AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಡ್ರಗ್ಸ್ ನೀಡಿ ಅತ್ಯಾಚಾರ ಕೇಸ್​ಗೆ ಟ್ವಿಸ್ಟ್, ಬಿಜೆಪಿ ಕಾರ್ಯಕರ್ತ ಅರೆಸ್ಟ್

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಡ್ರಗ್ಸ್ ಬೆರೆಸಿ ಕುಡಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಇದೀಗ 3ನೇ ಆರೋಪಿ ಅಭಯ್​ನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಎಸಗಿದ ನಂತರ ಕ್ರಿಮಿ ಅಲ್ತಾಫ್ ತಪ್ಪಿಸಿಕೊಳ್ಳಲು ಅಭಯ್ ಸಹಕರಿಸಿದ್ದ. ಎನ್​ಡಿಪಿಎಸ್ ಕಾಯ್ದೆಯಡಿ ಅಭಯ್​ನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.

ಉಡುಪಿ: ಡ್ರಗ್ಸ್ ನೀಡಿ ಅತ್ಯಾಚಾರ ಕೇಸ್​ಗೆ ಟ್ವಿಸ್ಟ್, ಬಿಜೆಪಿ ಕಾರ್ಯಕರ್ತ ಅರೆಸ್ಟ್
ಅಭಯ್
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Aug 27, 2024 | 10:05 AM

Share

ಉಡುಪಿ, ಆಗಸ್ಟ್​.27: ಉಡುಪಿ (Udupi) ಜಿಲ್ಲೆಯಲ್ಲಿ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದ್ದ ಕೇಸ್​ಗೆ ಸಂಬಂಧಿಸಿ ಕಾರ್ಕಳ ಠಾಣೆ ಪೊಲೀಸರು (Karkala Police) ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಅಭಯ್ ಬಿಜೆಪಿ ಕಾರ್ಯಕರ್ತ ಎನ್ನುವ ಮಾಹಿತಿ ಸಿಕ್ಕಿದ್ದು ಉಡುಪಿ ಅತ್ಯಾಚಾರ ಕೇಸನ್ನು ಲವ್ ಜಿಹಾದ್​​ ಎಂದು ಆರೋಪಿಸಿದ್ದ ಬಿಜೆಪಿ, ಹಿಂದೂ ಸಂಘಟನೆಗಳಿಗೆ ಅಭಯ್ ಬಂಧನ ಮುಖ ಭಂಗ ತಂದಿದೆ. ಅಲ್ಲದೆ ಅಭಯ್ ಅತ್ಯಾಚಾರಿ ಅಲ್ತಾಫ್​ಗೆ ಡ್ರಗ್ಸ್ ತಂದು ಕೊಟ್ಟಿದ್ದ ಎಂದು ತಿಳಿದುಬಂದಿದೆ.

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಡ್ರಗ್ಸ್ ಬೆರೆಸಿದ ಮದ್ಯ ಕುಡಿಸಿ ಯುವತಿ ಮೇಲೆ ಅತ್ಯಾಚಾರ ಎಸಗಲಾಗಿದ್ದ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಇದೀಗ 3ನೇ ಆರೋಪಿ ಅಭಯ್​ನನ್ನು ಪೊಲೀಸರು ಬಂಧಿಸಿದ್ದು ಹೊಸ ಟ್ವಿಸ್ಟ್ ಸಿಕ್ಕಿದೆ. ಬಂಧಿತ ಆರೋಪಿ ಅಭಯ್ ಫೇಸ್​​ಬುಕ್​ನಲ್ಲಿ MLA ಸುನೀಲ್​​ಕುಮಾರ್​​ ಫೋಟೋ ಹಾಕಿಕೊಂಡಿದ್ದಾನೆ. ಅಷ್ಟೇ ಅಲ್ಲದೆ ಬಿಜೆಪಿ, ಬಜರಂಗದಳದಲ್ಲಿ ಗುರುತಿಸಿಕೊಂಡಿದ್ದಾನೆ.

ಇದನ್ನೂ ಓದಿ: ಕಾರ್ಕಳದಲ್ಲಿ ಹಿಂದೂ ಯುವತಿ ಮೇಲೆ ಅತ್ಯಾಚಾರ ಪ್ರಕರಣ; ಪೊಲೀಸರ ಕೈಸೇರಿದ ಸಂತ್ರಸ್ಥೆ ಬ್ಲಡ್ ರಿಪೋರ್ಟ್

ಇತ್ತೀಚೆಗೆ ಈ ಪ್ರಕರಣಕ್ಕೆ ಬಿಜೆಪಿ, ಹಿಂದೂ ಸಂಘಟನೆಗಳು ಲವ್ ಜಿಹಾದ್ ಹಣೆಪಟ್ಟಿ ಕಟ್ಟಿದ್ದರು. ಆದರೆ ಇದೀಗ ತಮ್ಮದೇ ಕಾರ್ಯಕರ್ತ ಈ ಪ್ರಕರಣದಲ್ಲಿ ಭಾಗಿಯಾಗಿರೋದು ಮುಖಭಂಗವಾಗಿದೆ. ಆರೋಪಿ ಅಭಯ್, ಪ್ರಮುಖ ಆರೋಪಿ ಅಲ್ತಾಫ್​ ಜೊತೆ ಆತ್ಮೀಯವಾಗಿದ್ದ. ಅತ್ಯಾಚಾರ ನಡೆದ ದಿನ ಅಲ್ತಾಫ್​ಗೆ ಡ್ರಗ್ಸ್​ ಒದಗಿಸಿದ್ದ. ಸದ್ಯ ಈಗ ಅಭಯ್ ಬಂಧನ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಡ್ರಗ್ಸ್​​ ವಿರೋಧಿ ಅಭಿಯಾನದಲ್ಲಿ ಇದ್ದವನೇ ಡ್ರಗ್ಸ್​ ಪೂರೈಸಿದ್ದ

ಇನ್ನು ಕಳೆದ ತಿಂಗಳು ಬಜರಂಗದಳ ಡ್ರಗ್ಸ್​ ವಿರೋಧಿ ಅಭಿಯಾನ ನಡೆಸಿತ್ತು. ಈ ಡ್ರಗ್ಸ್​​ ವಿರೋಧಿ ಅಭಿಯಾನದಲ್ಲಿ ಅಭಯ್ ಕೂಡ ಭಾಗಿಯಾಗಿದ್ದ. ಡ್ರಗ್ಸ್​ ಮಾರಾಟದ ವಿರುದ್ಧ ಸಿಡಿದೆದ್ದಿದ್ದ. ಕಾರ್ಕಳ DySPಗೆ ಮನವಿ ನೀಡುವ ಸಮಯದಲ್ಲಿಯೂ ಜೊತೆಗಿದ್ದ. ಜಾಲತಾಣದಲ್ಲಿ ಅಭಯ್ ಫೋಟೋ ವೈರಲ್ ಆಗುತ್ತಿದೆ. ಪ್ರಮುಖ ಆರೋಪಿ ಅಲ್ತಾಫ್​​​ಗೆ ಡ್ರಗ್ಸ್​ ಪೂರೈಸಿದ್ದ ಅಭಯ್​ನನ್ನು ಕಾರ್ಕಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್