ಕೊಲ್ಲೂರು: ತನ್ನ ಜಮೀನಿನೊಳಕ್ಕೆ ಬಂದ ಹತ್ತಾರು ಹಸುಗಳಿಗೆ ಗುಂಡಿಕ್ಕಿದ ನಿರ್ದಯಿ ಮನುಷ್ಯ, ಅಸು ನೀಗಿದ ನಾಲ್ಕು ಹಸುಗಳು

ಕೊಲ್ಲೂರು ಮೂಕಾಂಬಿಕೆ ಸನ್ನಿಧಾನದಲ್ಲಿ ಕುಕೃತ್ಯ! ಮನುಷ್ಯ ಇಷ್ಟೊಂದು ಕ್ರೂರಿಯಾಗುವುದು ಸಾಧ್ಯವಾ? ಒಂದು ಹಸು, ಎರಡು ಹಸುವಿಗೆ ಗುಂಡಿಕ್ಕಿದಾಗ ಏನೋ ಮತಿಗೆಟ್ಟಿದೆ ಅನ್ನಬಹುದು... ಆದರೆ ಹತ್ತಾರು ಹಸುಗಳಿಗೆ ಗುಂಡಿಕ್ಕುವಾಗ ಆ ಮನುಷ್ಯನ ಮನಃಸ್ಥಿತಿ ಇನ್ನೆಂತಿರಬಹುದಾಗಿತ್ತು!?

ಕೊಲ್ಲೂರು: ತನ್ನ ಜಮೀನಿನೊಳಕ್ಕೆ ಬಂದ ಹತ್ತಾರು ಹಸುಗಳಿಗೆ ಗುಂಡಿಕ್ಕಿದ ನಿರ್ದಯಿ ಮನುಷ್ಯ, ಅಸು ನೀಗಿದ ನಾಲ್ಕು ಹಸುಗಳು
ಜಮೀನಿನೊಳಕ್ಕೆ ಬಂದ ಹತ್ತಾರು ಹಸುಗಳಿಗೆ ಗುಂಡಿಕ್ಕಿದ ನಿರ್ದಯಿ ಮನುಷ್ಯ
Follow us
| Updated By: ಸಾಧು ಶ್ರೀನಾಥ್​

Updated on: Sep 30, 2023 | 10:52 AM

ಉಡುಪಿ: ಮನುಷ್ಯ ಇಷ್ಟೊಂದು ಕ್ರೂರಿಯಾಗುವುದು ಸಾಧ್ಯವಾ? ಒಂದು ಹಸು, ಎರಡು ಹಸುವಿಗೆ ಗುಂಡಿಕ್ಕಿದಾಗ ಏನೋ ಮತಿಗೆಟ್ಟಿದೆ ಅನ್ನಬಹುದು… ಆದರೆ ಹತ್ತಾರು ಹಸುಗಳಿಗೆ ಗುಂಡಿಕ್ಕುವಾಗ ಆ ಮನುಷ್ಯನ ಮನಃಸ್ಥಿತಿ ಇನ್ನೆಂತಿರಬಹುದಾಗಿತ್ತು!?

ತನ್ನ ಜಮೀನಿನೊಳಕ್ಕೆ ನುಗ್ಗಿ ಬಂದಿವೆ ಎಂಬ ಏಕೈಕ ಕಾರಣಕ್ಕೆ ಅಮಾಯಕ ಹತ್ತಾರು ಹಸುಗಳಿಗೆ ನಾಡಕೋವಿಯಿಂದ ಗುಂಡಿಕ್ಕಿರುವ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬೆಳ್ಳಾಲ ಗ್ರಾಮದ (Baindur, Udupi) ಸಮೀಪವಿರುವ ಅಂಗಡಿಜಡ್ಡುವಿನಲ್ಲಿ ಅಮಾನವೀಯ ಕೃತ್ಯ ನಡೆದಿದೆ. ಅವು ಅಮಾಯಕ-ಮೂಕ ಪ್ರಾಣಿಗಳು ಎಂಬುದನ್ನೂ ಲೆಕ್ಕಿಸದೆ ಸ್ಥಳೀಯ ನಿವಾಸಿ ನರಸಿಂಹ ಎಂಬಾತ ಹಸುಗಳಿಗೆ (cows) ನಾಡಕೋವಿನಿಂದ ಶೂಟ್ ಮಾಡಲಾಗಿದೆ. ತತ್ಪರಿಣಾಮ ನಾಲ್ಕು ಹಸುಗಳು ಅಸುನೀಗಿವೆ. ಗುಲಾಬಿ ಎಂಬ ಮಹಿಳೆಗೆ ಸೇರಿದ ಒಟ್ಟು ನಾಲ್ಕು ಹಸುಗಳು ಸಾವನ್ನಪ್ಪಿವೆ. ಇನ್ನೂ ಆರು ಹಸುಗಳಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: ನೋಡಿದವರ ಕರುಳು ಹಿಂಡಿದ ಕರುಳಿನ ಕೂಗು, ಅಂಬಾ ಅನ್ನುತ್ತಿದ್ದ ತನ್ನ ಕಂದನಿಗಾಗಿ ಬೊಲೆರೋ ವಾಹನ ಬೆನ್ನಟ್ಟಿದ ತಾಯಿ ಹಸು

ಘಟನೆಯ ಬಳಿಕ ಕೊಲ್ಲೂರು (Kollur) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ನರಸಿಂಹ ನಾಪತ್ತೆಯಾಗಿದ್ದಾನೆ. ಈ ಮಧ್ಯೆ ದುರುಳು ನರಸಿಂಹ ಹಸುಗಳ ಮಾಲೀಕರಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ. ತನ್ನ ಜಮೀನಿಗೆ ಈ ಹಸುಗಳು ಆಗಾಗ ಬರುತ್ತಿವೆ ಎಂಬ ಕಾರಣಕ್ಕೆ ಕೋಪಗೊಂಡು ಕೋವಿಯಿಂದ ಶೂಟ್ ಮಾಡಿದ್ದಾನೆ ನರಸಿಂಹ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ 

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ