AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಿಗ್ಗೆ ನೈಂಟಿ, ಸಂಜೆ ನೈಂಟಿ ಫ್ರೀ ಕೊಡಿ, ಇಲ್ಲ ಸಾರಾಯಿ ಬಂದ್ ಮಾಡಿ; ವಿನೂತನ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಮದ್ಯಪ್ರಿಯರ ಮನವಿ

ಉಡುಪಿಯ ಚಿತ್ತರಂಜನ್ ಸರ್ಕಲ್​ನಲ್ಲಿ ಕೂಲಿ ಕಾರ್ಮಿಕರು ವಿನೂತನ ರೀತಿಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮದ್ಯದ ಬೆಲೆ ಇಳಿಸಿ ಇಲ್ಲ ಬೆಳಿಗ್ಗೆ ನೈಂಟಿ, ಸಂಜೆ ನೈಂಟಿ ಉಚಿತವಾಗಿ ನೀಡಿ. ಅದು ಆಗದಿದ್ದಲ್ಲಿ ಸಾರಾಯಿ ಸಂಪೂರ್ಣ ಬಂದ್ ಮಾಡಿ ಎಂದು ಪ್ರತಿಭಟನೆ.

ಬೆಳಿಗ್ಗೆ ನೈಂಟಿ, ಸಂಜೆ ನೈಂಟಿ ಫ್ರೀ ಕೊಡಿ, ಇಲ್ಲ ಸಾರಾಯಿ ಬಂದ್ ಮಾಡಿ; ವಿನೂತನ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಮದ್ಯಪ್ರಿಯರ ಮನವಿ
ಕುಡುಕರಿಗೆ ಹಾರ ಹಾಕಿ ಸನ್ಮಾನ ಮಾಡಿ ಪ್ರತಿಭಟನೆ
TV9 Web
| Edited By: |

Updated on:Jul 11, 2023 | 2:45 PM

Share

ಉಡುಪಿ: ಅಬಕಾರಿ ಸುಂಕ ಹೆಚ್ಚಳ ಮಾಡಿ ಕಾಂಗ್ರೆಸ್ ಸರ್ಕಾರ(Congress Government) ಎಣ್ಣೆ ಪ್ರಿಯರಿಗೆ ಶಾಕ್ ಕೊಟ್ಟಿದೆ(Liquor Hike). ಜು.7ರ ಶುಕ್ರವಾರ ಮಂಡನೆಯಾದ ಬಜೆಟ್​ನಲ್ಲಿ ಮದ್ಯದ ಬೆಲೆ ಹೆಚ್ಚಳ ಮಾಡಿ ಸಿಎಂ ಸಿದ್ದರಾಮಯ್ಯ(Siddaramaiah) ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆ ರೊಚ್ಚಿಗೆದ್ದ ಮದ್ಯ ಪ್ರಿಯರು ವಿನೂತನ ರೀತಿಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಉಚಿತ ಮದ್ಯ ನೀಡುವಂತೆ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಹೌದು ಉಡುಪಿಯ ಚಿತ್ತರಂಜನ್ ಸರ್ಕಲ್​ನಲ್ಲಿ ಕೂಲಿ ಕಾರ್ಮಿಕರು ವಿನೂತನ ರೀತಿಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇತ್ತೀಚಿನ ಬಜೆಟ್​ನಲ್ಲಿ ಮದ್ಯದ ಬೆಲೆ 20% ಏರಿಕೆ ಮಾಡಲಾಗಿದೆ. ಸರಕಾರದ ಉಚಿತ ಯೋಜನೆಗೆ ಹಣ ನಮ್ಮಿಂದಲೇ ಬರುವುದು. ನಮಗೆ ಮದ್ಯದ ಬೆಲೆ ಇಳಿಕೆ ಮಾಡಿ ಎಂದು ಮದ್ಯಪ್ರಿಯರು ಆಗ್ರಹಿಸಿದ್ದಾರೆ. ಮದ್ಯದ ಬೆಲೆ ಇಳಿಸಿ ಇಲ್ಲ ಬೆಳಿಗ್ಗೆ ನೈಂಟಿ, ಸಂಜೆ ನೈಂಟಿ ಉಚಿತವಾಗಿ ನೀಡಿ. ಅದು ಆಗದಿದ್ದಲ್ಲಿ ಸಾರಾಯಿ ಸಂಪೂರ್ಣ ಬಂದ್ ಮಾಡಿ. ಆ ಹಣವನ್ನು ನಾವು ನಮ್ಮ ಹೆಂಡತಿ, ಮಕ್ಕಳಿಗೆ ನೀಡುತ್ತೇವೆ. ನಮ್ಮ ಹೆಂಡತಿ, ಮಕ್ಕಳನ್ನು ನಾವೇ ಹಣ ಕೊಟ್ಟು ದೇವಸ್ಥಾನಗಳಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಸರ್ಕಾರಕ್ಕೆ ಮದ್ಯಪ್ರಿಯರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Bengaluru: ಕರ್ನಾಟಕದಲ್ಲಿ ‘ಎಣ್ಣೆ’ ದೇಶದಲ್ಲೇ ದುಬಾರಿ; ಬೇರೆ ಬೇರೆ ರಾಜ್ಯಗಳಲ್ಲಿ ಮದ್ಯದ ದರ ಎಷ್ಟು ಹೆಚ್ಚಾಗಿದೆ?

ಇನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿ, ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಕುಡುಕರಿಗೆ ಹಾರ ಹಾಕಿ ಸನ್ಮಾನ ಮಾಡಲಾಯಿತು. ಹಾಗೂ ಆರತಿ ಎತ್ತಿ ಗೌರವಾರ್ಪಣೆ ಸಲ್ಲಿಸಲಾಯಿತು. ಮದ್ಯದ ಬಾಟಲಿಗೆ ಹೂಗಳಿಂದ ಅಲಂಕರಿಸಿ, ಆರತಿ ಬೆಳಗಿ, ಡೋಲು ಬಡಿದು ಗಮನ ಸೆಳೆದರು.

ಸಧ್ಯ ಟ್ರೆಂಡ್​ನಲ್ಲಿರುವ ಬ್ರಾಂಡ್ಸ್ ಗಳ ಹಿಂದಿನ ಹಾಗೂ ಮುಂದಿನ ಬೆಲೆ

  • ಹೈವಾಟ್ಸ್ ಪಂಚ್ : ಹಿಂದಿನ ಬೆಲೆ – 70, ಏರಿಕೆಯ ಬೆಲೆ -80 ರೂ.
  • ಬಟ್ ವೈಸರ್: ಹಿಂದಿನ ಬೆಲೆ – 220, ಏರಿಕೆ ಬೆಲೆ – 240 ರೂ.
  • ಕಿಂಗ್ ಫಿಷರ್ ಪ್ರಿಮಿಯನ್: ಹಿಂದಿನ ಬೆಲೆ – 170, ಏರಿಕೆ ಬೆಲೆ -190 ರೂ.
  • ಬ್ಯಾಕ್ ಪೇಪರ್ ವಿಸ್ಕಿ: ಹಿಂದಿನ ಬೆಲೆ – 106, ಏರಿಕೆ ಬೆಲೆ – 120 ರೂ.
  • ಬ್ಲಾಕ್ ಆ್ಯಂಡ್ ವೈಟ್: ಹಿಂದಿನ ಬೆಲೆ – 2464, ಏರಿಕೆ ಬೆಲೆ – 2800 ರೂ.
  • ಒಲ್ಡ್ ಮಂಕ್: ಹಿಂದಿನ ಬೆಲೆ – 137, ಏರಿಕೆ ಬೆಲೆ – 155 ರೂ.
  • ಮ್ಯನ್ಷನ್ ಹೌಸ್ ಬ್ರಾಂಡಿ: ಹಿಂದಿನ ಬೆಲೆ – 220, ಏರಿಕೆ ಬೆಲೆ – 240 ರೂ.
  • ಮಾಕ್ ಡುವೆಲ್ದ್ ಬ್ರಾಂಡಿ: ಹಿಂದಿನ ಬೆಲೆ – 170, ಏರಿಕೆ ಬೆಲೆ – 190 ರೂ.
  • ಇಂಪಿಯರಿಯಲ್ ಬ್ಲೂ: ಹಿಂದಿನ ಬೆಲೆ – 220, ಏರಿಕೆ ಬೆಲೆ – 240 ರೂ.
  • ಒಲ್ಡ್ ಟವರ್ ವಿಸ್ಕಿ: ಹಿಂದಿನ ಬೆಲೆ – 87, ಏರಿಕೆ ಬೆಲೆ – 100 ರೂ.
  • ಜಾನಿ ವಾಕರ್ ಬ್ಲಾಕ್ ಲೇಬಲ್: ಹಿಂದಿನ ಬೆಲೆ – 6250, ಏರಿಕೆ ಬೆಲೆ – 7150 ರೂ.
  • ಶಿವಾಸ್ ಸೀಗಲ್: ಹಿಂದಿನ ಬೆಲೆ – 6200, ಏರಿಕೆ ಬೆಲೆ – 7000 ರೂ.
  • ರಮನವ್ ಒಡ್ಕಾ – ಹಿಂದಿನ ಬೆಲೆ – 915, ಏರಿಕೆ ಬೆಲೆ – 1000 ರೂ.
  • ಮ್ಯಾಜಿಕ್ ಮುಮೆಂಟ್: ಹಿಂದಿನ ಬೆಲೆ – 330, ಏರಿಕೆ ಬೆಲೆ – 380 ರೂ.

    ಉಡುಪಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:21 pm, Tue, 11 July 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ