ಉಡುಪಿ: ಡ್ರಗ್ಸ್ ನೀಡಿ ಅತ್ಯಾಚಾರ ಕೇಸ್​ಗೆ ಟ್ವಿಸ್ಟ್, ಬಿಜೆಪಿ ಕಾರ್ಯಕರ್ತ ಅರೆಸ್ಟ್

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಡ್ರಗ್ಸ್ ಬೆರೆಸಿ ಕುಡಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಇದೀಗ 3ನೇ ಆರೋಪಿ ಅಭಯ್​ನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಎಸಗಿದ ನಂತರ ಕ್ರಿಮಿ ಅಲ್ತಾಫ್ ತಪ್ಪಿಸಿಕೊಳ್ಳಲು ಅಭಯ್ ಸಹಕರಿಸಿದ್ದ. ಎನ್​ಡಿಪಿಎಸ್ ಕಾಯ್ದೆಯಡಿ ಅಭಯ್​ನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.

ಉಡುಪಿ: ಡ್ರಗ್ಸ್ ನೀಡಿ ಅತ್ಯಾಚಾರ ಕೇಸ್​ಗೆ ಟ್ವಿಸ್ಟ್, ಬಿಜೆಪಿ ಕಾರ್ಯಕರ್ತ ಅರೆಸ್ಟ್
ಅಭಯ್
Follow us
| Updated By: ಆಯೇಷಾ ಬಾನು

Updated on: Aug 27, 2024 | 10:05 AM

ಉಡುಪಿ, ಆಗಸ್ಟ್​.27: ಉಡುಪಿ (Udupi) ಜಿಲ್ಲೆಯಲ್ಲಿ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದ್ದ ಕೇಸ್​ಗೆ ಸಂಬಂಧಿಸಿ ಕಾರ್ಕಳ ಠಾಣೆ ಪೊಲೀಸರು (Karkala Police) ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಭಯ್ ಬಿಜೆಪಿ ಕಾರ್ಯಕರ್ತ ಎನ್ನುವ ಮಾಹಿತಿ ಸಿಕ್ಕಿದ್ದು ಉಡುಪಿ ಅತ್ಯಾಚಾರ ಕೇಸನ್ನು ಲವ್ ಜಿಹಾದ್​​ ಎಂದು ಆರೋಪಿಸಿದ್ದ ಬಿಜೆಪಿ, ಹಿಂದೂ ಸಂಘಟನೆಗಳಿಗೆ ಅಭಯ್ ಬಂಧನ ಮುಖ ಭಂಗ ತಂದಿದೆ. ಅಲ್ಲದೆ ಅಭಯ್ ಅತ್ಯಾಚಾರಿ ಅಲ್ತಾಫ್​ಗೆ ಡ್ರಗ್ಸ್ ತಂದು ಕೊಟ್ಟಿದ್ದ ಎಂದು ತಿಳಿದುಬಂದಿದೆ.

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಡ್ರಗ್ಸ್ ಬೆರೆಸಿದ ಮದ್ಯ ಕುಡಿಸಿ ಯುವತಿ ಮೇಲೆ ಅತ್ಯಾಚಾರ ಎಸಗಲಾಗಿದ್ದ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಇದೀಗ 3ನೇ ಆರೋಪಿ ಅಭಯ್​ನನ್ನು ಪೊಲೀಸರು ಬಂಧಿಸಿದ್ದು ಹೊಸ ಟ್ವಿಸ್ಟ್ ಸಿಕ್ಕಿದೆ. ಬಂಧಿತ ಆರೋಪಿ ಅಭಯ್ ಫೇಸ್​​ಬುಕ್​ನಲ್ಲಿ MLA ಸುನೀಲ್​​ಕುಮಾರ್​​ ಫೋಟೋ ಹಾಕಿಕೊಂಡಿದ್ದಾನೆ. ಅಷ್ಟೇ ಅಲ್ಲದೆ ಬಿಜೆಪಿ, ಬಜರಂಗದಳದಲ್ಲಿ ಗುರುತಿಸಿಕೊಂಡಿದ್ದಾನೆ.

ಇದನ್ನೂ ಓದಿ: ಕಾರ್ಕಳದಲ್ಲಿ ಹಿಂದೂ ಯುವತಿ ಮೇಲೆ ಅತ್ಯಾಚಾರ ಪ್ರಕರಣ; ಪೊಲೀಸರ ಕೈಸೇರಿದ ಸಂತ್ರಸ್ಥೆ ಬ್ಲಡ್ ರಿಪೋರ್ಟ್

ಇತ್ತೀಚೆಗೆ ಈ ಪ್ರಕರಣಕ್ಕೆ ಬಿಜೆಪಿ, ಹಿಂದೂ ಸಂಘಟನೆಗಳು ಲವ್ ಜಿಹಾದ್ ಹಣೆಪಟ್ಟಿ ಕಟ್ಟಿದ್ದರು. ಆದರೆ ಇದೀಗ ತಮ್ಮದೇ ಕಾರ್ಯಕರ್ತ ಈ ಪ್ರಕರಣದಲ್ಲಿ ಭಾಗಿಯಾಗಿರೋದು ಮುಖಭಂಗವಾಗಿದೆ. ಆರೋಪಿ ಅಭಯ್, ಪ್ರಮುಖ ಆರೋಪಿ ಅಲ್ತಾಫ್​ ಜೊತೆ ಆತ್ಮೀಯವಾಗಿದ್ದ. ಅತ್ಯಾಚಾರ ನಡೆದ ದಿನ ಅಲ್ತಾಫ್​ಗೆ ಡ್ರಗ್ಸ್​ ಒದಗಿಸಿದ್ದ. ಸದ್ಯ ಈಗ ಅಭಯ್ ಬಂಧನ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಡ್ರಗ್ಸ್​​ ವಿರೋಧಿ ಅಭಿಯಾನದಲ್ಲಿ ಇದ್ದವನೇ ಡ್ರಗ್ಸ್​ ಪೂರೈಸಿದ್ದ

ಇನ್ನು ಕಳೆದ ತಿಂಗಳು ಬಜರಂಗದಳ ಡ್ರಗ್ಸ್​ ವಿರೋಧಿ ಅಭಿಯಾನ ನಡೆಸಿತ್ತು. ಈ ಡ್ರಗ್ಸ್​​ ವಿರೋಧಿ ಅಭಿಯಾನದಲ್ಲಿ ಅಭಯ್ ಕೂಡ ಭಾಗಿಯಾಗಿದ್ದ. ಡ್ರಗ್ಸ್​ ಮಾರಾಟದ ವಿರುದ್ಧ ಸಿಡಿದೆದ್ದಿದ್ದ. ಕಾರ್ಕಳ DySPಗೆ ಮನವಿ ನೀಡುವ ಸಮಯದಲ್ಲಿಯೂ ಜೊತೆಗಿದ್ದ. ಜಾಲತಾಣದಲ್ಲಿ ಅಭಯ್ ಫೋಟೋ ವೈರಲ್ ಆಗುತ್ತಿದೆ. ಪ್ರಮುಖ ಆರೋಪಿ ಅಲ್ತಾಫ್​​​ಗೆ ಡ್ರಗ್ಸ್​ ಪೂರೈಸಿದ್ದ ಅಭಯ್​ನನ್ನು ಕಾರ್ಕಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ