AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಬಾಲಕೃಷ್ಣ ಹತ್ಯೆ: ಆರೋಪಿಗಳ 5 ತಿಂಗಳ ಕೊಲೆ ಸಂಚು ಬಯಲು

ಉಡುಪಿಯಲ್ಲಿ ನಡೆದ ರೋಚಕ ಕೊಲೆ ಪ್ರಕರಣದಲ್ಲಿ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಅವರ ಸಂಚು ಬಯಲಾಗಿದೆ. ಸ್ಲೋ ಪಾಯ್ಸನ್ ಬಳಸಿ ಬಾಲಕೃಷ್ಣನನ್ನು ಕೊಲ್ಲಲು ಐದು ತಿಂಗಳುಗಳ ಹಿಂದೆ ಯೋಜನೆ ರೂಪಿಸಲಾಗಿತ್ತು. ಆರೋಪಿಗಳು ಕೊಲೆ ಯೋಜನೆ ರೂಪಿಸಿದ್ದು ಹೇಗೆ? ಎಂಬ ಸತ್ಯ ಬಯಲಾಗಿದೆ.

ಉಡುಪಿ ಬಾಲಕೃಷ್ಣ ಹತ್ಯೆ: ಆರೋಪಿಗಳ 5 ತಿಂಗಳ ಕೊಲೆ ಸಂಚು ಬಯಲು
ಆರೋಪಿಗಳಾದ ಪ್ರತಿಮಾ, ದಿಲೀಪ್​
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Oct 29, 2024 | 2:59 PM

Share

ಉಡುಪಿ, ಅಕ್ಟೋಬರ್​ 29: ಪತಿ ಬಾಲಕೃಷ್ಣನನ್ನು (44) ಕೊಲೆ ಮಾಡಲು ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ಹೇಗೆ ಪ್ಲಾನ್​ ಮಾಡಿದ್ದರು ಎಂಬ ರೋಚಕ ಅಂಶ ಬಯಲಾಗಿದೆ. ಬಾಲಕೃಷ್ಣ ಅವರನ್ನು ಕೊಲೆ ಮಾಡಲು ಆರೋಪಿಗಳು ಐದು ತಿಂಗಳ ಹಿಂದೆಯೇ ಸಂಚು ರೂಪಿಸಿದ್ದರು. ಬಾಲಕೃಷ್ಣ ಅವರಿಗೆ ಸ್ಲೋ ಪಾಯ್ಸನ್​​ ನೀಡಿ ಕೊಲೆ ಮಾಡಬೇಕೆಂದು ಆರೋಪಿಗಳು ಮೊದಲೆ ನಿರ್ಧರಿಸಿದ್ದರು.

ಅದರಂತೆ, ಬಾಲಕೃಷ್ಣ ಅವರನ್ನು ಕೊಲೆ ಮಾಡಲು ಪ್ರತಿಮಾ ಪ್ರಿಯಕರ ದಿಲೀಪ್​ ಹೆಗ್ಡೆ ಸ್ಲೋ ಪಾಯ್ಸನ್​​​ಗಾಗಿ ಹುಡಕಾಟ ನಡೆಸಿದ್ದನು. ಸ್ಲೋ ಪಯ್ಸಾನ್​​ ಹೇಗೆ ಕಾರ್ಯ ನಿರ್ವಹಿಸುತ್ತದೆ? ಯಾವ ಸ್ಲೋ ಪಾಯ್ಸನ್​​ ನೀಡಿದರೆ ವ್ಯಕ್ತಿ ಸಾಯುತ್ತಾನೆ ಎಂದು ಆರೋಪಿ ದಿಲೀಪ್ ಹೆಗ್ಡೆ ಗೂಗಲ್​ನಲ್ಲಿ ಹುಡುಕಾಡಿದ್ದನು. ಆಗ, ಆರ್ಸೆನಿಕ್ ಟ್ರೈಆಕ್ಸೈಡ್ ಎಂಬ ರಾಸಾಯನಿಕ ವಸ್ತು ಬಗ್ಗೆ ತಿಳಿದಿದೆ.

ನಂತರ, ಆರ್ಸೆನಿಕ್ ಟ್ರೈಆಕ್ಸೈಡ್ ಹೇಗೆ ಕಾರ್ಯ ನಿರ್ವಹಿಸುತ್ತದೆ? ಆರ್ಸೆನಿಕ್ ಟ್ರೈಆಕ್ಸೈಡ್ ಸೇವಿಸಿದ ಮೇಲೆ ಎಷ್ಟು ದಿನದ ಬಳಿಕ ಮನುಷ್ಯ ಸಾಯುತ್ತಾನೆ ಎಂಬೆಲ್ಲ ವಿಚಾರದ ಬಗ್ಗೆ ತಿಳಿದುಕೊಂಡಿದ್ದಾನೆ. ಇನ್ನು, “ಆರ್ಸೆನಿಕ್ ಟ್ರೈಆಕ್ಸೈಡ್ ರಾಸಾಯನಿಕ ವಸ್ತು ಹೆಚ್ಚು ವಿಷಕಾರಿ ಮತ್ತು ಬಹುಮುಖ ಸಂಯುಕ್ತ ವಸ್ತು. ಇದನ್ನು ಶಾಲಾ-ಕಾಲೇಜುಗಳ ಲ್ಯಾಬ್‌ಗಳಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಬಿಳಿ, ಹಳದಿ ಬಣ್ಣದ ಪುಡಿ. ವಾಸನೆ ಇರುವುದಿಲ್ಲ.”

ಇದನ್ನೂ ಓದಿ: ಅನ್ನದಲ್ಲಿ ವಿಷ ಬೆರೆಸಿ ಗಂಡನಿಗೆ ಕೈ ತುತ್ತು ತಿನ್ನಿಸಿ ಕೊಂದ ಪತ್ನಿ, ಆ ವಿಷ ಯಾವುದು ಗೊತ್ತಾ?

ಆರೋಪಿ ದಿಲೀಪ್​ ಹೆಗ್ಡೆ ಜೂನ್ ತಿಂಗಳಲ್ಲಿ ಉಡುಪಿಯ ರಮನ್ಸ್ ಲ್ಯಾಬ್​​ನಲ್ಲಿ ಆರ್ಸೆನಿಕ್ ಟ್ರೈಆಕ್ಸೈಡ್ ಬಗ್ಗೆ ವಿಚಾರಿಸಿದ್ದಾನೆ. ಆಗ, ಆರ್ಸೆನಿಕ್ ಟ್ರೈಆಕ್ಸೈಡ್ ಅನ್ನು ಶಾಲಾ-ಕಾಲೇಜುಗಳ ಲ್ಯಾಬ್​ಗಳಲ್ಲಿ ಬಳಸಲಾಗುತ್ತದೆ ಎಂದು ತಿಳಿದುಕೊಂಡಿದ್ದಾನೆ. ಅಲ್ಲದೇ, ಈ ಆರ್ಸೆನಿಕ್ ಟ್ರೈಆಕ್ಸೈಡ್ ಪೌಡರ್​ ಅನ್ನು ಶಾಲಾ-ಕಾಲೇಜುಗಳಿಗೆ ಹೊರತುಪಡಿಸಿ ಹೊರಗಿನವರಿಗೆ ಸಿಗುವುದಿಲ್ಲ ಎಂಬುವುದನ್ನೂ ತಿಳಿದಿದ್ದಾನೆ.

ಬಳಿಕ, ದಿಲೀಪ್​ ಹೆಗ್ಡೆ “ತಾನು ವೈದಕೀಯ ವಿದ್ಯಾರ್ಥಿ, ಲ್ಯಾಬ್ ಬಳಕೆಗಾಗಿ ಆರ್ಸೆನಿಕ್ ಟ್ರೈಆಕ್ಸೈಡ್ ಬೇಕಾಗಿದೆ” ಅಂತ ಉಡುಪಿಯ ರಮನ್ಸ್ ಲ್ಯಾಬ್​ಗೆ ಕರೆ ಮಾಡಿ, ಆರ್ಡರ್​​ ಮಾಡಿದ್ದಾನೆ. ಬಳಿಕ, ರಮನ್ಸ್ ಲ್ಯಾಬ್​ಗೆ ತೆರಳಿ ಹಣ ಪಾವತಿ ಮಾಡಿದ್ದಾನೆ. ಒಂದು ವಾರದ ಬಳಿಕ ರಮನ್ಸ್ ಲ್ಯಾಬ್ ಸಿಬ್ಬಂದಿ ಆರೋಪಿ ದಿಲೀಪ್​ ಹೆಗ್ಡೆಗೆ ಕರೆ ಮಾಡಿ ವಿಳಾಸ ಕೇಳಿದ್ದಾರೆ. ನಂತರ, ಲ್ಯಾಬ್​ ಸಿಬ್ಬಂದಿ ದಿಲೀಪ್ ವಿಳಾಸಕ್ಕೆ ಆರ್ಸೆನಿಕ್ ಟ್ರೈಆಕ್ಸೈಡ್ ಪಾರ್ಸೆಲ್ ಕಳಿಸಿದ್ದಾರೆ.

ಶುರುವಾಯ್ತು ಪ್ರತಿಮಾಳ ಕಹಾನಿ

ಖರೀದಿ ಮಾಡಿದ್ದ ಆರ್ಸೆನಿಕ್ ಟ್ರೈಆಕ್ಸೈಡ್ ಅನ್ನು ಆರೋಪಿ ದಿಲೀಪ್​ ಎರಡು ಪ್ರತ್ಯೇಕ ಬಾಟಲಿಗಳಲ್ಲಿ ತುಂಬಿದ್ದಾನೆ. ಬೇರೆ ಬಾಟಲಿಗೆ ತುಂಬಿದ್ದ ಆರ್ಸೆನಿಕ್ ಟ್ರೈಆಕ್ಸೈಡ್ ಪೌಡರ್​ ಅನ್ನು ಪಾರ್ಲರ್​ನಲ್ಲಿದ್ದ ಪ್ರೇಯಸಿ ಪ್ರತಿಮಾಳಿಗೆ ನೀಡಿದ್ದಾನೆ. ಆಗಸ್ಟ್​​​ವರೆಗೆ ಕಾದು, ನಂತರ ಸ್ಲೋ ಪಾಯ್ಸನ್​​ ನೀಡುವಂತೆ ಪ್ರೇಯಸಿ ಪ್ರತಿಮಾಗೆ ಹೇಳಿದ್ದಾನೆ.

ಅದರಂತೆ, ಪತ್ನಿ ಪ್ರತಿಮಾ ಗಣೇಶೊತ್ಸವ ಸಮಯದಲ್ಲಿ ಊಟದಲ್ಲಿ ಸ್ಲೋ ಪಾಯ್ಸನ್​ ‌ಬೆರೆಸಿ ಪತಿ ಬಾಲಕೃಷ್ಣ ಅವರಿಗೆ ನೀಡಲು ಆರಂಭಿಸಿದ್ದಾಳೆ. ಹೀಗೆ ಪ್ರತಿನಿತ್ಯ ಸ್ವಲ್ಪ ಸ್ವಲ್ಪ ಊಟದಲ್ಲಿ ಬೆರೆಸಿ ನೀಡಿದ್ದಾಳೆ. ದಿನಗಳು ಕಳದಂತೆ ಮೃತ ಬಾಲಕೃಷ್ಣ ಮಾನಸಿಕ ಹಾಗೂ ದೈಹಿಕ ಕ್ಷಮತೆ ಕಳೆದುಕೊಳ್ಳುತ್ತಾ ಹೋದರು.

ಆಗಸ್ಟ್ ತಿಂಗಳಲ್ಲಿ ಇವರಿಬ್ಬರ ಅಕ್ರಮ ಸಂಬಂಧ ಬಾಲಕೃಷ್ಣ ಅವರಿಗೆ ತಿಳಿದಿದೆ. ಗಲಾಟೆಯಾಗಿ ವಿಚಾರ ಪೊಲೀಸ್​ ಠಾಣೆ ಮೆಟ್ಟಿಲು ಏರಿದೆ. ಇದೇ ಸಿಟ್ಟಿನಲ್ಲಿ ಪ್ರತಿಮಾ ಆರ್ಸೆನಿಕ್ ಟ್ರೈಆಕ್ಸೈಡ್ ಪೌಡರ್​ ಅನ್ನು ಊಟದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆರಸಲು ಆರಂಭಿಸಿದ್ದಾಳೆ. ಇದರಿಂದ ಇನ್ನಷ್ಟು ಆರೋಗ್ಯ ಹದಗೆಟ್ಟು ಬಾಲಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾಲಕೃಷ್ಣ ಅವರು ಸಾವಿನಿಂದ ಪಾರಾಗಿದ್ದಾರೆ. ಇದರಿಂದ ಸಿಟ್ಟಿಗೆದ್ದ ಆರೋಪಿಗಳು ಬಾಲಕೃಷ್ಣ ಅವರನ್ನು ಉಸಿರುಗಟ್ಟಿಸಿ ಕೊಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ