AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಲೂರು: ತನ್ನ ಜಮೀನಿನೊಳಕ್ಕೆ ಬಂದ ಹತ್ತಾರು ಹಸುಗಳಿಗೆ ಗುಂಡಿಕ್ಕಿದ ನಿರ್ದಯಿ ಮನುಷ್ಯ, ಅಸು ನೀಗಿದ ನಾಲ್ಕು ಹಸುಗಳು

ಕೊಲ್ಲೂರು ಮೂಕಾಂಬಿಕೆ ಸನ್ನಿಧಾನದಲ್ಲಿ ಕುಕೃತ್ಯ! ಮನುಷ್ಯ ಇಷ್ಟೊಂದು ಕ್ರೂರಿಯಾಗುವುದು ಸಾಧ್ಯವಾ? ಒಂದು ಹಸು, ಎರಡು ಹಸುವಿಗೆ ಗುಂಡಿಕ್ಕಿದಾಗ ಏನೋ ಮತಿಗೆಟ್ಟಿದೆ ಅನ್ನಬಹುದು... ಆದರೆ ಹತ್ತಾರು ಹಸುಗಳಿಗೆ ಗುಂಡಿಕ್ಕುವಾಗ ಆ ಮನುಷ್ಯನ ಮನಃಸ್ಥಿತಿ ಇನ್ನೆಂತಿರಬಹುದಾಗಿತ್ತು!?

ಕೊಲ್ಲೂರು: ತನ್ನ ಜಮೀನಿನೊಳಕ್ಕೆ ಬಂದ ಹತ್ತಾರು ಹಸುಗಳಿಗೆ ಗುಂಡಿಕ್ಕಿದ ನಿರ್ದಯಿ ಮನುಷ್ಯ, ಅಸು ನೀಗಿದ ನಾಲ್ಕು ಹಸುಗಳು
ಜಮೀನಿನೊಳಕ್ಕೆ ಬಂದ ಹತ್ತಾರು ಹಸುಗಳಿಗೆ ಗುಂಡಿಕ್ಕಿದ ನಿರ್ದಯಿ ಮನುಷ್ಯ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Sep 30, 2023 | 10:52 AM

Share

ಉಡುಪಿ: ಮನುಷ್ಯ ಇಷ್ಟೊಂದು ಕ್ರೂರಿಯಾಗುವುದು ಸಾಧ್ಯವಾ? ಒಂದು ಹಸು, ಎರಡು ಹಸುವಿಗೆ ಗುಂಡಿಕ್ಕಿದಾಗ ಏನೋ ಮತಿಗೆಟ್ಟಿದೆ ಅನ್ನಬಹುದು… ಆದರೆ ಹತ್ತಾರು ಹಸುಗಳಿಗೆ ಗುಂಡಿಕ್ಕುವಾಗ ಆ ಮನುಷ್ಯನ ಮನಃಸ್ಥಿತಿ ಇನ್ನೆಂತಿರಬಹುದಾಗಿತ್ತು!?

ತನ್ನ ಜಮೀನಿನೊಳಕ್ಕೆ ನುಗ್ಗಿ ಬಂದಿವೆ ಎಂಬ ಏಕೈಕ ಕಾರಣಕ್ಕೆ ಅಮಾಯಕ ಹತ್ತಾರು ಹಸುಗಳಿಗೆ ನಾಡಕೋವಿಯಿಂದ ಗುಂಡಿಕ್ಕಿರುವ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬೆಳ್ಳಾಲ ಗ್ರಾಮದ (Baindur, Udupi) ಸಮೀಪವಿರುವ ಅಂಗಡಿಜಡ್ಡುವಿನಲ್ಲಿ ಅಮಾನವೀಯ ಕೃತ್ಯ ನಡೆದಿದೆ. ಅವು ಅಮಾಯಕ-ಮೂಕ ಪ್ರಾಣಿಗಳು ಎಂಬುದನ್ನೂ ಲೆಕ್ಕಿಸದೆ ಸ್ಥಳೀಯ ನಿವಾಸಿ ನರಸಿಂಹ ಎಂಬಾತ ಹಸುಗಳಿಗೆ (cows) ನಾಡಕೋವಿನಿಂದ ಶೂಟ್ ಮಾಡಲಾಗಿದೆ. ತತ್ಪರಿಣಾಮ ನಾಲ್ಕು ಹಸುಗಳು ಅಸುನೀಗಿವೆ. ಗುಲಾಬಿ ಎಂಬ ಮಹಿಳೆಗೆ ಸೇರಿದ ಒಟ್ಟು ನಾಲ್ಕು ಹಸುಗಳು ಸಾವನ್ನಪ್ಪಿವೆ. ಇನ್ನೂ ಆರು ಹಸುಗಳಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: ನೋಡಿದವರ ಕರುಳು ಹಿಂಡಿದ ಕರುಳಿನ ಕೂಗು, ಅಂಬಾ ಅನ್ನುತ್ತಿದ್ದ ತನ್ನ ಕಂದನಿಗಾಗಿ ಬೊಲೆರೋ ವಾಹನ ಬೆನ್ನಟ್ಟಿದ ತಾಯಿ ಹಸು

ಘಟನೆಯ ಬಳಿಕ ಕೊಲ್ಲೂರು (Kollur) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ನರಸಿಂಹ ನಾಪತ್ತೆಯಾಗಿದ್ದಾನೆ. ಈ ಮಧ್ಯೆ ದುರುಳು ನರಸಿಂಹ ಹಸುಗಳ ಮಾಲೀಕರಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ. ತನ್ನ ಜಮೀನಿಗೆ ಈ ಹಸುಗಳು ಆಗಾಗ ಬರುತ್ತಿವೆ ಎಂಬ ಕಾರಣಕ್ಕೆ ಕೋಪಗೊಂಡು ಕೋವಿಯಿಂದ ಶೂಟ್ ಮಾಡಿದ್ದಾನೆ ನರಸಿಂಹ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ 

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ