AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜುತ್ತಾ ಜೀವ ಉಳಿಸಿಕೊಂಡ ಮೀನುಗಾರ

ಬೋಟ್​ನಿಂದ ಆಯತಪ್ಪಿ ಅರಬ್ಬಿ ಸಮುದ್ರಕ್ಕೆ ಬಿದಿದ್ದ ಮೀನುಗಾರನನ್ನು ಬೈಂದೂರು ತಾಲೂಕಿನ ಗಂಗೊಳ್ಳಿ ಮೂಲದ ಸಾಗರ್ ಬೋಟ್​​ನ ಮೀನುಗಾರು 43 ಗಂಟೆಗಳ ಬಳಿಕ ರಕ್ಷಣೆ ಮಾಡಿದ್ದಾರೆ.

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Nov 10, 2023 | 2:56 PM

Share

ಉಡುಪಿ ನ.10: ಬೋಟ್​ನಿಂದ (Boat) ಆಯತಪ್ಪಿ ಅರಬ್ಬಿ ಸಮುದ್ರಕ್ಕೆ (Arabian Sea) ಬಿದಿದ್ದ ಮೀನುಗಾರನನ್ನು ಬೈಂದೂರು (Baindur) ತಾಲೂಕಿನ ಗಂಗೊಳ್ಳಿ ಮೂಲದ ಸಾಗರ್ ಬೋಟ್​​ನ ಮೀನುಗಾರು 43 ಗಂಟೆಗಳ ಬಳಿಕ ರಕ್ಷಣೆ ಮಾಡಿದ್ದಾರೆ. ತಮಿಳುನಾಡಿನ 8 ಜನರ ತಂಡ ಆಳ ಸಮುದ್ರ ಮೀನುಗಾರಿಕೆಗೆ ಅರಬ್ಬಿ ಸಮುದ್ರಕ್ಕೆ ಇಳಿದಿದ್ದರು. ಈ ತಂಡದಲ್ಲಿ ಇದ್ದ ಮುರುಘನ್​ (25) ಎಂಬ ಮೀನುಗಾರ (Fisherman) ಶನಿವಾರ ರಾತ್ರಿ ಮೂತ್ರ ವಿಸರ್ಜನೆಗೆ ಬೋಟ್​ನ ಅಂಚಿಗೆ ಹೋಗುತ್ತಾನೆ. ಈ ವೇಳೆ ಜೋರಾದ ಗಾಳಿಗೆ ಮುರುಘನ್​ ಆಯತಪ್ಪಿ ಸಮುದ್ರದಲ್ಲಿ ಬೀಳುತ್ತಾನೆ.

ಮುರುಘನ್​ ಸಮುದ್ರದಲ್ಲಿ ಬಿದ್ದಿರುವುದು ಉಳಿದ ಮೀನುಗಾರರಿಗೆ ತಿಳಿದಿರುವುದಿಲ್ಲ. ಎಷ್ಟು ಹೊತ್ತಾದರೂ ಮುರುಘನ್ ​ಒಳಗಡೆ ಬಾರದಿದ್ದರಿಂದ ಅನುಮಾನಗೊಂಡ ಉಳಿದ ಮೀನುಗಾರರು ಸಮುದ್ರದಲ್ಲಿ ಮುರುಘನನ್ನು ಹುಡುಕಲು ಆರಂಭಿಸುತ್ತಾರೆ. ಆದರೆ ಎರಡು ದಿನ ಕಳೆದರೂ ಮುರುಘನ್​ಪತ್ತೆಯಾಗಲಿಲ್ಲ. ಕೊನೆಗೆ ತಮಿಳುನಾಡು ಮೀನುಗಾರರು ಮುರುಘನ್​ ಮೃತಪಟ್ಟಿದ್ದಾನೆ ಎಂದು ಮಾಲಿಕನಿಗೆ ತಿಳಿಸುತ್ತಾರೆ.

ಇದನ್ನೂ ಓದಿ: ಸಮುದ್ರದಲ್ಲಿ ಮುಳುಗುತ್ತಿದ್ದ 3 ಯುವಕರ ರಕ್ಷಿಸಿದ ಲೈಫ್‌ಗಾರ್ಡ್ ಸಿಬ್ಬಂದಿ: ಪ್ರಾಣಾಪಾಯದಿಂದ ಪಾರು

ಆದರೆ ಮುರುಘನ್​ ಜೀವ ಉಳಿಸಿಕೊಳ್ಳಲು ಸಮುದ್ರದಲ್ಲೇ ಈಜುತ್ತಿರುತ್ತಾನೆ. ಇಂದು (ನ.10) ರಂದು ಗಂಗೊಳ್ಳಿ ಮೂಲದ ಸಾಗರ್ ಬೋಟ್​​ನ ಮೀನುಗಾರು, ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯುತ್ತಾರೆ. ಗಂಗೊಳ್ಳಿಯಿಂದ ಸುಮಾರು 14 ನಾಟಿಕಲ್ ಮೈಲ್ ದೂರ ಹೋದಾಗ ಮುರುಘನ್​​ನನ್ನು ಕಾಣುತ್ತಾನೆ. ಗಂಗೊಳ್ಳಿ ಮೀನುಗಾರರು ಮೀನು ಅಂದುಕೊಂಡು ಮುರುಘನ್​ ಬಳಿ ಹೋದಾಗ, ಆಶ್ಚರ್ಯವಾಗುತ್ತದೆ. ಮೀನಲ್ಲ ಮನುಷ್ಯನೆಂದು ತಿಳಿಯುತ್ತದೆ.

ಕೊನೆಗೆ ಗಂಗೊಳ್ಳಿ ಮೀನುಗಾರರು ಮುರುಘನ್​ನನ್ನು ರಕ್ಷಣೆ ಮಾಡುತ್ತಾರೆ. ಜೀವ ಉಳಿಸಿಕೊಳ್ಳಲು ಸತತ 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜಿ ಮುರುಘನ್​ ನಿತ್ರಾಣಗೊಂಡಿದ್ದನು. ಸರಿಸುಮಾರು ಎರಡು ದಿನಗಳ ಕಾಲ ನಿರಂತರವಾಗಿ ಈಜಿ ಬಸವಳಿದಿದ್ದ ಮೀನುಗಾರ ಮುರುಘನ್​​ನನ್ನು ರಕ್ಷಣೆ ಮಾಡಲಾಗಿದೆ. ಮುರುಘನ್​​ಗೆ ಗಂಗೊಳ್ಳಿ ಮೀನುಗಾರರು ಪ್ರಥಮ ಚಿಕಿತ್ಸೆ ನೀಡುತ್ತಾರೆ. ಸಮುದ್ರಕ್ಕೆ ಬಿದ್ದು ಮುರುಘನ್ ಮೃತಪಟ್ಟಿದ್ದಾನೆ ಎಂದು ಶವ ಹುಡುಕುತ್ತಿದ್ದ ತಮಿಳುನಾಡಿನ ಮೀನುಗಾರರ ತಂಡಕ್ಕೆ ಈತ ಬದುಕಿದ್ದನ್ನು ಕಂಡು ಆಶ್ಚರ್ಯವಾಗುತ್ತದೆ. ಬಳಿಕ ಗಂಗೊಳ್ಳಿ ಮೀನುಗಾರರು ಮುರುಘನ್​ನನ್ನು ತಮಿಳುನಾಡು ಮೀನುಗಾರರಿಗೆ ಒಪ್ಪಿಸುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:53 am, Fri, 10 November 23

Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ