Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಜಿಲ್ಲೆಯಲ್ಲಿ ಹೆಚ್ಚಿದ ಒಮಿಕ್ರಾನ್ ಭೀತಿ; ಶನಿವಾರ ಒಂದೇ ದಿನ 14 ಮಂದಿಗೆ ಸೋಂಕು ಧೃಡ

ಪಾಸಿಟಿವ್ ಬಂದ ವಿದ್ಯಾರ್ಥಿಗಳೆಲ್ಲ ಹೊರ ರಾಜ್ಯದವರು. ಪಾಸಿಟಿವ್ ಬಂದ 14  ಮಂದಿಯ ವರದಿಯನ್ನು ಬೆಂಗಳೂರಿಗೆ ರವಾನೆ ಮಾಡಲಾಗಿದೆ. ಓಮಿಕ್ರಾನ್ ಶಂಕೆ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಗಂಟಲ ದ್ರವವನ್ನು ಕೂಡ ಬೆಂಗಳೂರಿಗೆ ಕಳುಹಿಸಿದೆ.

ಉಡುಪಿ ಜಿಲ್ಲೆಯಲ್ಲಿ ಹೆಚ್ಚಿದ ಒಮಿಕ್ರಾನ್ ಭೀತಿ; ಶನಿವಾರ ಒಂದೇ ದಿನ 14 ಮಂದಿಗೆ ಸೋಂಕು ಧೃಡ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on:Dec 26, 2021 | 11:03 AM

ಉಡುಪಿ: ಜಿಲ್ಲೆಯಲ್ಲಿ ಓಮಿಕ್ರಾನ್ (Omicron) ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಮಣಿಪಾಲದಲ್ಲಿ ಒಂದೇ ವಾರದಲ್ಲಿ 18 ಕೊರೊನಾ ಪಾಸಿಟಿವ್​ (Coronavirus) ಪ್ರಕರಣ ದಾಖಲಾಗಿದೆ. ಅದರಲ್ಲೂ ನಿನ್ನೆ (ಡಿಸೆಂಬರ್​ 25) ಶನಿವಾರ 14 ಜನರಲ್ಲಿ ಕೊವಿಡ್ ಸೋಂಕು​ ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳಲ್ಲೇ ಅಧಿಕ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಮಣಿಪಾಲದ 09 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಧೃಡಪಟ್ಟಿದೆ.

ರ್ಯಾಂಡಮ್ ಪರೀಕ್ಷೆಯಲ್ಲಿ ಓರ್ವ ಎಂಐಟಿ ವಿದ್ಯಾರ್ಥಿಗೆ ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಪ್ರಾಥಮಿಕ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಿತ್ತು. ಪ್ರಾಥಮಿಕ ಸಂಪರ್ಕಿತ 09 ಮಂದಿಗೂ ಇದೀಗ ಕೊರೊನಾ ಪಾಸಿಟಿವ್​ ಬಂದಿದೆ. ಸದ್ಯ ಕಾಲೇಜಿನ ಮತ್ತಷ್ಟು ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದೆ.

ಪಾಸಿಟಿವ್ ಬಂದ ವಿದ್ಯಾರ್ಥಿಗಳೆಲ್ಲ ಹೊರ ರಾಜ್ಯದವರು. ಪಾಸಿಟಿವ್ ಬಂದ 14  ಮಂದಿಯ ವರದಿಯನ್ನು ಬೆಂಗಳೂರಿಗೆ ರವಾನೆ ಮಾಡಲಾಗಿದೆ. ಓಮಿಕ್ರಾನ್ ಶಂಕೆ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಗಂಟಲ ದ್ರವವನ್ನು ಕೂಡ ಬೆಂಗಳೂರಿಗೆ ಕಳುಹಿಸಿದೆ. ವಾರದ ಹಿಂದೆಯಷ್ಟೇ ವೃದ್ದ ದಂಪತಿಗಳಲ್ಲಿ ಓಮಿಕ್ರಾನ್ ಪತ್ತೆಯಾಗಿತ್ತು. ಇದೀಗ ಒಂದೇ ಕಾಲೇಜಿನ 14 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದ ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯಲ್ಲಿ ಆತಂಕ ಹೆಚ್ಚಾಗಿದೆ. ಈ ಬಗ್ಗೆ ಎಚ್ಚರಿಕೆ ವಹಿಸಿರುವ ಜಿಲ್ಲಾಡಳಿತ ಮಣಿಪಾಲ ಎಂಐಟಿ ಪರಿಸರವನ್ನು ಮೈಕ್ರೋ ಕಂಟೈನ್​ಮೆಂಟ್​ ಝೋನ್ ಆಗಿ ಮಾಡಿದೆ ಎಂದು ಉಡುಪಿಯ ಡಿಎಚ್ಒ ಡಾ. ನಾಗಭೂಷಣ ಉಡುಪ ಮಾಹಿತಿ ನೀಡಿದ್ದಾರೆ.

ಭಾರತದಲ್ಲಿ ಒಂದೇ ದಿನ 6987 ಕೊವಿಡ್ ಪ್ರಕರಣ ಪತ್ತೆ ಭಾರತದಲ್ಲಿ ಇಲ್ಲಿಯವರೆಗೆ 422 ಒಮಿಕ್ರಾನ್ ರೂಪಾಂತರದ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. 6987 ಮಂದಿ ಕೊವಿಡ್ -19 (ಕೊವಿಡ್-19) ಧನಾತ್ಮಕ ಪರೀಕ್ಷೆ ಮಾಡಿದ್ದು ಕೊವಿಡ್ ಪ್ರಕರಣಗಳ ಸಂಖ್ಯೆ 34,786,802 ಕ್ಕೆ ತಲುಪಿದೆ. ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಮಹಾರಾಷ್ಟ್ರ ಅತಿ ಹೆಚ್ಚು ಒಮಿಕ್ರಾನ್ ಸೋಂಕುಗಳನ್ನು ವರದಿ ಮಾಡಿದೆ. ಇಲ್ಲಿ 108 ಪ್ರಕರಣಗಳಿದ್ದು ನಂತರ ದೆಹಲಿ (79), ಗುಜರಾತ್ (43), ತೆಲಂಗಾಣ (41), ಕೇರಳ (38) , ತಮಿಳುನಾಡು (34), ಕರ್ನಾಟಕ (31) ಮತ್ತು ರಾಜಸ್ಥಾನ (22) ಪ್ರಕರಣಗಳು ವರದಿ ಆಗಿವೆ. ಒಟ್ಟಾರೆಯಾಗಿ 13 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿ (ದೆಹಲಿ, ಜಮ್ಮು ಮತ್ತು ಕಾಶ್ಮೀರ, ಚಂಡೀಗಢ ಮತ್ತು ಲಡಾಖ್) ಹೊಸ ಕೊರೊನಾವೈರಸ್ ರೂಪಾಂತರದ ರೋಗಿಗಳು ಪತ್ತೆಯಾಗಿದ್ದಾರೆ. ಈ 422 ರೋಗಿಗಳಲ್ಲಿ 130 ರೋಗಿಗಳ ಪರೀಕ್ಷೆಯಲ್ಲಿ ನೆಗೆಟಿವ್ ಬಂದ ನಂತರ ಬಿಡುಗಡೆ ಮಾಡಲಾಗಿದೆ ಎಂದು ಡೇಟಾ ತೋರಿಸಿದೆ.

15-18 ವರ್ಷದೊಳಗಿನ ಮಕ್ಕಳಿಗೆ ಕೊವಿಡ್-19 ವಿರುದ್ಧ ಲಸಿಕೆಯನ್ನು ಜನವರಿ 3 ರಿಂದ ಪ್ರಾರಂಭಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಿಸಿದರು, ಆದರೆ ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರಿಗೆ “ಮುಂಜಾಗರೂಕತೆ ಲಸಿಕೆ” ಅನ್ನು ಜನವರಿ 10 ರಿಂದ ನಿರ್ವಹಿಸಲಾಗುವುದು, ಹೆಚ್ಚುತ್ತಿರುವ ಕೊವಿಡ್ ಪ್ರಕರಣಗಳ ಮಧ್ಯೆ ನಿರ್ಧಾರಗಳು ಬರುತ್ತವೆ.  ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಅವರು ಮುಂದಿನ ವರ್ಷ ಜನವರಿ 10 ರಿಂದ ಅವರ ವೈದ್ಯರ ಸಲಹೆಯ ಮೇರೆಗೆ 60 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗೆ ಮತ್ತು ಕೊಮೊರ್ಬಿಡಿಟಿ ಇರುವವರಿಗೆ ಮುಂಜಾಗರೂಕತೆ ಲಸಿಕೆ ಲಭ್ಯವಿರುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Omicron ಭಾರತದಲ್ಲಿ ಒಂದೇ ದಿನ 6987 ಕೊವಿಡ್ ಪ್ರಕರಣ ಪತ್ತೆ; ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 422ಕ್ಕೆ ಏರಿಕೆ

ದೇಶದಲ್ಲಿ ಏರಿಕೆಯಾಗುತ್ತಿರುವ ಒಮಿಕ್ರಾನ್​ ಸೋಂಕಿತರ ಸಂಖ್ಯೆ; ಇಂದು ಪ್ರಧಾನಿ ಮೋದಿಯವರಿಂದ ಪರಿಶೀಲನಾ ಸಭೆ

Published On - 10:57 am, Sun, 26 December 21

ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ