AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದುವೆ, ಜಾತ್ರೆಗೆ ಜನ ಸೇರುತ್ತಾರೆ.. ನಾವು ಮಾತ್ರ 10ನೇ ಕ್ಲಾಸ್​ ಮಕ್ಕಳಿಗೆ ಎಕ್ಸಾಂ ಮಾಡಬಾರದಾ?’

ಕೊವಿಡ್ ನಿಯಮ ಉಲ್ಲಂಘಿಸಿ ಖಾಸಗಿ ಶಾಲೆಯಲ್ಲಿ ಪರೀಕ್ಷೆ ನಡೆಸಿರುವ ಘಟನೆ ನಗರದ ಕೊರಂಗ್ರಪಾಡಿಯಲ್ಲಿರುವ MET ಶಾಲೆಯಲ್ಲಿ ಬೆಳಕಿಗೆ ಬಂದಿದೆ. 10ನೇ ತರಗತಿ ವಿದ್ಯಾರ್ಥಿಗಳಿಗೆ ಪೂರ್ವಸಿದ್ಧತಾ ಪರೀಕ್ಷೆ ನಡೆಸಲಾಯಿತು ಎಂದು ತಿಳಿದುಬಂದಿದೆ.

‘ಮದುವೆ, ಜಾತ್ರೆಗೆ ಜನ ಸೇರುತ್ತಾರೆ.. ನಾವು ಮಾತ್ರ 10ನೇ ಕ್ಲಾಸ್​ ಮಕ್ಕಳಿಗೆ ಎಕ್ಸಾಂ ಮಾಡಬಾರದಾ?’
‘ಮದುವೆ, ಜಾತ್ರೆಗಳಿಗೆ ಜನ್ರು ಸೇರುತ್ತಾರೆ.. ನಾವು ಮಕ್ಕಳಿಗೆ ಎಕ್ಸಾಂ ಮಾಡಬಾರದಾ?’
KUSHAL V
| Edited By: |

Updated on: Dec 04, 2020 | 2:29 PM

Share

ಉಡುಪಿ: ಕೊವಿಡ್ ನಿಯಮ ಉಲ್ಲಂಘಿಸಿ ಖಾಸಗಿ ಶಾಲೆಯಲ್ಲಿ ಪರೀಕ್ಷೆ ನಡೆಸಿರುವ ಘಟನೆ ನಗರದ ಕೊರಂಗ್ರಪಾಡಿಯಲ್ಲಿರುವ MET ಶಾಲೆಯಲ್ಲಿ ಬೆಳಕಿಗೆ ಬಂದಿದೆ. 10ನೇ ತರಗತಿ ವಿದ್ಯಾರ್ಥಿಗಳಿಗೆ ಪೂರ್ವಸಿದ್ಧತಾ ಪರೀಕ್ಷೆ ನಡೆಸಲಾಯಿತು ಎಂದು ತಿಳಿದುಬಂದಿದೆ.

ಸಾಮಾನ್ಯವಾಗಿ  SSLC ಫಲಿತಾಂಶ ಪ್ರಕಟವಾದಾಗ ತಾನು ಮೊದಲ ಸ್ಥಾನದಲ್ಲಿ ಕಂಗೊಳಿಸುವ ಉಡುಪಿ ಜಿಲ್ಲೆಯಲ್ಲಿ ಇಂಥಾ ಯಡವಟ್ಟು ಪ್ರಸಂಗ ನಡೆದಿದೆ. ಅದೇನು ಕೊರೊನಾ ಬಗ್ಗೆ ನಿರ್ಲಕ್ಷ್ಯವೋ ಅಥವಾ ತಮ್ಮ ಶಾಲಾ ಮಕ್ಕಳ ಬಗೆಗಿನ ವಿಶೇಷ ಕಾಳಜಿಯೋ ಅಂತೂ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಎಲ್ಲ ವಿದ್ಯಾರ್ಥಿಗಳನ್ನು ಕೊಠಡಿಗಳಲ್ಲಿ ಅಕ್ಷರಶಃ ಕೂಡಿ ಹಾಕಿ ಪರೀಕ್ಷೆ ಕಂಡಕ್ಟ್​ ಮಾಡಿದ್ದಾರೆ.

ಏನಾಯಿತೆಂದ್ರೆ.. ಶಾಲಾ ಕೊಠಡಿಯ ಬಾಗಿಲು ಮುಚ್ಚಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ಪೋಷಕರು ಶುಲ್ಕ ಪಾವತಿಸಿದ್ದಾರೆ, ಹೀಗಾಗಿ ಪರೀಕ್ಷೆ ಏರ್ಪಡಿಸಿದ್ದೇವೆ. ಮದುವೆ, ಜಾತ್ರೆಗಳಿಗೆ ಜನರು ಸೇರುತ್ತಾರೆ. ನಾವು ಮಕ್ಕಳಿಗೆ ಪರೀಕ್ಷೆ ಮಾಡಬಾರದಾ? ಎಂದು ಶಾಲೆಯ ಮುಖ್ಯೋಪಾಧ್ಯಾಯಿನಿ ಜುನೈದ್ ಸುಲ್ತಾನಾ ವಾದ ಮಾಡಿದರು. ಜೊತೆಗೆ, ಮಕ್ಕಳಿಗೆ ರೋಗನಿರೋಧಕ ಶಕ್ತಿಯಿದೆ. ಅದರ ಬಗ್ಗೆ ನಾವು ತಲೆಕೆಡಿಸಿಕೊಳ್ಳಬೇಕಾಗಿಲ್ಲ ಎಂದು ಸಹ ಹೇಳಿದರು.

ಮಕ್ಕಳ ಆರೋಗ್ಯದ ಜೊತೆ ಚೆಲ್ಲಾಟವಾಡಿದ ಖಾಸಗಿ ಶಾಲೆ ರಾಜ್ಯ ಸರ್ಕಾರ ಮತ್ತು ಜಿಲ್ಲಾಧಿಕಾರಿಯ ಆದೇಶವನ್ನು ಉಲ್ಲಂಘಿಸಿ ಪರೀಕ್ಷೆ ನಡೆಸಿದರು. ಎಕ್ಸಾಂ ನಡೆಯುತ್ತಿರುವ ಬಗ್ಗೆ ಯಾರಿಗೂ ಮಾಹಿತಿ ಸಿಗಬಾರದೆಂದು ಹೊರಗಿನಿಂದ ಚಿಲಕ ಹಾಕಿ ಒಳಗಡೆ ಪರೀಕ್ಷೆ ನಡೆಸಲಾಯಿತು.

ಇತ್ತ, ಪರೀಕ್ಷೆ ನಡೆಸುತ್ತಿದ್ದ ಶಾಲೆಗೆ ತಹಶೀಲ್ದಾರ್ ಭೇಟಿ ಕೊಟ್ಟು, ಪರಿಶೀಲನೆ ನಡೆಸಿದರು. ಈ ವೇಳೆ, ಪರೀಕ್ಷೆ ಮಾಡದಂತೆ ಶಾಲೆಯ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದರು. ನಂತರ, ವಿದ್ಯಾರ್ಥಿಗಳನ್ನು ಮನೆಗೆ ಕಳಿಸಿದ ತಹಶೀಲ್ದಾರ್ ಅಧಿಕಾರಿಗಳ ಗಮನಕ್ಕೆ ತರದೆ ಪರೀಕ್ಷೆ ಮಾಡಲಾಗಿದೆ. ಶಾಲಾ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸುತ್ತೇವೆ. ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ ಎಂದು ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಹೇಳಿದರು.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ