AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ದೀಪಾವಳಿ ಪೂಜೆ ವೇಳೆ ಅಗ್ನಿ ಅವಘಡ, 7 ಮೀನುಗಾರಿಕಾ ಹಡಗುಗಳು ಬೆಂಕಿಗಾಹುತಿ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಬಂದರಿನಲ್ಲಿ ದೀಪಾವಳಿ ಪ್ರಯುಕ್ತ ಪೂಜೆ ನಡೆಯುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಏಳು ಮೀನುಗಾರಿಕಾ ಹಡಗುಗಳು ಬೆಂಕಿಗಾಹುತಿಯಾಗಿವೆ.

ಉಡುಪಿ: ದೀಪಾವಳಿ ಪೂಜೆ ವೇಳೆ ಅಗ್ನಿ ಅವಘಡ, 7 ಮೀನುಗಾರಿಕಾ ಹಡಗುಗಳು ಬೆಂಕಿಗಾಹುತಿ
ಬೋಟ್​​ನಲ್ಲಿ ಬೆಂಕಿ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Nov 13, 2023 | 2:44 PM

Share

ಉಡುಪಿ, (ನವೆಂಬರ್ 13): ಉಡುಪಿ (Udupi) ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಲಂಗರು ಹಾಕಿದ್ದ ಬೋಟ್​​ನಲ್ಲಿ ಬೆಂಕಿ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಅಕ್ಕ ಪಕ್ಕದ ಮೀನುಗಾರಿಕಾ ಬೋಟುಗಳಿಗೆ ಬೆಂಕಿ ವ್ಯಾಪಿಸಿದ್ದು, ಏಳು ಹಡಗುಗಳು ಬೆಂಕಿಗಾಹುತಿಯಾಗಿವೆ. ದೀಪಾವಳಿ ಪ್ರಯುಕ್ತ ಇಂದು ಗಂಗೊಳ್ಳಿ ಬಂದರಿನಲ್ಲಿ(gangolli port)  ಪೂಜೆ ನಡೆಯುತ್ತಿದ್ದ ವೇಳೆ ಏಕಾಏಕಿ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇನ್ನು ವಿಷಯ ತಿಳಿದು ಕೂಡಲೇ ಸ್ಥಳೀಯ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಚರಣೆ ನಡೆಸಿದ್ದು, ದುರಂತದಲ್ಲಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ. ಪಟಾಕಿ ಸಿಡಿದು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದ್ರೆಮ ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ: ಉಡುಪಿ: ನಾಲ್ವರಿಗೂ ಒಂದೇ ರೀತಿಯಲ್ಲಿ ಚೂರಿ ಇರಿದು ಹತ್ಯೆ, ಹಂತಕನ ಬಂಧನಕ್ಕೆ 5 ತಂಡ ರಚನೆ

ದುರಸ್ತಿ ಕಾರ್ಯ ನಡೆಯುತ್ತಿದ್ದ ವೇಳೆ ಬೋಟುಗಳಿಗೆ ಅಗ್ನಿ ಅವಘಡ ಸಂಭವಿಸಿದೆ. ಸಮುದ್ರದಿಂದ ಬೋಟನ್ನು ಮೇಲಕ್ಕೆತ್ತಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಬೋಟ್ ದುರಸ್ತಿ ಮತ್ತು ಪೇಂಟಿಂಗ್ ಕಾರ್ಯಕ್ಕೆ ದಡದಲ್ಲಿ ಇರಿಸಲಾಗಿತ್ತು. ಆರಂಭದಲ್ಲಿ ಬೋಟ್ ಮೇಲೆ ಹಾಸಿದ್ದ ತೆಂಗಿನ ಗರಿಗಳಿಗೆ ಬೆಂಕಿ ತಗುಲಿದೆ. ಬಳಿಕ ಬೆಂಕಿ ಅಕ್ಕ-ಪಕ್ಕದಲ್ಲಿದ್ದ ಹಡಗುಗಳಿಗೆ ಬೆಂಕಿ ವ್ಯಾಪಿಸಿಕೊಂಡಿದೆ.

ಇನ್ನು ಇದಕ್ಕೆ ಮೀನುಗಾರರರು ಬಂದರು ಅಧಿಕಾರಿಗಳ ವಿರುದ್ಧ ಸಿಡಿದೆದಿದ್ದು, ಬಂದರುಗಳನ್ನು ಸರಿಯಾಗಿ ಶುಚಿತ್ವ ಮಾಡದಿರುವುದೇ ಬೆಂಕಿ ಅವಘಡಕ್ಕೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:30 am, Mon, 13 November 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ