AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Army Chopper Crash: ಉಡುಪಿಯ ಹೆಮ್ಮೆಯ ಅಳಿಮಯ್ಯ ಲೆ.ಕರ್ನಲ್ ಹರ್ಜಿಂದರ್ ಸಿಂಗ್ ಸಾವು ತಿಳಿಯುತ್ತಿದ್ದಂತೆ ಸಾಲ್ಮರದ ಮನೆಯಲ್ಲಿ ಮೌನ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಲ್ಮರ ಗ್ರಾಮದ ನಿವಾಸಿಗಳಾದ ದಿವಂಗತ ಫೆಲಿಕ್ಸ್ ಮಿನೇಜಸ್ ಮತ್ತು ಮೇರಿ ಮಿನೇಜಸ್ ದಂಪತಿಯ ಮಗಳು ಆಗ್ನೇಸ್ ಪ್ರಫುಲ್ಲ ಮಿನೇಜಸ್ ಅವರನ್ನು ವಿವಾಹವಾಗಿದ್ದರು.

Army Chopper Crash: ಉಡುಪಿಯ ಹೆಮ್ಮೆಯ ಅಳಿಮಯ್ಯ ಲೆ.ಕರ್ನಲ್ ಹರ್ಜಿಂದರ್ ಸಿಂಗ್ ಸಾವು ತಿಳಿಯುತ್ತಿದ್ದಂತೆ ಸಾಲ್ಮರದ ಮನೆಯಲ್ಲಿ ಮೌನ
ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್
TV9 Web
| Edited By: |

Updated on: Dec 09, 2021 | 2:04 PM

Share

ಉಡುಪಿ: ತಮಿಳುನಾಡಿನ ಕೂನೂರು ಬಳಿ ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಕಾರ್ಕಳದ ಅಳಿಯನಾಗಿದ್ದರು ಎಂಬ ಮಾಹಿತಿ ಸಿಕ್ಕಿದೆ. ಉಡುಪಿಯ ಹೆಮ್ಮೆಯ ಅಳಿಮಯ್ಯ ಹೆಲಿಕಾಪ್ಟರ್ ದುರಂತದಲ್ಲಿ ಅಂತ್ಯ ಕಂಡಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಲ್ಮರ ಗ್ರಾಮದ ನಿವಾಸಿಗಳಾದ ದಿವಂಗತ ಫೆಲಿಕ್ಸ್ ಮಿನೇಜಸ್ ಮತ್ತು ಮೇರಿ ಮಿನೇಜಸ್ ದಂಪತಿಯ ಮಗಳು ಆಗ್ನೇಸ್ ಪ್ರಫುಲ್ಲ ಮಿನೇಜಸ್ ಅವರನ್ನು ವಿವಾಹವಾಗಿದ್ದರು. ಸೇನೆಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಫುಲ್ಲಾ ಅವರನ್ನು ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಪ್ರೀತಿಸಿ ಮದುವೆಯಾಗಿದ್ದರು. ಈಗ ದುರಂತ ಘಟನೆ ಬಳಿಕ ಪ್ರಫುಲ್ಲಾ ಅವರ ಮನೆಯಲ್ಲಿ ಸೂತಕ ಆವರಿಸಿದೆ. ತಾಯಿ ಮೇರಿ, ಅಕ್ಕ- ಬಾವ ಕಣ್ಣೀರು ಹಾಕಿದ್ದಾರೆ.

ಪ್ರಫುಲ್ಲಾ ಸದ್ಯ ಲೆಫ್ಟಿನೆಂಟ್ ಹುದ್ದೆಯಲ್ಲಿದ್ದಾರೆ. ಹರ್ಜಿಂದರ್ ಸಿಂಗ್ ಮತ್ತು ಪ್ರಫುಲ್ಲಾ ಕರ್ತವ್ಯದಲ್ಲಿದ್ದಾಗ ಇಬ್ಬರು ಒಬ್ಬರನೊಬ್ಬರು ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ತಂದೆ-ತಾಯಿ ನೋಡಲು ಹಲವು ಬಾರಿ ಸಾಲ್ಮರಕ್ಕೆ ಭೇಟಿ ಕೊಟ್ಟಿದ್ದರು. ರಜೆ ಇದ್ದಾಗಲೆಲ್ಲ ಇಲ್ಲಿಗೆ ಬಂದು ಹೋಗುತ್ತಿದ್ದರು. ಪ್ರಫುಲ್ಲಾ ಕುಟುಂಬಸ್ಥರ ಜೊತೆ ಆತ್ಮೀಯ ಒಳನಾಟ ಹೊಂದಿದ್ದ ಹರ್ಜಿಂದರ್ ಸಿಂಗ್ ಸಾವಿನ ಸುದ್ದಿ ಕಿವಿಗೆ ಬಿದ್ದಂತೆ ಕುಟುಂಬಸ್ಥರು ಶೋಕಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ: ಝೂಮ್​ ವಿಡಿಯೋ ಕಾಲ್​ನಲ್ಲಿ 900ಕ್ಕೂ ಹೆಚ್ಚು ಮಂದಿಯನ್ನು ವಜಾ ಮಾಡಿದ ವಿಧಾನಕ್ಕೆ ವಿಶಾಲ್​ ಗರ್ಗ್ ಕ್ಷಮೆ

ವರುಣ್​ ಸಿಂಗ್​ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವುದನ್ನು ಖಚಿತ ಪಡಿಸಿದ ತಂದೆ ಕೆ.ಪಿ.ಸಿಂಗ್​; ಮಗನ ಪರಿಸ್ಥಿತಿ ಬಗ್ಗೆ ಮೌನ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​