AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

14-15ನೇ ಶತಮಾನದ ಶಾಸನಗಳಲ್ಲಿ ಉಡುಪಿ ಕಂಗೂರು ಮಠದ ಬಗ್ಗೆ ಉಲ್ಲೇಖ

ಸುಮಾರು 14 ರಿಂದ 15 ನೇ ಶತಮಾನದ ವಿಜಯನಗರ ಕಾಲದ ನಾಲ್ಕು ಶಾಸನಗಳ ಸಂಪೂರ್ಣ ಪರೀಕ್ಷೆಯನ್ನು ನಡೆಸಿದ್ದೇವೆ. ಅವುಗಳಲ್ಲಿ ಎರಡು ಶಾಸನಗಳು ಇಮ್ಮಡಿ ಹರಿಹರನದ್ದು, ಒಂದು ಇಮ್ಮಡಿ ದೇವರಾಯನದ್ದು ಎಂದು ತಿಳಿದುಬಂದಿದೆ. ದುರದೃಷ್ಟವಶಾತ್, ಒಂದು ಶಾಸನದ ಲಿಪಿಯು ಸಂಪೂರ್ಣವಾಗಿ ಸವೆದುಹೋಗಿದೆ ಎಂದು ಇತಿಹಾಸ ಮತ್ತು ಪುರಾತತ್ವ ಶಾಸ್ತ್ರದ ಉಪನ್ಯಾಸಕ ಶ್ರುತೇಶ್ ಆಚಾರ್ಯ ಹೇಳಿದರು.

14-15ನೇ ಶತಮಾನದ ಶಾಸನಗಳಲ್ಲಿ ಉಡುಪಿ ಕಂಗೂರು ಮಠದ ಬಗ್ಗೆ ಉಲ್ಲೇಖ
ಕಂಗೂರು ಮಠ
ವಿವೇಕ ಬಿರಾದಾರ
|

Updated on: Oct 10, 2023 | 7:58 AM

Share

ಉಡುಪಿ ಅ.10: ಆದಿಉಡುಪಿ (Udupi) ಕಂಗಣಬೆಟ್ಟು ಕಂಗೂರು ಗೋಪಿನಾಥ ಮಠದಲ್ಲಿ (Kangoor Mutt) ದೊರೆತ 14-15ನೇ ಶಾಸನಗಳನ್ನು ತಜ್ಞರ ತಂಡವು ಇತ್ತೀಚೆಗೆ ಪುನರ್ ಪರಿಶೀಲಿಸಿದೆ. ಕಲ್ಯಾಣಪುರದ ಮಿಲಾಗ್ರೆಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ಅವರ ನೇತೃತ್ವದಲ್ಲಿ, ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ನಿರ್ದೇಶಕರಾದ ಎಸ್‌ಎ ಕೃಷ್ಣಯ್ಯ ಮತ್ತು ಶಿರ್ವದ ಎಂಎಸ್‌ಆರ್‌ಎಸ್ ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರದ ಉಪನ್ಯಾಸಕ ಶ್ರುತೇಶ್ ಆಚಾರ್ಯ ಅವರು ಅಧ್ಯಯನ ನಡೆಸಿದರು. ಈ ಹಿಂದೆ ಸಂಶೋಧಕರು ಈ ಶಾಸನಗಳ ಬಗ್ಗೆ ಅಧ್ಯಯನ ನಡೆಸಿದ್ದರೂ, ಅವರು ವಿವರಗಳನ್ನು ಪ್ರಕಟಿಸಿಲ್ಲ ಎಂದು ವರದಿಯಾಗಿದೆ. ಹೀಗಾಗಿ ಶಾಸನಗಳ ಮರು ಪರಿಶೀಲನೆ ಅಗತ್ಯ ಎಂದು ಸಂಶೋಧಕರು ತಿಳಿಸಿದ್ದಾರೆ.

ಸುಮಾರು 14 ರಿಂದ 15 ನೇ ಶತಮಾನದ ವಿಜಯನಗರ ಕಾಲದ ನಾಲ್ಕು ಶಾಸನಗಳ ಸಂಪೂರ್ಣ ಪರೀಕ್ಷೆಯನ್ನು ನಡೆಸಿದ್ದೇವೆ. ಅವುಗಳಲ್ಲಿ ಎರಡು ಶಾಸನಗಳು ಇಮ್ಮಡಿ ಹರಿಹರನದ್ದು, ಒಂದು ಇಮ್ಮಡಿ ದೇವರಾಯನದ್ದು ಎಂದು ತಿಳಿದುಬಂದಿದೆ. ದುರದೃಷ್ಟವಶಾತ್, ಒಂದು ಶಾಸನದ ಲಿಪಿಯು ಸಂಪೂರ್ಣವಾಗಿ ಸವೆದುಹೋಗಿದೆ. ನಮ್ಮ ಅಧ್ಯಯನದ ಆಧಾರದ ಮೇಲೆ ನಾವು ಈ ಶಾಸನಗಳನ್ನು 14 ನೇ ಶತಮಾನ ಕಾಲದ್ದು ಅಂತ ವಿಶ್ವಾಸದಿಂದ ನಿರ್ಧರಿಸಬಹುದು ಎಂದು ಶ್ರುತೇಶ್ ಆಚಾರ್ಯ ಹೇಳಿದರು.

ಇದನ್ನೂ ಓದಿ: ಹಾವೇರಿಯಲ್ಲಿ ಬಾದಾಮಿ ಚಾಲುಕ್ಯರ ಕಾಲದ ಶಿಲಾಶಾಸನ ಪತ್ತೆ

ಶಾಸನಗಳನ್ನು ಗ್ರಾನೈಟ್ ಕಲ್ಲುಗಳ ಮೇಲೆ ಕೆತ್ತಲಾಗಿದೆ. ಮೇಲ್ಭಾಗದಲ್ಲಿ ಸೂರ್ಯ, ಚಂದ್ರ, ಶಂಖ, ಚಕ್ರ, ರಾಜಕತಿ, ಬ್ರಾಹ್ಮಣ ಯುವಕ (ವಟು) ಮತ್ತು ದೀಪದ ಚಿತ್ರಣಗಳನ್ನು ಗಮನಿಸಬಹುದು. ಬೊಮ್ಮರಸ ಮತ್ತು ಬಾರ್ಕೂರಿನ ಚಂದ್ರರಸ ಆಳ್ವಿಕೆಯಲ್ಲಿ ಭೂಮಿಯನ್ನು ಧಾನದ ಬಗ್ಗೆ ಈ ಶಾಸನಗಳಲ್ಲಿ ಉಲ್ಲೇಖವಾಗಿದೆ. ಕಂಗು ಮಠ (ಕಂಗೂರು ಮಠ)ದಲ್ಲಿನ ನಾರಾಯಣ, ರಾಮಚಂದ್ರ, ಗೋಪಿನಾಥ ಮತ್ತು ವಿಠಲ ದೇವತೆಗಳಿಗೆ ಕಾಣಿಕೆ ನೀಡಿರುವುದನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಇಮ್ಮಡಿ ದೇವರಾಯನ ಎರಡು ಶಾಸನಗಳನ್ನು ಒಂದೇ ಕಲ್ಲಿನ ಮೇಲೆ ಕೆತ್ತಲಾಗಿದೆ. ಮುಖ್ಯವಾಗಿ ಪುಣ್ಯಕೀರ್ತಿ ತೀರ್ಥರು ಶ್ರೀರಾಮನನ್ನು ಆರಾಧಿಸುತ್ತಿದ್ದರು ಮತ್ತು ಈ ಸ್ಥಳದಲ್ಲಿ ದೇವರ ಉತ್ಸವದ ಆಚರಣೆಗಾಗಿ ಮಾಡಿದ 100 ಹೊನ್ನುಗಳ ಬಗ್ಗೆ ಉಲ್ಲೇಖಿಸಲಾಗಿದೆ. ಶಾಸನದ ಆಧಾರದ ಮೇಲೆ ಮಠಕ್ಕೆ 14-15 ಶತಮಾನದಷ್ಟು ಇತಿಹಾಸವಿದೆ ಎಂದು ಖಚಿತಪಡಿಸಿಕೊಳ್ಳಬಹುದು. ಇತಿಹಾಸಕಾರ ಪಾದೂರು ಗುರುರಾಜ ಭಟ್ ಅವರ ಪ್ರಕಾರ, ಮಠದ ವಿಗ್ರಹವು 8 ನೇ ಶತಮಾನದ್ದಾಗಿದೆ.

ಪ್ರಸ್ತುತ, ಎಲ್ಲಾ ಶಾಸನಗಳನ್ನು ಮಠದ ಆವರಣದಲ್ಲಿ ಉತ್ತಮವಾಗಿ ಸಂರಕ್ಷಿಸಲಾಗಿದೆ. ಶಾಸನವನ್ನು ಸಂರಕ್ಷಿಸಲು ಆಡಳಿತ ಸಮಿತಿಯ ಪ್ರಯತ್ನ ಶ್ಲಾಘನೀಯ ಎಂದು ಶ್ರುತೇಶ್ ಹೇಳಿದರು. ಮೋಹನ್ ಉಪಾಧ್ಯ, ಶಾಂತಾರಾಮ ಭಟ್, ಶ್ರೀಶ ಭಟ್ ಕೊಡವೂರು ಹಾಗೂ ಸ್ಥಳೀಯರು ಸಂಶೋಧನಾ ತಂಡಕ್ಕೆ ನೆರವಾದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ