AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಖಂಡ ಪ್ರತಿಜ್ಞೆ: ಪ್ರಧಾನಿ ಮೋದಿಯ ಉದ್ದನೆಯ ಕೇಶದ ಹಿಂದಿನ ಕಾರಣ ಬಿಚ್ಚಿಟ್ಟ ಪೇಜಾವರ ಶ್ರೀಗಳು

ಪ್ರಧಾನಿ ಮೋದಿ ರಾಮಮಂದಿರಕ್ಕೆ ಶಿಲಾನ್ಯಾಸ ಮಾಡಿದ್ದಾರೆ‌‌. ಜೊತೆಗೆ, ಅವರು ರಾಮಮಂದಿರದ ಸಂಪೂರ್ಣ ಜವಾಬ್ದಾರಿ ಹೊತ್ತಿದ್ದಾರೆ ಎಂದು ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥಶ್ರೀ ನಗರದಲ್ಲಿ ಇಂದು ಹೇಳಿದರು.

ಅಖಂಡ ಪ್ರತಿಜ್ಞೆ: ಪ್ರಧಾನಿ ಮೋದಿಯ ಉದ್ದನೆಯ ಕೇಶದ ಹಿಂದಿನ ಕಾರಣ ಬಿಚ್ಚಿಟ್ಟ ಪೇಜಾವರ ಶ್ರೀಗಳು
ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ (ಎಡ); ಪ್ರಧಾನಿ ಮೋದಿ (ಬಲ)
KUSHAL V
| Edited By: |

Updated on: Dec 27, 2020 | 12:14 PM

Share

ಬಾಗಲಕೋಟೆ: ಪ್ರಧಾನಿ ಮೋದಿ ರಾಮಮಂದಿರಕ್ಕೆ ಶಿಲಾನ್ಯಾಸ ಮಾಡಿದ್ದಾರೆ‌‌. ಜೊತೆಗೆ, ಅವರು ರಾಮಮಂದಿರದ ಸಂಪೂರ್ಣ ಜವಾಬ್ದಾರಿ ಹೊತ್ತಿದ್ದಾರೆ ಎಂದು ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥಶ್ರೀ ನಗರದಲ್ಲಿ ಇಂದು ಹೇಳಿದರು.

ಸಹಜವಾಗಿ ಇಂತಹ ಕಾರ್ಯದ ವೇಳೆ ಕೇಶವನ್ನು ತೆಗೆಯಲ್ಲ. ನೈತಿಕ ನೆಲೆಯಲ್ಲಿ ಮಂದಿರ ಆಗುವ ತನಕ ಕೇಶವನ್ನು ತೆಗೆಯಲ್ಲ. ಇದನ್ನು ಪ್ರಧಾನಿ ನರೇಂದ್ರ ಮೋದಿ ಪಾಲಿಸುತ್ತಿರಬಹುದು. ಅವರು ಆಧ್ಯಾತ್ಮಿಕವಾಗಿದ್ದರೆ ತಪ್ಪೇನಿಲ್ಲವಲ್ಲ ಎಂದ ಶ್ರೀಗಳು ಪ್ರಧಾನಿ ಮೋದಿ ಅವರ ಕೇಶದ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ರಾಮ ಮಂದಿರದ ನಿರ್ಮಾಣ ಸುಮಾರು ಮೂರುವರೆ ವರ್ಷಗಳು ತೆಗೆದುಕೊಳ್ಳಲಿದೆ. ಜೊತೆಗೆ, ಇದಕ್ಕೆ ಅಂದಾಜು 1,500 ಕೋಟಿ ರೂ. ವೆಚ್ಚವಾಗಲಿದೆ ಎಂದು ರಾಮ ಮಂದಿರ ಟ್ರಸ್ಟ್ ಸದಸ್ಯರಾದ ಉಡುಪಿ ಪೇಜಾವರ ಶ್ರೀಗಳು ಹೇಳಿದರು. 1,500 ಕೋಟಿಯಲ್ಲಿ ಸುಮಾರು 500 ಕೋಟಿ ರೂ. ಮಂದಿರ ನಿರ್ಮಾಣಕ್ಕೆ ಆಗಲಿದ್ದು ಉಳಿದ 1,000 ಕೋಟಿ ರೂ. ಸುತ್ತಮುತ್ತಲಿನ ಪರಿಸರದ ಅಭಿವೃದ್ಧಿ, ಯಾತ್ರಾ ನಿವಾಸ ಹಾಗೂ ಮಾರ್ಗಗಳ ನಿರ್ಮಾಣಕ್ಕೆ ಬಳಕೆಯಾಗುವುದು ಎಂದು ಸ್ವಾಮೀಜಿ ಹೇಳಿದರು.

ಪ್ರಾರಂಭದಲ್ಲಿ ಭೂಮಿ ಪರೀಕ್ಷೆ ಸವಾಲು ಆಗಿ ಹೋಯಿತು. ಅಲ್ಲಿ ಕಲ್ಲಿನ ಶಿಲಾಮಂದಿರ ನಿರ್ಮಾಣಕ್ಕೆ ಭೂಮಿ ಸಾಮರ್ಥ್ಯ ಹೊಂದಿರುಬೇಕು. ಅಲ್ಲಿ ಅಂದಾಜು 200 ಅಡಿ ವರೆಗೂ ಮರಳು ಮತ್ತು ಧೂಳು ಮಿಶ್ರತ ಮಣ್ಣಿದೆ. ಹೀಗಾಗಿ, ಮಂದಿರವನ್ನು ಹೇಗೆ ನಿರ್ಮಾಣ ಮಾಡಬೇಕು ಅಂತಾ ಪಂಚಾಂಗ ಎತ್ತಿಕೊಂಡು ಅದರ ಪರಿಶೀಲನೆ ನಡೆಸಬೇಕು ಎಂದು ಉಡುಪಿ ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.

ಹೋರಿ ಹಬ್ಬದ ವಿಶೇಷ: ಹೋರಿಗಳು ಮಿಂಚಿನ ಓಟ ಓಡಿದ್ದು ಎಲ್ಲಿ ಗೊತ್ತಾ?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?