AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿನ ಧರ್ಮ ಸಂಘರ್ಷದಿಂದ ಉದ್ದಿಮೆಗಳಿಗೆ ಹಿನ್ನಡೆ ಆಗುತ್ತೆ ಎಂಬುದು ಸುಳ್ಳು: ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಧರ್ಮ ಸಂಘರ್ಷದಿಂದ ಉದ್ದಿಮೆಗಳಿಗೆ ಹಿನ್ನಡೆ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದ ಐಟಿ ಕಂಪನಿಗಳಿಗೆ ನೆರೆಯ ರಾಜ್ಯಗಳಿಂದ ಆಹ್ವಾನ ವಿಚಾರವಾಗಿ ಉಡುಪಿ ಮಣಿಪಾಲದಲ್ಲಿ ಅವರು ಮಾತನಾಡಿದ್ದಾರೆ.

ಕರ್ನಾಟಕದಲ್ಲಿನ ಧರ್ಮ ಸಂಘರ್ಷದಿಂದ ಉದ್ದಿಮೆಗಳಿಗೆ ಹಿನ್ನಡೆ ಆಗುತ್ತೆ ಎಂಬುದು ಸುಳ್ಳು: ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Apr 11, 2022 | 9:54 PM

Share

ಉಡುಪಿ: ರಾಜ್ಯದಲ್ಲಿನ ಪ್ರಸಕ್ತ ಬೆಳವಣಿಗೆಯಿಂದ ಯಾವುದೇ ಸಮಸ್ಯೆಯಾಗಲ್ಲ. ಸಂಘರ್ಷದಿಂದ ಕೈಗಾರಿಕೆಗಳಿಗೆ ಸಮಸ್ಯೆಯಾಗುತ್ತೆ ಎಂಬುದು ಸುಳ್ಳು. ಕರ್ನಾಟಕ ರಾಜ್ಯಕ್ಕೆ ಅತಿಹೆಚ್ಚು ಎಫ್​ಡಿಐ ಹರಿದು ಬರುತ್ತಿದೆ. ತ್ರೈಮಾಸಿಕದಲ್ಲಿ ಶೇಕಡಾ 43ರಷ್ಟು ಹೂಡಿಕೆ ನಮ್ಮ ರಾಜ್ಯಕ್ಕೆ ಬಂದಿದೆ. ವಿಶ್ವದ ಮೂಲೆಮೂಲೆಗಳಿಂದ ಹೂಡಿಕೆದಾರರು ರಾಜ್ಯಕ್ಕೆ ಬರ್ತಿದ್ದಾರೆ. ಕೈಗಾರಿಕೆಗಳು ಕರ್ನಾಟಕ ತೊರೆಯುವ ಪ್ರಶ್ನೆಯೇ ಉದ್ಭವಿಸಿಲ್ಲ ಎಂದು ಕರ್ನಾಟಕ ರಾಜ್ಯದಲ್ಲಿ ಧರ್ಮ ಸಂಘರ್ಷದಿಂದ ಉದ್ದಿಮೆಗಳಿಗೆ ಹಿನ್ನಡೆ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದ ಐಟಿ ಕಂಪನಿಗಳಿಗೆ ನೆರೆಯ ರಾಜ್ಯಗಳಿಂದ ಆಹ್ವಾನ ವಿಚಾರವಾಗಿ ಉಡುಪಿ ಮಣಿಪಾಲದಲ್ಲಿ ಅವರು ಮಾತನಾಡಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಮಾನವ ಸಂಪನ್ಮೂಲ ಯಥೇಚ್ಛವಾಗಿದೆ. ರಾಜ್ಯದಲ್ಲಿ ಮೂಲಸೌಕರ್ಯದ ಗುಣಮಟ್ಟ ಬಹಳ ಚೆನ್ನಾಗಿದೆ. ಕರ್ನಾಟಕದಲ್ಲಿ 180 ಆರ್ & ಡಿ ಸೆಂಟರ್​ ಇದೆ. ಬೇರೆ ರಾಜ್ಯಗಳಲ್ಲಿ ಬೇಡಿಕೆಯಿಲ್ಲ ಹಾಗಾಗಿ ಆಫರ್​ ಕೊಡ್ತಿದ್ದಾರೆ. ಅಂಗಡಿಗಳಲ್ಲಿ ವ್ಯಾಪಾರ ಆಗದಿದ್ದಾಗ ಆಫರ್ ಕೊಡುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಪ್ರಮೋದ್ ಮುತಾಲಿಕ್ ಗಡಿಪಾರಿಗೆ ಒತ್ತಾಯ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ನಾನು ಈ ವಿವಾದದಲ್ಲಿ ಬೀಳಲು ಬಯಸುವುದಿಲ್ಲ. ಯಾರು ಏನು ಹೇಳಿಕೆ ಕೊಡುತ್ತಾರೆಂಬುದು ಮುಖ್ಯವಲ್ಲ. ರಾಜ್ಯದ ಜನರ ಆಸ್ತಿಪಾಸ್ತಿ ಜೀವ ರಕ್ಷಣೆ ನಮ್ಮ ಕರ್ತವ್ಯ. ಯಾರು ಏನೇ ಹೇಳಿಕೆ ಕೊಟ್ಟರೂ ರಾಜಿ ಇಲ್ಲ. ಶಾಂತಿ-ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ರಾಜಿ ಇಲ್ಲ. ಯಾರೇ ಇರಲಿ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ. ಹಲವು ರೀತಿಯ ಒತ್ತಾಯಗಳು ಬರಬಹುದು. ಸುಮ್ಮನೇ ವಿವಾದವನ್ನು ಬೆಳೆಸಲು ಈ ರೀತಿ ಮಾಡುತ್ತಾರೆ. ಸಮಸ್ಯೆ ಪರಿಹಾರ ಮಾಡಲು ದಿಟ್ಟ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಉಡುಪಿಯ ವಾಸುಕಿ ಸುಬ್ರಹ್ಮಣ್ಯ ದೇಗುಲದ ಬ್ರಹ್ಮಕಲಶೋತ್ಸದಲ್ಲಿ ಸಿಎಂ ಭಾಗಿ ಆಗಿದ್ದಾರೆ. ನಾಗದೇವರ ಸನ್ನಿಧಾನ ನಿರ್ಮಾಣ, ಪುನರ್​ಪ್ರತಿಷ್ಠಾನ ಕಾರ್ಯಕ್ರಮ, ನಾಗದೇವರ ದರ್ಶನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ ಆಗಿದ್ದಾರೆ. ನಾಗ ಪಾತ್ರಿಯಿಂದ ಪ್ರಸಾದ ಸ್ವೀಕರಿಸಿದ್ದಾರೆ. ಇಡೀ ನಾಡಿನ ಸುಭಿಕ್ಷೆಗೆ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಈ ನಾಡಿನ ಸೇವೆಮಾಡಲು ಭಗವಂತ ನನಗೆ ಆಶೀರ್ವಾದ ಮಾಡಿದ್ದಾನೆ. ರಾಷ್ಟ್ರದಲ್ಲೇ ಕರ್ನಾಟಕ ಸುಭೀಕ್ಷೆಯ ನಾಡಾಗಬೇಕೆಂದು ಪ್ರಾರ್ಥನೆ ಮಾಡಿದ್ದೇನೆ. ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ತಯಾರಿ ಪ್ರಾರಂಭಿಸಿದ್ದೇವೆ. ನಾಳೆಯಿಂದ ಎಲ್ಲಾ ತಂಡಗಳು ರಾಜ್ಯ ಪ್ರವಾಸ ಮಾಡಲಿವೆ. ಮೂರು ತಂಡಗಳು ಮೂರು ವಿಭಾಗಗಳನ್ನು ಹಂಚಿಕೊಂಡಿವೆ. ಕಾರ್ಯಕಾರಿ ಸಮಿತಿಗೂ ಮುನ್ನ ಒಂಬತ್ತು ಸಭೆ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಡಾ. ವಿ‌ಎಸ್‌ ಆಚಾರ್ಯ ಹೆಸರಿನ ನೂತನ ಬಸ್ ನಿಲ್ದಾಣ ಉದ್ಘಾಟಿಸಿದ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: ನೇಕಾರರು, ಮೀನುಗಾರರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ: ಉಡುಪಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

Published On - 9:53 pm, Mon, 11 April 22

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ