AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಅಮಾನವೀಯ ಘಟನೆ: 3 ವರ್ಷದ ಮಗುವಿನ ಮೇಲೆ ತೀವ್ರವಾಗಿ ಹಲ್ಲೆ

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಚಕ್ಕರಮಕ್ಕಿ ಶೇಡಿಮನೆ ಗ್ರಾಮದ ಮೂರೂವರೆ ವರ್ಷದ ಮಗು ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಇದರಿಂದ ಮಗು ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದೆ. ಮಗುವಿಗೆ ಉಡುಪಿಯ ಕಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಉಡುಪಿಯಲ್ಲಿ ಅಮಾನವೀಯ ಘಟನೆ: 3 ವರ್ಷದ ಮಗುವಿನ ಮೇಲೆ ತೀವ್ರವಾಗಿ ಹಲ್ಲೆ
ಮಗುವಿನ ಮೈ ಮೇಲಿನ ಗಾಯದ ಗುರುತು
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Sep 14, 2024 | 1:43 PM

Share

ಉಡುಪಿ, ಸೆಪ್ಟೆಂಬರ್​ 14: ಹೆಬ್ರಿ (Hebri) ತಾಲೂಕಿನ ಚಕ್ಕರಮಕ್ಕಿ ಶೇಡಿಮನೆ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮೂರೂವರೆ ವರ್ಷದ ಮಗು ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಇದರಿಂದ ಮಗು ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದೆ. ಮೂರು ವರ್ಷದ ಪ್ರೇರಿತ್‌ ಹಲ್ಲೆ ಮಾಡಲಾಗಿದೆ. ಮೈ ಹುಷಾರಿಲ್ಲ ಅಂತ ಪ್ರೇರಿತ್​ನನ್ನು ಪೋಷಕರು ಗುರುವಾರ ಬೆಳಿಗ್ಗೆ ಉಡುಪಿಯ (Udupi) ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರೇರಿತ್​ಗೆ ಚಿಕತ್ಸೆ ನೀಡುವ ವೇಳೆ ವೈದ್ಯರು ಆತನ ಮೈ ಮೇಲಿನ ಗಾಯದ ಗುರುತುಗಳನ್ನು ಕಂಡಿದ್ದಾರೆ.

ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಪ್ರೇರಿತ್​​ನನ್ನು ಕೆಎಂಸಿ ಆಸ್ಪತ್ರೆಗೆ ಶಿಫ್ಟ್‌ ಮಾಡಿದ್ದಾರೆ. ಈ ವಿಚಾರವನ್ನು ವೈದ್ಯರು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ. ಬಳಿಕ, ಡಿಹೆಚ್​ಒ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ವಿಚಾರ ತಿಳಿಸಿದ್ದಾರೆ. ವಿಚಾರ ತಿಳಿದ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ನಂತರ, ಅಮಾವಾಸ್ಯೆಬೈಲು ಪೋಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ರೈಲ್ವೇ ಸಿಬ್ಬಂದಿಯನ್ನು ಹೊಡೆದು ಕೊಂದ ಪ್ರಯಾಣಿಕರು

ಇನ್ನು, ಮಗುವಿನ ಮೇಲಾದ ಗಾಯದ ಬಗ್ಗೆ ಪ್ರೇರಿತ್​ ತಾಯಿ ಪೂರ್ಣಪ್ರಿಯಾ ಸ್ಪಷ್ಟ ಮಾಹಿತಿ ನೀಡದೆ, ತಡವರಿಸಿದ್ದಾರೆ.

ಮಗುವಿನ ಮೇಲೆ ಗಂಭೀರವಾಗಿ ಹಲ್ಲೆ: ಮಕ್ಕಳ ರಕ್ಷಣಾಧಿಕಾರಿ ನಾಗರತ್ನ

ಪ್ರಕರಣ ಸಂಬಂಧ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಮಾತನಾಡಿ, ಮಗವಿನ ದೇಹದ ಮೇಲೆ ಗಾಯದ ಕಲೆ ಇದೆ. ಮೇಲ್ನೋಟಕ್ಕೆ ಗಂಭೀರವಾಗಿ ಹಲ್ಲೆ ಮಾಡಿರುವುದು ಗೊತ್ತಾಗುತ್ತಿದೆ. ಜಿಲ್ಲಾ ಆರೋಗ್ಯಾಧಿಕಾರಿ ನೀಡಿದ ಮಾಹಿತಿಯಂತೆ ಆಸ್ಪತ್ರೆಗೆ ಭೇಟಿ ನೀಡಿದ್ದೇವೆ. ಮಗುವಿನ ಆರೋಗ್ಯ ವಿಚಾರಿಸಿ ವರದಿ ಪಡೆದಿದ್ದೇವೆ. ಸದ್ಯ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಚೇತರಿಸಿಕೊಳ್ಳುತ್ತಿದೆ. ಮಗು ಚೇತರಿಸಿಕೊಂಡ ಬಳಿಕ ಹೇಳಿಕೆ ಪಡೆಯಲಿದ್ದೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮ ಮತ್ತು ಅಧರ್ಮ ಯಾವುದಕ್ಕೆ ಹೆಚ್ಚು ಪ್ರಾಶಸ್ತ್ಯ?
ಧರ್ಮ ಮತ್ತು ಅಧರ್ಮ ಯಾವುದಕ್ಕೆ ಹೆಚ್ಚು ಪ್ರಾಶಸ್ತ್ಯ?
ಇಂದು ಈ ರಾಶಿಯವರು ಇಂದು ತಾಳ್ಮೆ ಕಳೆದುಕೊಳ್ಳಬೇಡಿ!
ಇಂದು ಈ ರಾಶಿಯವರು ಇಂದು ತಾಳ್ಮೆ ಕಳೆದುಕೊಳ್ಳಬೇಡಿ!
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ