AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Linga Mudra Stone: ಉಡುಪಿಯಲ್ಲಿ 400 ವರ್ಷಗಳಷ್ಟು ಹಳೆಯದಾದ ‘ಲಿಂಗ ಮುದ್ರೆ’ ಕಲ್ಲು ಪತ್ತೆ!

ಕಲ್ಲಿನ ಮೇಲಿನ ಸಂದೇಶವು ಸೂರ್ಯ ಮತ್ತು ಚಂದ್ರರಿರುವವರೆಗೂ ಅಂದಿನ ರಾಜನ ಸಾಮ್ರಾಜ್ಯವು ಜೀವಿಸುತ್ತದೆ ಎಂದು ಸೂಚಿಸುತ್ತದೆ

Linga Mudra Stone: ಉಡುಪಿಯಲ್ಲಿ 400 ವರ್ಷಗಳಷ್ಟು ಹಳೆಯದಾದ 'ಲಿಂಗ ಮುದ್ರೆ' ಕಲ್ಲು ಪತ್ತೆ!
Linga Mudra StoneImage Credit source: News Karnataka
ನಯನಾ ಎಸ್​ಪಿ
|

Updated on: Mar 14, 2023 | 5:38 PM

Share

ಉಡುಪಿ: ಕರ್ನಾಟಕದ ಉಡುಪಿ (Udupi) ಜಿಲ್ಲೆಯಲ್ಲಿ ಸೂರ್ಯ, ಚಂದ್ರ, ಶಿವಲಿಂಗ (Shivalinga) ಮತ್ತು ನಂದಿಯ ಶಾಸನಗಳಿರುವ ‘ಲಿಂಗ ಮುದ್ರೆ’ ಕಲ್ಲು ಪತ್ತೆಯಾಗಿದೆ ಎಂದು ಅಧಿಕಾರಿಗಳು ಸೋಮವಾರ (ಮಾರ್ಚ್ 13) ತಿಳಿಸಿದ್ದಾರೆ. ಕುಂದಾಪುರ (Kundapura) ತಾಲೂಕಿನ ಬಸ್ರೂರು (Basrur) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಶೋಕ ಉದ್ಯಾನವನದಲ್ಲಿ ಸಮತಟ್ಟು ಕೆಲಸವಾಗುತ್ತಿರುವಾಗ ಸುಮಾರ 400 ವರ್ಷಗಳಷ್ಟು ಹಳೆಯದಾದ ಕಲ್ಲು ಪತ್ತೆಯಾಗಿದೆ. ಸ್ಥಳೀಯರ ಸಹಾಯದಿಂದ ಇದನ್ನು ಹೊರ ತೆಗೆಯಲಾಗಿದೆ.

ಈ ವಿಷಯವನ್ನು ಇತಿಹಾಸಕಾರರೊಬ್ಬರ ಗಮನಕ್ಕೆ ತರಲಾಯಿತು. ಕಲ್ಲಿನ ಮೇಲಿನ ಸಂದೇಶವು ಸೂರ್ಯ ಮತ್ತು ಚಂದ್ರರಿರುವವರೆಗೂ ಅಂದಿನ ರಾಜನ ಸಾಮ್ರಾಜ್ಯವು ಜೀವಿಸುತ್ತದೆ ಎಂದು ಸೂಚಿಸುತ್ತದೆ ಎಂದು ಇತಿಹಾಸ ಸಂಶೋಧಕ ಪ್ರೊ. ಟಿ. ಮುರುಗೇಶಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಹಿಂದಿನ ಶತಮಾನದಲ್ಲಿ ಶೈವರು ಶಿವನನ್ನು, ವೈಷ್ಣವರು ವಿಷ್ಣುವನ್ನು ಮತ್ತು ಜೈನರು ತೀರ್ಥಂಕರರನ್ನು ಪೂಜಿಸುವುದು ಸಾಮಾನ್ಯವಾಗಿತ್ತು. ಶೈವರು ತಮ್ಮ ಭೂ ಗಡಿಯಲ್ಲಿ ಲಿಂಗ ಮುದ್ರೆಯ ಕಲ್ಲುಗಳನ್ನು ಸ್ಥಾಪಿಸಿದರೆ ವೈಷ್ಣವರು ವಾಮನಮುದ್ರೆ ಕಲ್ಲುಗಳನ್ನು ಹಾಕುತ್ತಿದ್ದರು ಮತ್ತು ಜೈನರು ಮುಕ್ಕೊಡೆ ಕಲ್ಲುಗಳನ್ನು ಹಾಕುತ್ತಿದ್ದರು. ಇದು ಅವರ ನೆಲದ ಗಡಿಗಳನ್ನು ಗುರುತಿಸುವ ಮಾರ್ಗವಾಗಿತ್ತು. ಇದಕ್ಕೆ ಅನುಗುಣವಾಗಿ ಬಸ್ರೂರಿನಲ್ಲಿ ದೊರೆತ ಲಿಂಗ ಮುದ್ರೆಯ ಕಲ್ಲುಗಳನ್ನು ಗಡಿ ಗುರುತಿಸಲು ಇಡಲಾಗಿದೆ.” ” ಎಂದು ಪ್ರೊ. ಮುರುಗೇಶಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಲ್ಲಾ ಬಗ್ಗೆ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ: ಅವರ ಮಾತಿಗೂ ಮೆದುಳಿಗೂ ಕನೆಕ್ಷನ್ ಇಲ್ಲ ಎಂದ ಖಾದರ್

ಇತಿಹಾಸದ ಶಿಲಾ ಶಾಸನಗಳು, ಯುದ್ಧ ಸ್ಮಾರಕಗಳು, ಗಡಿಗಲ್ಲುಗಳನ್ನು ಸಂರಕ್ಷಿಸಲು ಸಾರ್ವಜನಿಕರ ಸಹಕಾರ ಮತ್ತು ಬೆಂಬಲ ಅಗತ್ಯವಾಗಿದ್ದು, ನಮ್ಮ ನೆಲದ ಇತಿಹಾಸದಲ್ಲಿ ದಾಖಲೆಯನ್ನು ನಮೂದಿಸಬೇಕು ಎಂದು ಮುರುಗೇಶಿ ಹೇಳಿದರು.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ