AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾ ಕುಂದಾಪುರಗೆ ಮನೆಯಲ್ಲಿ ಆಶ್ರಯ ನೀಡಿದ್ದ ಕಾಂಗ್ರೆಸ್ ಮಾಧ್ಯಮ ವಕ್ತಾರೆಗೂ ಸಂಕಷ್ಟ

Chaitra Kundapura Arrested ಬೈಂದೂರಿನ ಉದ್ಯಮಿಗೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂ​ ಎನ್ನುವರಿಗೆ ಸಂಕಷ್ಟ ಎದುರಾಗಿದೆ.

ಚೈತ್ರಾ ಕುಂದಾಪುರಗೆ ಮನೆಯಲ್ಲಿ ಆಶ್ರಯ ನೀಡಿದ್ದ ಕಾಂಗ್ರೆಸ್ ಮಾಧ್ಯಮ ವಕ್ತಾರೆಗೂ ಸಂಕಷ್ಟ
ಚೈತ್ರಾ ಕುಂದಾಪುರ -ಅಂಜುಂ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Sep 13, 2023 | 11:34 AM

Share

ಉಡುಪಿ, (ಸೆಪ್ಟೆಂಬರ್ 13): ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ(Chaitra Kundapura) ಸೇರಿದಂತೆ ಇಬ್ಬರನ್ನು ಬೆಂಗಳೂರಿನ ಸಿಸಿಬಿ (bengaluru CCB) ಪೊಲೀಸರು ಬಂಧಿಸಿದ್ದಾರೆ. ನಿನ್ನೆ (ಸೆಪ್ಟೆಂಬರ್ 12) ರಾತ್ರಿ ಉಡುಪಿಯ ಶ್ರೀಕೃಷ್ಣ ಮಠದ ಪಾರ್ಕಿಂಗ್​ ಸ್ಥಳದಲ್ಲಿ ಚೈತ್ರಾ ಸಿಕ್ಕಿಬಿದ್ದಿದ್ದಾಳೆ. ಇನ್ನು ಇದಕ್ಕೂ ಮೊದಲು ಚೈತ್ರಾ ಕುಂದಾಪುರ, ಕಾಂಗ್ರೆಸ್​ ಮುಖಂಡೆ ಮನೆಯಲ್ಲಿ ಅವಿತುಕೊಂಡಿದ್ದಳು ಎನ್ನುವ ಮಾಹಿತಿ ತಿಳಿದುಬಂದಿದೆ. ಇದೀಗ ಆರೋಪಿಗೆ ಆಶ್ರಯ ನೀಡಿದ ಆರೋಪದ ಮೇಲೆ ಕಾಂಗ್ರೆಸ್​ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂಗೆ ಸಿಸಿಬಿ ನೋಟಿಸ್ ನೀಡಿದೆ.

ಚೈತ್ರಾ ಕುಂದಾಪುರ ತನ್ನ ಸಂಗಡಿಗರೊಂದಿಗೆ ಸೇರಿಕೊಂಡು ಬೈಂದೂರಿನ ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ 7 ಕೋಟಿ ರೂ. ವಂಚನೆ ಮಾಡಿದ್ದರು ಎಂಬ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.ಈ ಕುರಿತು ಉದ್ಯಮಿ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಚೈತ್ರಾಗೆ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್‌ ಮಾಧ್ಯಮ ವಕ್ತಾರೆ ಅಂಜುಂ​ ಎನ್ನುವರ ನಿವಾಸದಲ್ಲಿ ಅವಿತುಕೊಂಡಿದ್ದರು ಎಂದು ತಿಳಿದುಬಂದಿದ್ದು, ಇದೀಗ ಚೈತ್ರಾಗೆ ಆಶ್ರಯ ನೀಡಿದ್ದ ಅಂಜುಂಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಇದರಿಂದ ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂಗೆ ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ: ಉಡುಪಿ ಕೃಷ್ಣ ಮಠದ ಬಳಿ ಸಿಕ್ಕ ಚೈತ್ರಾ ಕುಂದಾಪುರ, ಬಂಧನದ ವೇಳೆ ಆತ್ಮಹತ್ಯೆ ನಾಟಕ

ಇನ್ನು ಸಿಸಿಬಿ ಪೊಲೀಸರು ಬಂಧಿತ ಆರೋಪಿಗಳನ್ನು ಉಡುಪಿಯಿಂದ ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದು, ಇಂದು (ಸೆಪ್ಟೆಂಬರ್ 13) ಸಂಜೆ ವೇಳೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಅಲ್ಲದೇ ಇನ್ನಷ್ಟು ತನಿಖೆ ಮಾಡಬೇಕಿರುವುದರಿಂದ ತಮ್ಮ ವಶಕ್ಕೆ ಕೇಳುವ ಸಾಧ್ಯತೆಗಳು ಹೆಚ್ಚಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ