AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಚಾಕು ಇರಿತ ಪ್ರಕರಣ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

ಸೌಮ್ಯಶ್ರೀಗೆ ಬೇರೆ ಯುವಕನ ಜೊತೆ ನಿಶ್ಚಿತಾರ್ಥ ಆಗಿದ್ದರಿಂದ ಸಿಟ್ಟಿಗೆದ್ದ ಪ್ರಿಯಕರ ಸಂದೇಶ್ ಕಲಾಲ್ ಆಕೆ ಕೆಲಸ ಮುಗಿಸಿ ಮನೆಗೆ ಬರುವ ಹೊತ್ತಿಗೆ ಸ್ಕೂಟಿ ತಡೆದು ಚಾಕು ಇರಿದಿದ್ದ.

ಉಡುಪಿಯಲ್ಲಿ ಚಾಕು ಇರಿತ ಪ್ರಕರಣ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು
ಸಂದೇಶ್ ಕಲಾಲ್
TV9 Web
| Updated By: sandhya thejappa|

Updated on: Aug 31, 2021 | 8:53 AM

Share

ಉಡುಪಿ: ನಿನ್ನೆ ಸಂಜೆ ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಯುವತಿಗೆ ಯುವಕನೊಬ್ಬ ಬಂದು ಚಾಕು ಇರಿದಿದ್ದ. ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ. ಆತ್ಮಹತ್ಯೆಗೆ ಯತ್ನಿಸಿದ್ದ ಸಂದೇಶ್ ಕಲಾಲ್(29) ಎಂಬಾತ ಇಂದು (ಆಗಸ್ಟ್ 31) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಚೂರಿ ಇರಿತಕ್ಕೊಳಗಾಗಿದ್ದ ಸೌಮ್ಯಾಶ್ರೀ ಭಂಡಾರಿ ಎಂಬ ಯುವತಿ ನಿನ್ನೆ ಸಾವನ್ನಪ್ಪಿದ್ದಳು. ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದೇಶ್ ಕಲಾಲ್ ಇಂದು ಬೆಳಿಗ್ಗೆ ಮೃತಪಟ್ಟಿದ್ದಾನೆ. ಉಡುಪಿಯ ಅಂಬಾಗಿಲು ನಿವಾಸಿ ಸೌಮ್ಯಶ್ರೀ ಮತ್ತು ಅಲೆವೂರು ನಿವಾಸಿಯಾಗಿರುವ ಸಂದೇಶ್ ಕುಲಾಲ್ ಪ್ರೀತಿಸುತ್ತಿದ್ದರಂತೆ. ಆದರೆ ವಾರದ ಹಿಂದೆ ಯುವತಿಗೆ ಬೇರೆ ಹುಡುಗನ ಜೊತೆ ನಿಶ್ಚಿತಾರ್ಥವಾಗಿತ್ತು.

ಸೌಮ್ಯಶ್ರೀಗೆ ಬೇರೆ ಯುವಕನ ಜೊತೆ ನಿಶ್ಚಿತಾರ್ಥ ಆಗಿದ್ದರಿಂದ ಸಿಟ್ಟಿಗೆದ್ದ ಪ್ರಿಯಕರ ಸಂದೇಶ್ ಕಲಾಲ್ ಆಕೆ ಕೆಲಸ ಮುಗಿಸಿ ಮನೆಗೆ ಬರುವ ಹೊತ್ತಿಗೆ ಸ್ಕೂಟಿ ತಡೆದು ಚಾಕು ಇರಿದಿದ್ದ. ಆತನೂ ಚಾಕುವಿನಿಂದ ಕತ್ತು ಕುಯ್ದುಕೊಂಡಿದ್ದ. ಇಬ್ಬರ ಸ್ಥಿತಿ ಗಂಭೀರವಾಗಿತ್ತು. ಗಂಭೀರಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಸಂಜೆ ಹೊತ್ತಿಗೆ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರೆ, ಯುವಕ ಇಂದು ಬೆಳಿಗ್ಗೆ ಮೃತಪಟ್ಟಿದ್ದಾನೆ.

ಸಂತೆಕಟ್ಟೆ ಎಂಬಲ್ಲಿ ಈ ಘಟನೆ ನಡೆದಿತ್ತು. ನಿನ್ನೆ ಸಂಜೆಯ ವೇಳೆ ಈ ಘಟನೆ ನಡೆದಿದ್ದು, ನಗರವನ್ನು ತಲ್ಲಣಗೊಳಿಸಿತ್ತು. ಬೇರೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥ ಆಗಿದ್ದಕ್ಕೆ ಕೋಪಗೊಂಡ ಯುವಕ ಸಂದೇಶ್ ದುಷ್ಕೃತ್ಯ ಎಸಗಿದ್ದನು. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿತ್ತು. ಸದ್ಯ ಮಣಿಪಾಲದ ಕೆಎಂಸಿಯ ಶವಾಗಾರದಲ್ಲಿ ಯುವಕ ಹಾಗೂ ಯುವತಿಯ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣ; ಮತ್ತೋರ್ವ ಆರೋಪಿಯನ್ನು ಬಂಧಿಸಿದ ಪೊಲೀಸರು

ಪ್ರೀತಿ ವಿಷಯಕ್ಕೆ ಪೋಷಕರು ಬುದ್ಧಿ ಹೇಳಿದಕ್ಕೆ ಆಚಾರ್ಯ ಕಾಲೇಜಿನ ವಿದ್ಯಾರ್ಥಿನಿ ಪಿಜಿಯಲ್ಲಿ ನೇಣಿಗೆ ಶರಣು

(A young man who tried to commit suicide has died today in Udupi)