AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂದಾಪುರದಲ್ಲಿ ಲವ್ ಜಿಹಾದ್ ಆರೋಪಿ ಪೊಲೀಸರ ವಶಕ್ಕೆ; ನಾಳೆ ಕುಂದಾಪುರದಲ್ಲಿ ಪ್ರತಿಭಟನೆಗೆ ಕರೆ ನೀಡಿರುವ ಬಜರಂಗದಳ

ಮದುವೆಯಾಗಿದ್ದರೂ ಹಿಂದೂ ಯುವತಿ ಜೊತೆ ಆರೋಪಿ ಸಂಪರ್ಕ ಇಟ್ಟುಕೊಂಡಿದ್ದನಂತೆ. ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡಿದ್ದ. ಬಳಿಕ ಮದುವೆಯಾಗಲ್ಲ ಎಂದು ಹೇಳಿದ್ದ ಎಂಬ ಆರೋಪ ಕೇಳಿಬಂದಿದೆ.

ಕುಂದಾಪುರದಲ್ಲಿ ಲವ್ ಜಿಹಾದ್ ಆರೋಪಿ ಪೊಲೀಸರ ವಶಕ್ಕೆ; ನಾಳೆ ಕುಂದಾಪುರದಲ್ಲಿ ಪ್ರತಿಭಟನೆಗೆ ಕರೆ ನೀಡಿರುವ ಬಜರಂಗದಳ
ಆರೋಪಿ ಅಜೀಜ್ ಜೊತೆ ಶಿಲ್ಪಾ ದೇವಾಡಿಗ
TV9 Web
| Updated By: sandhya thejappa|

Updated on:May 30, 2022 | 3:43 PM

Share

ಉಡುಪಿ: ಕುಂದಾಪುರದಲ್ಲಿ ನಡೆದ ಲವ್ ಜಿಹಾದ್ (Love Jihad) ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಜೀಜ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೇ 23ರಂದು ಆತ್ಮಹತ್ಯೆಗೆ ಯತ್ನಿಸಿದ್ದ ಹಿಂದೂ ಯುವತಿ ಶಿಲ್ಪಾ ದೇವಾಡಿಗ, ಚಿಕಿತ್ಸೆ ಫಲಿಸದೆ ಮೇ 25ರಂದು ಮೃತಪಟ್ಟಿದ್ದಳು. ಈಕೆಯ ಸಾವಿನ ಬಳಿಕ ಮತಾಂತರ ಒತ್ತಾಯ ಮತ್ತು ಲವ್ ಜಿಹಾದ್ ಆರೋಪ ಕೇಳಿಬಂದಿತ್ತು. ಮದುವೆಯಾಗಿದ್ದರೂ ಹಿಂದೂ ಯುವತಿ ಜೊತೆ ಆರೋಪಿ ಸಂಪರ್ಕ ಇಟ್ಟುಕೊಂಡಿದ್ದನಂತೆ. ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡಿದ್ದ. ಬಳಿಕ ಮದುವೆಯಾಗಲ್ಲ ಎಂದು ಹೇಳಿದ್ದ ಎಂಬ ಆರೋಪ ಕೇಳಿಬಂದಿದೆ. ಈ ಲವ್ ಜಿಹಾದ್ ಪ್ರಕರಣವನ್ನು ಖಂಡಿಸಿ ಬಜರಂಗದಳ ನಾಳೆ ಕುಂದಾಪುರದಲ್ಲಿ ಪ್ರತಿಭಟನೆಗೆ ಕರೆ ನೀಡಿದೆ.

ಯುವತಿ ಅಣ್ಣ ಹೇಳಿದ್ದೇನು? ನನ್ನ ತಂಗಿಯನ್ನು ಅಜೀಜ್ ದುರುಪಯೋಗಪಡಿಸಿಕೊಂಡಿದ್ದಾನೆ. ಟಾರ್ಚರ್ ಕೊಟ್ಟು ಮತಾಂತರವಾಗಲು ಒತ್ತಾಯಿಸಿರಬೇಕು. ಆಕೆ ಆಸ್ಪತ್ರೆಯಲ್ಲಿ ಕಿರುಕುಳ ಕೊಟ್ಟ ವಿಚಾರ ಹೇಳಿದ್ದಾಳೆ. ಮದುವೆಯಾಗುವುದಾಗಿ ನಂಬಿಸಿ ಫೋಟೋ ವಿಡಿಯೋ ಮಾಡಿದ್ದಾಗಿ ಹೇಳಿದ್ದಾಳೆ. ಅವರಿಗೆ ಹೇಗೆ ಸಂಪರ್ಕವಾಗಿತ್ತು ನನಗೆ ಗೊತ್ತಿಲ್ಲ. ಆಕೆ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಅವನಿಗೆ ಈ ಮೊದಲೇ ಮದುವೆಯಾಗಿತ್ತು. ಮದುವೆಯಾಗಲು ಮತಾಂತರ ಆಗು ಎಂದು ಒತ್ತಾಯಿಸಿರುವ ಸಂಶಯ ಇದೆ ಎಂದರು.

ಹಿಂದೂ ಸಂಘಟನೆ ಒತ್ತಾಯ: ಲವ್ ಜಿಹಾದಿಗೆ ಯುವತಿ ಬಲಿಯಾಗಿದ್ದಾಳೆ ಎಂದು ಕುಂದಾಪುರದ ಹಿಂದೂ ಸಂಘಟನೆಗಳು ಆರೋಪಿಸಿವೆ. ಮದುವೆಯಾಗಿರುವ ಅಜೀಜ್ ಯುವತಿ ಜೊತೆ ಸಂಬಂಧ ಇರಿಸಿಕೊಂಡಿದ್ದ. ಅಜೀಜ್​ಗೆ ತಕ್ಕ ಶಿಕ್ಷೆ ಕೊಡಬೇಕೆಂದು ಹಿಂದೂ ಸಂಘಟನೆ ಮುಖಂಡರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ
Image
2009ರಲ್ಲಿ ಅಮೆರಿಕದ ಅಧ್ಯಕ್ಷರಾಗಿದ್ದ ಬರಾಕ್ ಒಬಾಮರ ತಲೆಗೂದಲು ಮುಟ್ಟಿ ನೋಡಿದ ಬಾಲಕ; 13 ವರ್ಷಗಳ ನಂತರ ಆತನ ಜತೆ ಒಬಾಮ ವರ್ಚುವಲ್ ಭೇಟಿ
Image
Nepal Plane Crash: ನೇಪಾಳದಲ್ಲಿ ವಿಮಾನ ಪತನ; 21 ಶವಗಳು ಪತ್ತೆ, 4 ಭಾರತೀಯರು ಸೇರಿ 22 ಪ್ರಯಾಣಿಕರೂ ಸಾವನ್ನಪ್ಪಿರುವ ಶಂಕೆ
Image
PM Cares: ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಹಲವು ಸೌಲಭ್ಯ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ
Image
ಆಮಿರ್​ ಖಾನ್​ ಮೇಲೆ ನಾಗ ಚೈತನ್ಯ ಫ್ಯಾನ್ಸ್​ ಬೇಸರ; ‘ಲಾಲ್​ ಸಿಂಗ್​ ಚಡ್ಡಾ’ ಟ್ರೇಲರ್​ನಿಂದ ನಿರಾಸೆ

ಇದನ್ನೂ ಓದಿ: 2009ರಲ್ಲಿ ಅಮೆರಿಕದ ಅಧ್ಯಕ್ಷರಾಗಿದ್ದ ಬರಾಕ್ ಒಬಾಮರ ತಲೆಗೂದಲು ಮುಟ್ಟಿ ನೋಡಿದ ಬಾಲಕ; 13 ವರ್ಷಗಳ ನಂತರ ಆತನ ಜತೆ ಒಬಾಮ ವರ್ಚುವಲ್ ಭೇಟಿ

ಇತ್ತೀಚೆಗೆ ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು  ಹೆಚ್ಚಾಗಿವೆ. ಸದ್ಯ ಕುಂದಾಪುರದಲ್ಲಿ ನಡೆದ ಈ ಪ್ರಕರಣದ ಬಗ್ಗೆ ಅನುಮಾನ ಹೆಚ್ಚಾಗಿದೆ. ಆರೋಪಿಯನ್ನು ಈಗಾಗಲೇ ಬಂಧಿಸಿದ್ದು, ವಿಚಾರಣೆ ಬಳಿಕ ಸತ್ಯ ತಿಳಿದುಬರಬೇಕಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:51 pm, Mon, 30 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ