಂತಿಕೆಯಿಂದಾಗಿ ನಿತ್ಯ ಆಗುತ್ತಿದ್ದ ಕಿರಿಕಿರಿಯು ತಪ್ಪಿದಂತಾಗಿದೆ.

ಮತ್ತಷ್ಟು ಜಿಲ್ಲಾವಾರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್