AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಇನ್ನಿಲ್ಲ

ಉಡುಪಿ: ಕಳೆದ ಒಂಬತ್ತು ದಿನಗಳಿಂದ ತೀವ್ರ ಉಸಿರಾಟ ಮತ್ತು ನ್ಯೂಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ವಿಧಿವಶರಾಗಿದ್ದಾರೆ. ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳು ಅವರ ಕೊನೆಯ ಆಸೆಯಂತೆ ಉಡುಪಿಯ ಕೃಷ್ಣಮಠಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಇಹಲೋಕ ತ್ಯಜಿಸಿದ್ದಾರೆ. ಇಂದು ಶ್ರೀಗಳ ಆರೋಗ್ಯ ಕ್ಷಣದಿಂದ ಕ್ಷಣಕ್ಕೆ ಕ್ಷೀಣಿಸಿತ್ತು. ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣಿಸದ ಕಾರಣ ಅವರನ್ನ ಪೊಲೀಸ್ ಬಿಗಿಭದ್ರತೆಯಲ್ಲಿ ಆ್ಯಂಬುಲೆನ್ಸ್ ಮೂಲಕ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಮಠಕ್ಕೆ ಸ್ಥಳಾಂತರಿಸಲಾಗಿತ್ತು. ಅಲ್ಲದೆ […]

ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಇನ್ನಿಲ್ಲ
ಸಾಧು ಶ್ರೀನಾಥ್​
|

Updated on:Dec 29, 2019 | 9:55 AM

Share

ಉಡುಪಿ: ಕಳೆದ ಒಂಬತ್ತು ದಿನಗಳಿಂದ ತೀವ್ರ ಉಸಿರಾಟ ಮತ್ತು ನ್ಯೂಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ವಿಧಿವಶರಾಗಿದ್ದಾರೆ. ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳು ಅವರ ಕೊನೆಯ ಆಸೆಯಂತೆ ಉಡುಪಿಯ ಕೃಷ್ಣಮಠಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಇಹಲೋಕ ತ್ಯಜಿಸಿದ್ದಾರೆ.

ಇಂದು ಶ್ರೀಗಳ ಆರೋಗ್ಯ ಕ್ಷಣದಿಂದ ಕ್ಷಣಕ್ಕೆ ಕ್ಷೀಣಿಸಿತ್ತು. ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣಿಸದ ಕಾರಣ ಅವರನ್ನ ಪೊಲೀಸ್ ಬಿಗಿಭದ್ರತೆಯಲ್ಲಿ ಆ್ಯಂಬುಲೆನ್ಸ್ ಮೂಲಕ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಮಠಕ್ಕೆ ಸ್ಥಳಾಂತರಿಸಲಾಗಿತ್ತು. ಅಲ್ಲದೆ ಮಠದ ಕೊಠಡಿಯೊಂದರಲ್ಲಿ ಆಸ್ಪತ್ರೆಯ ಮಾದರಿಯಲ್ಲಿ 6 ವೈದ್ಯರ ತಂಡ ಶ್ರೀಗಳಿಗೆ ಚಿಕಿತ್ಸೆ ಮುಂದುವರಿಸಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ತಮ್ಮ ಭಕ್ತರನ್ನು, ಉಸಿರಾಗಿದ್ದ ಮಠವನ್ನ ಬಿಟ್ಟು ಕೊನೆಯುಸಿರೆಳೆದಿದ್ದಾರೆ.

Published On - 9:54 am, Sun, 29 December 19