AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಆರೋಪ: ಉಡುಪಿಯಲ್ಲಿ ಎಫ್​ಐಆರ್ ದಾಖಲು

ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಟಿಕೆಟ್ ಕೊಡಿಸುವ ನೆಪದಲ್ಲಿ ವಂಚನೆ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಆರೋಪ ಕೇಳಿಬಂದಿದೆ. ಬಟ್ಟೆ ಅಂಗಡಿ ಇಟ್ಟು ಕೊಡುವುದಾಗಿ ಲಕ್ಷಾಂತರ ರೂಪಾಯಿ ಪಡೆದ ವಂಚಿಸಿದ ಬಗ್ಗೆ ಉಡುಪಿಯಲ್ಲಿ ಎಫ್​ಐಆರ್ ದಾಖಲಾಗಿದೆ.

ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಆರೋಪ: ಉಡುಪಿಯಲ್ಲಿ ಎಫ್​ಐಆರ್ ದಾಖಲು
ಚೈತ್ರಾ ಕುಂದಾಪುರ ವಿರುದ್ಧ ಉಡುಪಿಯಲ್ಲಿ ಮತ್ತೊಂದು ಎಫ್​ಐಆರ್ ದಾಖಲು
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Sep 18, 2023 | 9:49 PM

Share

ಉಡುಪಿ, ಸೆ.18: ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಟಿಕೆಟ್ ಕೊಡಿಸುವ ನೆಪದಲ್ಲಿ ವಂಚನೆ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ (Chaitra Kundapur) ವಿರುದ್ಧ ಮತ್ತೊಂದು ವಂಚನೆ ಆರೋಪ ಕೇಳಿಬಂದಿದೆ. ಬಟ್ಟೆ ಅಂಗಡಿ ಇಟ್ಟು ಕೊಡುವುದಾಗಿ ಲಕ್ಷಾಂತರ ರೂಪಾಯಿ ಪಡೆದ ವಂಚಿಸಿದ ಆರೋಪ ಸಂಬಂಧ ಉಡುಪಿಯಲ್ಲಿ ಎಫ್​ಐಆರ್ ದಾಖಲಾಗಿದೆ.

ಬಟ್ಟೆ ಅಂಗಡಿ ಇಟ್ಟು ಕೊಡುವುದಾಗಿ 5 ಲಕ್ಷ ರೂ. ಪಡೆದು ವಂಚನೆ ಎಸಗಿದ್ದಾಗಿ ಆರೋಪಿಸಿ ಬಿಜೆಪಿ ಕಾರ್ಯಕರ್ತ ಸುಧೀನ್​ ಎಂಬುವರು ಬ್ರಹ್ಮಾವರ ವೃತ್ತ ವ್ಯಾಪ್ತಿಯ ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಎಫ್ಐಆರ್​ ದಾಖಲಿಸಿದ್ದಾರೆ.

2015ರಲ್ಲಿ ಸುಧೀನ ಅವರಿಗೆ ಚೈತ್ರಾ ಕುಂದಾಪುರ ಪರಿಚಯವಾಗಿದೆ. ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿರುವ ಸಚಿವರು, ಮಂತ್ರಿಗಳ, ಶಾಸಕರ ನಿಕಟ ಸಂಪರ್ಕವಿದೆ ಎಂದು ನಂಬಿಸಿದ್ದ ಚೈತ್ರಾ, 2018-2023 ರ ಅವಧಿಯಲ್ಲಿ ಅಂಗಡಿ ನಿರ್ಮಾಣಕ್ಕೆ ಐದು ಲಕ್ಷ ಹಣವನ್ನು ಹಂತ ಹಂತವಾಗಿ ಪಡೆದ್ದಾಳೆ. ಮೂರು ಲಕ್ಷವನ್ನ ಚೈತ್ರಾ ಖಾತೆಗೆ ವರ್ಗಾಯಿಸಿದ್ದ ಸುದೀನ, ಉಳಿದ ಎರಡು ಲಕ್ಷ ಹಣವನ್ನ ನಗದು ರೂಪದಲ್ಲಿ ನೀಡಿದ್ದರು.

ಇದನ್ನೂ ಓದಿ: ಚೈತ್ರಾ ಕುಂದಾಪುರ ಡೀಲ್ ವಿಷಯ ಸಿಟಿ ರವಿಗೆ ಮೊದಲೇ ಗೊತ್ತಿತ್ತಾ? ಸೂಲಿಬೆಲೆ ಜೊತೆ ನಡೆದಿತ್ತಾ ಮಾತುಕತೆ?

ಬಟ್ಟೆ ಅಂಗಡಿಗೆ ಹಣ ಪಡೆದು ನಿರ್ಮಾಣ ವಿಳಂಬವಾದಾಗ ಇನ್ನಷ್ಟು ಹಣದ ಬೇಡಿಕೆ ಇಟ್ಡ ಚೈತ್ರಾ, ಅಂಗಡಿ ನಿರ್ಮಣ ವಿಳಂಬವಾಗಿರುವುದಕ್ಕೆ ಸ್ಥಳೀಯ ಮುಖಂಡರಲ್ಲಿ ಮತುಕತೆ ನಡೆಸಿದ್ದು, ಅಂತಿಮ ಹಂತ ಎಂದು ನಂಬಿಸಿದ್ದಳು. ಕೊನೆಗೆ ಚುನಾವಣಾ ಪ್ರಚಾರ, ಭಾಷಣ, ಕಾರ್ಯಕಾರಣಿ ಸಭೆ, ಪಕ್ಷದ ಮುಖಂಡರ ಭೇಟಿ ನೆಪ ಹೇಳಿ ತಪ್ಪಿಸಿಕೊಳ್ಳುತ್ತಿದ್ದಳು.

ಅನುಮಾನಗೊಂಡ ಸುದೀನ ಕೂಡಲೇ ಬಟ್ಟೆ ಅಂಗಡಿಗೆ ಒತ್ತಾಯಿಸಿದ. ಈ ವೇಳೆ ಸುಳ್ಳು ಅತ್ಯಾಚಾರ ಪ್ರಕರಣ ಕೊಡುತ್ತೇನೆ, ಬಾಡಿಗೆ ಗೂಂಡಾಗಳಿಂದ ಕೊಲೆ‌ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾಳೆ. ಹಲವರ ಮನವೊಲಿಕೆ ಬಳಿಕ‌ ಇದೀಗ ಸುಧೀನ ಅವರು ದೂರು ನೀಡಿದ್ದಾರೆ. ಅದರಂತೆ ಪೊಲೀಸರು ಚೈತ್ರಾ ವಿರುದ್ಧ 506, 417, 420 ಐಪಿಸಿ‌ ಸೆಕ್ಷನ್ ಅಡಿ ಎಫ್​ಐಆರ್ ದಾಖಲಿಸಿದ್ದಾರೆ.

ಹಿಂದೂ ಕಾರ್ಯಕರ್ತರೇ ಚೈತ್ರಾ ಕುಂದಾಪುರಳ ಟಾರ್ಗೆಟ್?

ಚೈತ್ರಾ ಕುಂದಾಪುರ ಹಿಂದುತ್ವ, ಕೇಸರಿಯನ್ನೇ ಬಂಡವಾಳವನ್ನಾಗಿಸಿಕೊಂಡು ಕಾರ್ಯಕರ್ತರನ್ನೇ ವಂಚಿಸುತ್ತಿದ್ದರೇ ಎಂಬ ಅನುಮಾನಕ್ಕೆ ಸದ್ಯ ದಾಖಲಾದ ಪ್ರಕರಣಗಳೇ ಪುಷ್ಠಿ ನೀಡುತ್ತವೆ. ಬೈಂದೂರಿನ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಟಿಕೆಟ್ ಕೊಡಿಸುವ ಭರವಸೆ ನೀಡಿದ ಚೈತ್ರಾ ಆ್ಯಂಡ್ ಗ್ಯಾಂಗ್ ಐದು ಕೋಟಿ ಪಡೆದು ನಂತರ ವಂಚಿಸಿದೆ.

ಈ ನಡುವೆ ಮತ್ತೊಂದು ವಂಚನೆ ಪ್ರಕರಣ ದಾಖಲಿಸಿದ ಸುಧೀನ್ ಬಿಜೆಪಿ ಕಾರ್ಯಕರೇ ಆಗಿದ್ದಾರೆ. ಬಟ್ಟೆ ಅಂಗಡಿ ಉದ್ಯಮ ನಡೆಸಲು ನಿರ್ಧರಿಸಿದ್ದಾರೆ. ಆದರೆ ಇವರಿಗೂ ಚೈತ್ರಾ ಕುಂದಾಪುರ ಐದು ಲಕ್ಷ ವಂಚಿಸಿದ್ದಾರೆ ಎಂಬುದು ಇದೀಗ ಬೆಳಕಿಗೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:13 pm, Mon, 18 September 23

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ