AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಿಗ್ಗೆ ನೈಂಟಿ, ಸಂಜೆ ನೈಂಟಿ ಫ್ರೀ ಕೊಡಿ, ಇಲ್ಲ ಸಾರಾಯಿ ಬಂದ್ ಮಾಡಿ; ವಿನೂತನ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಮದ್ಯಪ್ರಿಯರ ಮನವಿ

ಉಡುಪಿಯ ಚಿತ್ತರಂಜನ್ ಸರ್ಕಲ್​ನಲ್ಲಿ ಕೂಲಿ ಕಾರ್ಮಿಕರು ವಿನೂತನ ರೀತಿಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮದ್ಯದ ಬೆಲೆ ಇಳಿಸಿ ಇಲ್ಲ ಬೆಳಿಗ್ಗೆ ನೈಂಟಿ, ಸಂಜೆ ನೈಂಟಿ ಉಚಿತವಾಗಿ ನೀಡಿ. ಅದು ಆಗದಿದ್ದಲ್ಲಿ ಸಾರಾಯಿ ಸಂಪೂರ್ಣ ಬಂದ್ ಮಾಡಿ ಎಂದು ಪ್ರತಿಭಟನೆ.

ಬೆಳಿಗ್ಗೆ ನೈಂಟಿ, ಸಂಜೆ ನೈಂಟಿ ಫ್ರೀ ಕೊಡಿ, ಇಲ್ಲ ಸಾರಾಯಿ ಬಂದ್ ಮಾಡಿ; ವಿನೂತನ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಮದ್ಯಪ್ರಿಯರ ಮನವಿ
ಕುಡುಕರಿಗೆ ಹಾರ ಹಾಕಿ ಸನ್ಮಾನ ಮಾಡಿ ಪ್ರತಿಭಟನೆ
TV9 Web
| Edited By: ಆಯೇಷಾ ಬಾನು|

Updated on:Jul 11, 2023 | 2:45 PM

Share

ಉಡುಪಿ: ಅಬಕಾರಿ ಸುಂಕ ಹೆಚ್ಚಳ ಮಾಡಿ ಕಾಂಗ್ರೆಸ್ ಸರ್ಕಾರ(Congress Government) ಎಣ್ಣೆ ಪ್ರಿಯರಿಗೆ ಶಾಕ್ ಕೊಟ್ಟಿದೆ(Liquor Hike). ಜು.7ರ ಶುಕ್ರವಾರ ಮಂಡನೆಯಾದ ಬಜೆಟ್​ನಲ್ಲಿ ಮದ್ಯದ ಬೆಲೆ ಹೆಚ್ಚಳ ಮಾಡಿ ಸಿಎಂ ಸಿದ್ದರಾಮಯ್ಯ(Siddaramaiah) ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆ ರೊಚ್ಚಿಗೆದ್ದ ಮದ್ಯ ಪ್ರಿಯರು ವಿನೂತನ ರೀತಿಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಉಚಿತ ಮದ್ಯ ನೀಡುವಂತೆ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಹೌದು ಉಡುಪಿಯ ಚಿತ್ತರಂಜನ್ ಸರ್ಕಲ್​ನಲ್ಲಿ ಕೂಲಿ ಕಾರ್ಮಿಕರು ವಿನೂತನ ರೀತಿಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇತ್ತೀಚಿನ ಬಜೆಟ್​ನಲ್ಲಿ ಮದ್ಯದ ಬೆಲೆ 20% ಏರಿಕೆ ಮಾಡಲಾಗಿದೆ. ಸರಕಾರದ ಉಚಿತ ಯೋಜನೆಗೆ ಹಣ ನಮ್ಮಿಂದಲೇ ಬರುವುದು. ನಮಗೆ ಮದ್ಯದ ಬೆಲೆ ಇಳಿಕೆ ಮಾಡಿ ಎಂದು ಮದ್ಯಪ್ರಿಯರು ಆಗ್ರಹಿಸಿದ್ದಾರೆ. ಮದ್ಯದ ಬೆಲೆ ಇಳಿಸಿ ಇಲ್ಲ ಬೆಳಿಗ್ಗೆ ನೈಂಟಿ, ಸಂಜೆ ನೈಂಟಿ ಉಚಿತವಾಗಿ ನೀಡಿ. ಅದು ಆಗದಿದ್ದಲ್ಲಿ ಸಾರಾಯಿ ಸಂಪೂರ್ಣ ಬಂದ್ ಮಾಡಿ. ಆ ಹಣವನ್ನು ನಾವು ನಮ್ಮ ಹೆಂಡತಿ, ಮಕ್ಕಳಿಗೆ ನೀಡುತ್ತೇವೆ. ನಮ್ಮ ಹೆಂಡತಿ, ಮಕ್ಕಳನ್ನು ನಾವೇ ಹಣ ಕೊಟ್ಟು ದೇವಸ್ಥಾನಗಳಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಸರ್ಕಾರಕ್ಕೆ ಮದ್ಯಪ್ರಿಯರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Bengaluru: ಕರ್ನಾಟಕದಲ್ಲಿ ‘ಎಣ್ಣೆ’ ದೇಶದಲ್ಲೇ ದುಬಾರಿ; ಬೇರೆ ಬೇರೆ ರಾಜ್ಯಗಳಲ್ಲಿ ಮದ್ಯದ ದರ ಎಷ್ಟು ಹೆಚ್ಚಾಗಿದೆ?

ಇನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿ, ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಕುಡುಕರಿಗೆ ಹಾರ ಹಾಕಿ ಸನ್ಮಾನ ಮಾಡಲಾಯಿತು. ಹಾಗೂ ಆರತಿ ಎತ್ತಿ ಗೌರವಾರ್ಪಣೆ ಸಲ್ಲಿಸಲಾಯಿತು. ಮದ್ಯದ ಬಾಟಲಿಗೆ ಹೂಗಳಿಂದ ಅಲಂಕರಿಸಿ, ಆರತಿ ಬೆಳಗಿ, ಡೋಲು ಬಡಿದು ಗಮನ ಸೆಳೆದರು.

ಸಧ್ಯ ಟ್ರೆಂಡ್​ನಲ್ಲಿರುವ ಬ್ರಾಂಡ್ಸ್ ಗಳ ಹಿಂದಿನ ಹಾಗೂ ಮುಂದಿನ ಬೆಲೆ

  • ಹೈವಾಟ್ಸ್ ಪಂಚ್ : ಹಿಂದಿನ ಬೆಲೆ – 70, ಏರಿಕೆಯ ಬೆಲೆ -80 ರೂ.
  • ಬಟ್ ವೈಸರ್: ಹಿಂದಿನ ಬೆಲೆ – 220, ಏರಿಕೆ ಬೆಲೆ – 240 ರೂ.
  • ಕಿಂಗ್ ಫಿಷರ್ ಪ್ರಿಮಿಯನ್: ಹಿಂದಿನ ಬೆಲೆ – 170, ಏರಿಕೆ ಬೆಲೆ -190 ರೂ.
  • ಬ್ಯಾಕ್ ಪೇಪರ್ ವಿಸ್ಕಿ: ಹಿಂದಿನ ಬೆಲೆ – 106, ಏರಿಕೆ ಬೆಲೆ – 120 ರೂ.
  • ಬ್ಲಾಕ್ ಆ್ಯಂಡ್ ವೈಟ್: ಹಿಂದಿನ ಬೆಲೆ – 2464, ಏರಿಕೆ ಬೆಲೆ – 2800 ರೂ.
  • ಒಲ್ಡ್ ಮಂಕ್: ಹಿಂದಿನ ಬೆಲೆ – 137, ಏರಿಕೆ ಬೆಲೆ – 155 ರೂ.
  • ಮ್ಯನ್ಷನ್ ಹೌಸ್ ಬ್ರಾಂಡಿ: ಹಿಂದಿನ ಬೆಲೆ – 220, ಏರಿಕೆ ಬೆಲೆ – 240 ರೂ.
  • ಮಾಕ್ ಡುವೆಲ್ದ್ ಬ್ರಾಂಡಿ: ಹಿಂದಿನ ಬೆಲೆ – 170, ಏರಿಕೆ ಬೆಲೆ – 190 ರೂ.
  • ಇಂಪಿಯರಿಯಲ್ ಬ್ಲೂ: ಹಿಂದಿನ ಬೆಲೆ – 220, ಏರಿಕೆ ಬೆಲೆ – 240 ರೂ.
  • ಒಲ್ಡ್ ಟವರ್ ವಿಸ್ಕಿ: ಹಿಂದಿನ ಬೆಲೆ – 87, ಏರಿಕೆ ಬೆಲೆ – 100 ರೂ.
  • ಜಾನಿ ವಾಕರ್ ಬ್ಲಾಕ್ ಲೇಬಲ್: ಹಿಂದಿನ ಬೆಲೆ – 6250, ಏರಿಕೆ ಬೆಲೆ – 7150 ರೂ.
  • ಶಿವಾಸ್ ಸೀಗಲ್: ಹಿಂದಿನ ಬೆಲೆ – 6200, ಏರಿಕೆ ಬೆಲೆ – 7000 ರೂ.
  • ರಮನವ್ ಒಡ್ಕಾ – ಹಿಂದಿನ ಬೆಲೆ – 915, ಏರಿಕೆ ಬೆಲೆ – 1000 ರೂ.
  • ಮ್ಯಾಜಿಕ್ ಮುಮೆಂಟ್: ಹಿಂದಿನ ಬೆಲೆ – 330, ಏರಿಕೆ ಬೆಲೆ – 380 ರೂ.

    ಉಡುಪಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:21 pm, Tue, 11 July 23

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ