AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ನಡೆಯಿತು ಮತ್ತೊಂದು ಗ್ಯಾಂಗ್​ ವಾರ್: ಪುಂಡರ ಅಟ್ಟಹಾಸಕ್ಕೆ ಭಯಭೀತರಾದ ಜನ

ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ನಡೆದ ಗ್ಯಾಂಗ್​ ವಾರ್​ ಜನರು ಮರೆಯುವ ಮುನ್ನೆವೇ ಮತ್ತೊಂದು ಗ್ಯಾಂಗ್​ ವಾರ್​ ನಡೆದಿದೆ. ಉಡುಪಿಯ ಪುತ್ತೂರಿ‌ನ ಬಿರಿಯಾನಿ ಪಾಯಿಂಟ್‌ ಬಳಿ ಜೂನ್​ 15 ರಂದು ಗ್ಯಾಂಗ್​ ವಾರ್ ನಡೆದಿದ್ದು, ಜನರು ಭಯಭೀತರಾಗಿದ್ದಾರೆ.​

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Jun 18, 2024 | 9:49 AM

Share

ಉಡುಪಿ, ಜೂನ್​ 18: ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್ (Udupi Gang War) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೂನ್ 15ರ ರಾತ್ರಿ ಘಟನೆ ನಡೆದಿದೆ. ಪುತ್ತೂರಿನ ಸೆಲೂನ್ ನೌಕರ ಚರಣ್, ಶಬರಿ ಎಂಬಾತನಿಗೆ ಬೈದಿದ್ದನು. ಈ ವಿಚಾರ ತಿಳಿದ ಪ್ರವೀಣ್ ಮತ್ತು ಈತನ ಗ್ಯಾಂಗ್ ಮಾತುಕತೆಗೆಂದು ಚರಣ್​ನನ್ನು ಉಡುಪಿ ನಗರದ ಪುತ್ತೂರಿ‌ನ ಬಿರಿಯಾನಿ ಪಾಯಿಂಟ್‌ ಬಳಿ ಕರೆದಿದ್ದರು.

ಚರಣ್ ತನ್ನ ಮೂವರು ಸ್ನೇಹಿತರ ಜೊತೆಗೂಡಿ ಆಗಮಿಸಿದ್ದನು. ಪ್ರವೀಣ್ ಆ್ಯಂಡ್​ ಟೀಂ ಇವರ ತಲವಾರು ಬೀಸಿದೆ. ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಮತ್ತು ಸಂಗಡಿಗರು ಬೈಕ್, ಸ್ಕೂಟರ್ ಬಿಟ್ಟು ಓಡಿದ್ದಾರೆ. ಚರಣ್ ಸಿಗದಿದ್ದಕ್ಕೆ ಪ್ರವೀಣ್​​ ಮತ್ತು ಆತನ ಟೀಂ ಆತನ ಬೈಕ್ ಮೇಲೆ ತಲವಾರಿನಿಂದ ಹಾನಿ ಮಾಡಿದ್ದಾರೆ. ಪುಂಡರು ತಾವು ಕೃತ್ಯವೆಸಗಿರುವ ದೃಶ್ಯವನ್ನು ವೀಡಿಯೋ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕನಕಪುರದಲ್ಲೂ ಗ್ಯಾಂಗ್ ವಾರ್ ಆತಂಕ: ವ್ಯಕ್ತಿಯ ಕೊಲ್ಲಲು ಹೋಗಿ ಆತನ‌ ತಂದೆ‌ಯನ್ನೇ ಕೊಲೆ ಮಾಡಿದ ಗ್ಯಾಂಗ್

ಉಡುಪಿ ಜಿಲ್ಲೆಯಲ್ಲಿ ಒಂದೇ ತಿಂಗಳು ಅಂತರದಲ್ಲಿ ಮೂರು ಗ್ಯಾಂಗ್ ವಾರ್ ಪ್ರಕರಣ ವರದಿಯಾದವು. ಹೆಚ್ಚುತ್ತಿರುವ ಗ್ಯಾಂಗ್ ವಾರ್​ನಿಂದ ಉಡುಪಿ ನಗರದ ಜನತೆ ಭಯ ಭೀತರಾಗಿದ್ದಾರೆ.

ಮೇ 18 ರಂದು ನಡೆದಿತ್ತು ಭಯಾನಕ ಗ್ಯಾಂಗ್​ ವಾರ್​

ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ಮೇ 18ರ ಮುಂಜಾನೆ 2 ಗಂಟೆಯ ಹೊತ್ತಿಗೆ ಕುಂಜಿಬೆಟ್ಟು ರಸ್ತೆಯಲ್ಲಿ ಟೀಂ ಗರುಡ ಎರಡು ತಂಡಗಳು ಗಾಂಜಾ ಅಮಲಿನಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಕಾಳಗ ನಡೆಸಿದ್ದವು. ಅಲ್ಲದೆ ತಲವಾರು ಹಿಡಿದು, ಬಡಿದಾಡಿಕೊಂಡಿದ್ದವು. ನಗರವೆಲ್ಲ ಸೈಲೆಂಟ್‌ ಆಗಿರುವ ಹೊತ್ತಿಗೆ ಕಾರುಗಳ ಗುದ್ದಾಟ, ತಲವಾರು ಹಿಡಿದು ಬಡಿದಾಡುತ್ತಿರುವುದನ್ನು ಸುತ್ತಲಿನ ಫ್ಲ್ಯಾಟ್‌ ನಿವಾಸಿಗಳು ಕಂಡು ಬೆಚ್ಚಿ ಬಿದ್ದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:31 am, Tue, 18 June 24

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು