AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜುತ್ತಾ ಜೀವ ಉಳಿಸಿಕೊಂಡ ಮೀನುಗಾರ

ಬೋಟ್​ನಿಂದ ಆಯತಪ್ಪಿ ಅರಬ್ಬಿ ಸಮುದ್ರಕ್ಕೆ ಬಿದಿದ್ದ ಮೀನುಗಾರನನ್ನು ಬೈಂದೂರು ತಾಲೂಕಿನ ಗಂಗೊಳ್ಳಿ ಮೂಲದ ಸಾಗರ್ ಬೋಟ್​​ನ ಮೀನುಗಾರು 43 ಗಂಟೆಗಳ ಬಳಿಕ ರಕ್ಷಣೆ ಮಾಡಿದ್ದಾರೆ.

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Nov 10, 2023 | 2:56 PM

Share

ಉಡುಪಿ ನ.10: ಬೋಟ್​ನಿಂದ (Boat) ಆಯತಪ್ಪಿ ಅರಬ್ಬಿ ಸಮುದ್ರಕ್ಕೆ (Arabian Sea) ಬಿದಿದ್ದ ಮೀನುಗಾರನನ್ನು ಬೈಂದೂರು (Baindur) ತಾಲೂಕಿನ ಗಂಗೊಳ್ಳಿ ಮೂಲದ ಸಾಗರ್ ಬೋಟ್​​ನ ಮೀನುಗಾರು 43 ಗಂಟೆಗಳ ಬಳಿಕ ರಕ್ಷಣೆ ಮಾಡಿದ್ದಾರೆ. ತಮಿಳುನಾಡಿನ 8 ಜನರ ತಂಡ ಆಳ ಸಮುದ್ರ ಮೀನುಗಾರಿಕೆಗೆ ಅರಬ್ಬಿ ಸಮುದ್ರಕ್ಕೆ ಇಳಿದಿದ್ದರು. ಈ ತಂಡದಲ್ಲಿ ಇದ್ದ ಮುರುಘನ್​ (25) ಎಂಬ ಮೀನುಗಾರ (Fisherman) ಶನಿವಾರ ರಾತ್ರಿ ಮೂತ್ರ ವಿಸರ್ಜನೆಗೆ ಬೋಟ್​ನ ಅಂಚಿಗೆ ಹೋಗುತ್ತಾನೆ. ಈ ವೇಳೆ ಜೋರಾದ ಗಾಳಿಗೆ ಮುರುಘನ್​ ಆಯತಪ್ಪಿ ಸಮುದ್ರದಲ್ಲಿ ಬೀಳುತ್ತಾನೆ.

ಮುರುಘನ್​ ಸಮುದ್ರದಲ್ಲಿ ಬಿದ್ದಿರುವುದು ಉಳಿದ ಮೀನುಗಾರರಿಗೆ ತಿಳಿದಿರುವುದಿಲ್ಲ. ಎಷ್ಟು ಹೊತ್ತಾದರೂ ಮುರುಘನ್ ​ಒಳಗಡೆ ಬಾರದಿದ್ದರಿಂದ ಅನುಮಾನಗೊಂಡ ಉಳಿದ ಮೀನುಗಾರರು ಸಮುದ್ರದಲ್ಲಿ ಮುರುಘನನ್ನು ಹುಡುಕಲು ಆರಂಭಿಸುತ್ತಾರೆ. ಆದರೆ ಎರಡು ದಿನ ಕಳೆದರೂ ಮುರುಘನ್​ಪತ್ತೆಯಾಗಲಿಲ್ಲ. ಕೊನೆಗೆ ತಮಿಳುನಾಡು ಮೀನುಗಾರರು ಮುರುಘನ್​ ಮೃತಪಟ್ಟಿದ್ದಾನೆ ಎಂದು ಮಾಲಿಕನಿಗೆ ತಿಳಿಸುತ್ತಾರೆ.

ಇದನ್ನೂ ಓದಿ: ಸಮುದ್ರದಲ್ಲಿ ಮುಳುಗುತ್ತಿದ್ದ 3 ಯುವಕರ ರಕ್ಷಿಸಿದ ಲೈಫ್‌ಗಾರ್ಡ್ ಸಿಬ್ಬಂದಿ: ಪ್ರಾಣಾಪಾಯದಿಂದ ಪಾರು

ಆದರೆ ಮುರುಘನ್​ ಜೀವ ಉಳಿಸಿಕೊಳ್ಳಲು ಸಮುದ್ರದಲ್ಲೇ ಈಜುತ್ತಿರುತ್ತಾನೆ. ಇಂದು (ನ.10) ರಂದು ಗಂಗೊಳ್ಳಿ ಮೂಲದ ಸಾಗರ್ ಬೋಟ್​​ನ ಮೀನುಗಾರು, ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯುತ್ತಾರೆ. ಗಂಗೊಳ್ಳಿಯಿಂದ ಸುಮಾರು 14 ನಾಟಿಕಲ್ ಮೈಲ್ ದೂರ ಹೋದಾಗ ಮುರುಘನ್​​ನನ್ನು ಕಾಣುತ್ತಾನೆ. ಗಂಗೊಳ್ಳಿ ಮೀನುಗಾರರು ಮೀನು ಅಂದುಕೊಂಡು ಮುರುಘನ್​ ಬಳಿ ಹೋದಾಗ, ಆಶ್ಚರ್ಯವಾಗುತ್ತದೆ. ಮೀನಲ್ಲ ಮನುಷ್ಯನೆಂದು ತಿಳಿಯುತ್ತದೆ.

ಕೊನೆಗೆ ಗಂಗೊಳ್ಳಿ ಮೀನುಗಾರರು ಮುರುಘನ್​ನನ್ನು ರಕ್ಷಣೆ ಮಾಡುತ್ತಾರೆ. ಜೀವ ಉಳಿಸಿಕೊಳ್ಳಲು ಸತತ 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜಿ ಮುರುಘನ್​ ನಿತ್ರಾಣಗೊಂಡಿದ್ದನು. ಸರಿಸುಮಾರು ಎರಡು ದಿನಗಳ ಕಾಲ ನಿರಂತರವಾಗಿ ಈಜಿ ಬಸವಳಿದಿದ್ದ ಮೀನುಗಾರ ಮುರುಘನ್​​ನನ್ನು ರಕ್ಷಣೆ ಮಾಡಲಾಗಿದೆ. ಮುರುಘನ್​​ಗೆ ಗಂಗೊಳ್ಳಿ ಮೀನುಗಾರರು ಪ್ರಥಮ ಚಿಕಿತ್ಸೆ ನೀಡುತ್ತಾರೆ. ಸಮುದ್ರಕ್ಕೆ ಬಿದ್ದು ಮುರುಘನ್ ಮೃತಪಟ್ಟಿದ್ದಾನೆ ಎಂದು ಶವ ಹುಡುಕುತ್ತಿದ್ದ ತಮಿಳುನಾಡಿನ ಮೀನುಗಾರರ ತಂಡಕ್ಕೆ ಈತ ಬದುಕಿದ್ದನ್ನು ಕಂಡು ಆಶ್ಚರ್ಯವಾಗುತ್ತದೆ. ಬಳಿಕ ಗಂಗೊಳ್ಳಿ ಮೀನುಗಾರರು ಮುರುಘನ್​ನನ್ನು ತಮಿಳುನಾಡು ಮೀನುಗಾರರಿಗೆ ಒಪ್ಪಿಸುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:53 am, Fri, 10 November 23

Follow Us
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ
LPG ಕೊರತೆ: ಬ್ಲ್ಯಾಕ್​​ ಮಾರ್ಕೆಟ್‌ನಲ್ಲಿ ಸಿಲಿಂಡರ್​​ ದರ 4 ಸಾವಿರ ರೂ.?
LPG ಕೊರತೆ: ಬ್ಲ್ಯಾಕ್​​ ಮಾರ್ಕೆಟ್‌ನಲ್ಲಿ ಸಿಲಿಂಡರ್​​ ದರ 4 ಸಾವಿರ ರೂ.?
ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ 2 ಸಾವು
ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ 2 ಸಾವು
ಕುಡಿದು ವಾಹನ ಓಡಿಸಿದ್ದಕ್ಕೆ ಕ್ಯಾಂಟರ್ ಚಾಲಕನಿಗೆ ಥಳಿಸಿದ ಗ್ರಾಮಸ್ಥರು
ಕುಡಿದು ವಾಹನ ಓಡಿಸಿದ್ದಕ್ಕೆ ಕ್ಯಾಂಟರ್ ಚಾಲಕನಿಗೆ ಥಳಿಸಿದ ಗ್ರಾಮಸ್ಥರು
ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ
ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ
‘ಲವ್ ಮಾಕ್ಟೇಲ್ 3’ ಪ್ರೀಮಿಯರ್ ಶೋ ಬಗ್ಗೆ ಮಾಹಿತಿ ಕೊಟ್ಟ ಮಿಲನಾ 
‘ಲವ್ ಮಾಕ್ಟೇಲ್ 3’ ಪ್ರೀಮಿಯರ್ ಶೋ ಬಗ್ಗೆ ಮಾಹಿತಿ ಕೊಟ್ಟ ಮಿಲನಾ 
ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್
ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್
ಶುಭ ಕಾರ್ಯಗಳಲ್ಲಿ ಮೊದಲಿಗೆ ದೀಪವನ್ನ ಬೆಳಗೋದು ಯಾಕೆ?
ಶುಭ ಕಾರ್ಯಗಳಲ್ಲಿ ಮೊದಲಿಗೆ ದೀಪವನ್ನ ಬೆಳಗೋದು ಯಾಕೆ?
ಇಂದು ಈ ರಾಶಿಯವರ ಸಂಬಳ ಹೆಚ್ಚಾಗುತ್ತದೆ
ಇಂದು ಈ ರಾಶಿಯವರ ಸಂಬಳ ಹೆಚ್ಚಾಗುತ್ತದೆ