AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾ ಕುಂದಾಪುರಗೆ ಮನೆಯಲ್ಲಿ ಆಶ್ರಯ ನೀಡಿದ್ದ ಕಾಂಗ್ರೆಸ್ ಮಾಧ್ಯಮ ವಕ್ತಾರೆಗೂ ಸಂಕಷ್ಟ

Chaitra Kundapura Arrested ಬೈಂದೂರಿನ ಉದ್ಯಮಿಗೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂ​ ಎನ್ನುವರಿಗೆ ಸಂಕಷ್ಟ ಎದುರಾಗಿದೆ.

ಚೈತ್ರಾ ಕುಂದಾಪುರಗೆ ಮನೆಯಲ್ಲಿ ಆಶ್ರಯ ನೀಡಿದ್ದ ಕಾಂಗ್ರೆಸ್ ಮಾಧ್ಯಮ ವಕ್ತಾರೆಗೂ ಸಂಕಷ್ಟ
ಚೈತ್ರಾ ಕುಂದಾಪುರ -ಅಂಜುಂ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Sep 13, 2023 | 11:34 AM

Share

ಉಡುಪಿ, (ಸೆಪ್ಟೆಂಬರ್ 13): ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ(Chaitra Kundapura) ಸೇರಿದಂತೆ ಇಬ್ಬರನ್ನು ಬೆಂಗಳೂರಿನ ಸಿಸಿಬಿ (bengaluru CCB) ಪೊಲೀಸರು ಬಂಧಿಸಿದ್ದಾರೆ. ನಿನ್ನೆ (ಸೆಪ್ಟೆಂಬರ್ 12) ರಾತ್ರಿ ಉಡುಪಿಯ ಶ್ರೀಕೃಷ್ಣ ಮಠದ ಪಾರ್ಕಿಂಗ್​ ಸ್ಥಳದಲ್ಲಿ ಚೈತ್ರಾ ಸಿಕ್ಕಿಬಿದ್ದಿದ್ದಾಳೆ. ಇನ್ನು ಇದಕ್ಕೂ ಮೊದಲು ಚೈತ್ರಾ ಕುಂದಾಪುರ, ಕಾಂಗ್ರೆಸ್​ ಮುಖಂಡೆ ಮನೆಯಲ್ಲಿ ಅವಿತುಕೊಂಡಿದ್ದಳು ಎನ್ನುವ ಮಾಹಿತಿ ತಿಳಿದುಬಂದಿದೆ. ಇದೀಗ ಆರೋಪಿಗೆ ಆಶ್ರಯ ನೀಡಿದ ಆರೋಪದ ಮೇಲೆ ಕಾಂಗ್ರೆಸ್​ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂಗೆ ಸಿಸಿಬಿ ನೋಟಿಸ್ ನೀಡಿದೆ.

ಚೈತ್ರಾ ಕುಂದಾಪುರ ತನ್ನ ಸಂಗಡಿಗರೊಂದಿಗೆ ಸೇರಿಕೊಂಡು ಬೈಂದೂರಿನ ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ 7 ಕೋಟಿ ರೂ. ವಂಚನೆ ಮಾಡಿದ್ದರು ಎಂಬ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.ಈ ಕುರಿತು ಉದ್ಯಮಿ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಚೈತ್ರಾಗೆ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್‌ ಮಾಧ್ಯಮ ವಕ್ತಾರೆ ಅಂಜುಂ​ ಎನ್ನುವರ ನಿವಾಸದಲ್ಲಿ ಅವಿತುಕೊಂಡಿದ್ದರು ಎಂದು ತಿಳಿದುಬಂದಿದ್ದು, ಇದೀಗ ಚೈತ್ರಾಗೆ ಆಶ್ರಯ ನೀಡಿದ್ದ ಅಂಜುಂಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಇದರಿಂದ ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂಗೆ ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ: ಉಡುಪಿ ಕೃಷ್ಣ ಮಠದ ಬಳಿ ಸಿಕ್ಕ ಚೈತ್ರಾ ಕುಂದಾಪುರ, ಬಂಧನದ ವೇಳೆ ಆತ್ಮಹತ್ಯೆ ನಾಟಕ

ಇನ್ನು ಸಿಸಿಬಿ ಪೊಲೀಸರು ಬಂಧಿತ ಆರೋಪಿಗಳನ್ನು ಉಡುಪಿಯಿಂದ ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದು, ಇಂದು (ಸೆಪ್ಟೆಂಬರ್ 13) ಸಂಜೆ ವೇಳೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಅಲ್ಲದೇ ಇನ್ನಷ್ಟು ತನಿಖೆ ಮಾಡಬೇಕಿರುವುದರಿಂದ ತಮ್ಮ ವಶಕ್ಕೆ ಕೇಳುವ ಸಾಧ್ಯತೆಗಳು ಹೆಚ್ಚಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್