AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayodhya Ram Mandir: ಅಯೋಧ್ಯೆಯ ಶ್ರೀರಾಮ ಮೂರ್ತಿಗೆ ಕಾರ್ಕಳದ ಕೃಷ್ಣಶಿಲೆ

ಅಯೋಧ್ಯೆಯ ರಾಮ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ ಎಂದು ಕೇಂದ್ರ ಗಣಿ ಹಾಗೂ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

Ayodhya Ram Mandir: ಅಯೋಧ್ಯೆಯ ಶ್ರೀರಾಮ ಮೂರ್ತಿಗೆ ಕಾರ್ಕಳದ ಕೃಷ್ಣಶಿಲೆ
ಅಯೋಧ್ಯೆಯ ರಾಮ ಮೂರ್ತಿಗೆ ಆಯ್ಕೆಯಾದ ಕಾರ್ಕಳದ ಕೃಷ್ಣಶಿಲೆ
ಗಂಗಾಧರ​ ಬ. ಸಾಬೋಜಿ
|

Updated on:Mar 17, 2023 | 7:36 PM

Share

ಉಡುಪಿ: ಅಯೋಧ್ಯೆಯ ರಾಮ (Ayodhya Ram) ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ ಎಂದು ಕೇಂದ್ರ ಗಣಿ ಹಾಗೂ ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಟ್ವೀಟ್‌ ಮೂಲಕ ಶುಕ್ರವಾರ ತಿಳಿಸಿದ್ದಾರೆ. ರಾಮ ನಾಮ ಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ ಎನ್ನುವಂತೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭ್ಯವ ಪ್ರಭು ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀ ರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ. ಶಿಲ್ಪಿಗಳ ತವರೂರು ಎಂದೇ ಖ್ಯಾತವಾಗಿರುವ ಕಾರ್ಕಳದ ಈದು ಗ್ರಾಮದ ತುಂಗ ಪೂಜಾರಿಯವರ ಭೂಮಿಯಲ್ಲಿದ್ದ ಶಿಲೆಯನ್ನು ಆಯ್ಕೆ ಮಾಡಲಾಗಿದೆ. ಸಂಪೂರ್ಣ ವಿಶ್ವವೇ ಈ ಶಿಲೆಯಿಂದ ರೂಪುಗೊಳ್ಳಲಿರುವ ಭಗವಾನ್ ಶ್ರೀ ರಾಮನ ದರ್ಶನ ಪಡೆಯಲಿದೆ ಎಂಬುದು ನಮ್ಮನ್ನು ಪುಳಕಿತರನ್ನಾಗಿ ಹಾಗೂ ಪುನೀತರನ್ನಾಗಿಸುವಂತಹದಾಗಿದೆ. ಈ ಸೇವೆ ಮಾಡುವ ಅವಕಾಶವನ್ನು ರಾಜ್ಯಕ್ಕೆ ನೀಡಿದ ಪ್ರಭು ಶ್ರೀ ರಾಮನಿಗೆ ಶಿರಸಾಷ್ಟಾಂಗ ನಮಸ್ಕಾರಗಳು ಎಂದು ಹೇಳಿದ್ದಾರೆ.

ಇನ್ನು ಇದೇ ವೇಳೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್​​​ ರಾಯ್​ ಅವರು ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದ ಗರ್ಭ ಗುಡಿಯ ಚಿತ್ರವನ್ನು ಟ್ವೀಟ್​ ಮೂಲಕ ಹಂಚಿಕೊಂಡಿದ್ದಾರೆ.

2023ರ ಡಿಸೆಂಬರ್ ಒಳಗೆ ಗರ್ಭಗುಡಿ ನಿರ್ಮಾಣ

ರಾಮಮಂದಿರ ನಿರ್ಮಾಣ ಕಾರ್ಯವನ್ನು ಈಗ ವೇಗವಾಗಿ ಮಾಡಲಾಗುತ್ತಿದೆ. 2023ರ ಡಿಸೆಂಬರ್ ತಿಂಗಳೊಳಗಾಗಿ ರಾಮಮಂದಿರದ ಗರ್ಭಗುಡಿ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವ ಗುರಿಯನ್ನು ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹಾಕಿಕೊಂಡಿದೆ. ಗರ್ಭಗುಡಿಯಲ್ಲಿ ರಾಮಲಲ್ಲಾನನ್ನು ಪ್ರತಿಷ್ಠಾಪನೆ ಮಾಡಲಾಗುತ್ತೆ. ಬಳಿಕ ಗರ್ಭಗುಡಿಯ ದರ್ಶನ ಮಾಡಲು ಭಕ್ತರಿಗೆ ಅವಕಾಶ ನೀಡಲಾಗುತ್ತೆ. ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ನ್ನು ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ರಚಿಸಿದ್ದು, ಈ ಟ್ರಸ್ಟ್ ಈಗ ಮಂದಿರ ನಿರ್ಮಾಣದ ಹೊಣೆಯನ್ನು ಹೊತ್ತುಕೊಂಡಿದೆ.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ 1300 ಕೋಟಿ ವೆಚ್ಚದ ಅಂದಾಜು: ನೀಲಿ ಛಾಯೆಯ ಶ್ವೇತ ಶಿಲೆಯಲ್ಲಿ ಕಂಗೊಳಿಸಲಿದ್ದಾನೆ ಶ್ರೀರಾಮ

ಚಂಪತ್ ರಾಯ್ ಅವರು ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿಯಾಗಿದ್ದು, ನಿತ್ಯ ಮಂದಿರ ನಿರ್ಮಾಣ ಕಾರ್ಯದ ಉಸ್ತುವಾರಿ ಹಾಗೂ ಮೇಲ್ವಿಚಾರಣೆ ಮಾಡುತ್ತಿದ್ದಾರೆ. 2023ರ ಡಿಸೆಂಬರ್​ನೊಳಗಾಗಿ ಗರ್ಭಗುಡಿ ನಿರ್ಮಾಣ ಕಾರ್ಯ ಪೂರ್ಣಗೊಳಲಿದೆ.

2024ರ ಸಂಕ್ರಾಂತಿ ವೇಳೆಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆ

2024ರ ಸಂಕ್ರಾಂತಿ ವೇಳೆಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಆಗಲಿದೆ ಎಂದು ಇತ್ತೀಚೆಗೆ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿಕೆ ನೀಡಿದ್ದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಅವರು, ರಾಮಮಂದಿರ ನಿರ್ಮಾಣ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದೆ. ಈಗಾಗಲೇ ಪ್ರಧಾನ ಮಂತ್ರಿಗಳ ಆಶಯದಂತೆ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವಿಜ್ಞಾನಿಗಳು ಸಂಶೋಧನೆ ಮಾಡುತ್ತಿದ್ದಾರೆ. ರಾಮನವಮಿ ದಿನ ಅಯೋಧ್ಯೆಯ ರಾಮ ಮಂದಿರ ಶ್ರೀರಾಮನ ಮೂರ್ತಿಯ ಮೇಲೆ ತಿಲಕದ ರೀತಿಯಲ್ಲಿ ಸೂರ್ಯ‌ನ ಕಿರಣಗಳು ಬಿಳುವಂತೆ ಮಂದಿರ ನಿರ್ಮಾಣದ ಕೆಲಸ ನಡೆಯುತ್ತಿದೆ ಎಂದು ಹೇಳಿದ್ದರು.

ಇದನ್ನೂ ಓದಿ: Ayodhya Ram Temple ಅಯೋಧ್ಯೆ ರಾಮ ಮಂದಿರದ ನಿರ್ಮಾಣ ಕಾರ್ಯ ಆರಂಭ; ಮೂರು ಅಂತಸ್ತಿನ ಕಟ್ಟಡದ ವೆಚ್ಚ ಸುಮಾರು ₹1,800 ಕೋಟಿ

400 ಕೋಟಿ ರೂ. ವೆಚ್ಚದಲ್ಲಿ ರಾಮಮಂದಿರ ನಿರ್ಮಾಣ

ರಾಮಮಂದಿರ ನಿರ್ಮಾಣಕ್ಕೆ ಸುಮಾರು 400 ಕೋಟಿ ವೆಚ್ಚ ತಗಲಬಹುದೆಂದು ಅಂದಾಜಿಸಲಾಗಿತ್ತು. ಆದರೆ ಜಿಎಸ್​ಟಿ, ರಾಯಲ್ಟಿ ಮೊದಲಾದ ಅನೇಕ ಕಾರಣಗಳಿಂದ ನಿರ್ಮಾಣ ವೆಚ್ಚ 1300 ಕೋಟಿ ತಗಲಬಹುದೆಂದು ಅಂದಾಜಿಸಲಾಗಿ ಎಂದು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಸಭೆಯಲ್ಲಿ ಹೇಳಿಕೆ ನೀಡಿದ್ದಾರೆ. ಅಯೋಧ್ಯ ರಾಮ ಮಂದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ವಿಗ್ರಹ ನಿರ್ಮಾಣಕ್ಕೆ ಸಮಿತಿ ನಿರ್ಣಯಿಸಿದೆ. ಶಿಲ್ಪಶಾಸ್ತ್ರೋಕ್ತ ರೀತಿಯಲ್ಲಿ ಶ್ರೀರಾಮನ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪನೆಗೆ ತೀರ್ಮಾನ ಮಾಡಲಾಗಿದೆ. ಮಂದಿರ ನಿರ್ಮಾಣ ವೆಚ್ಚದಲ್ಲಿ ಹೆಚ್ಚಳ ಸಾಧ್ಯತೆಯಿದ್ದು, ಮಂದಿರ ನಿರ್ಮಾಣಕ್ಕೆ ದೇಣಿಗೆಯ ಮಹಾಪೂರವೇ ಹರಿದು ಬಂದಿದೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:10 pm, Fri, 17 March 23

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?