ಕ್ವಾರಂಟೈನ್ ಕೇಂದ್ರದಲ್ಲಿ ಬರ್ತ್ ಡೇ ಪಾರ್ಟಿ, ಬಿಜೆಪಿ ಮುಖಂಡ ಭಾಗಿ

ಉಡುಪಿ: ಕಾರ್ಕಳ ಕ್ವಾರಂಟೈನ್ ಕೇಂದ್ರದಲ್ಲಿ ಬರ್ತ್ ಡೇ ಪಾರ್ಟಿ ಆಯೋಜನೆಗೊಂಡಿದ್ದು, ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಮಾತ್ರವಲ್ಲ ಕ್ವಾರಂಟೈನ್ ಕೇಂದ್ರಗಳು ಮೋಜು ಮಸ್ತಿಯ ತಾಣಗಳಾಗುತ್ತಿವೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಪ್ರಕೃತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ಈ ಪಾರ್ಟಿ ಆಯೋಜನೆಗೊಂಡಿತ್ತು. ಗಮನಾರ್ಹ ಸಂಗತಿ ಎಂದರೆ ಸ್ಥಳೀಯ ಜನಪ್ರತಿನಿಧಿಗಳೇ ಇದರಲ್ಲಿ ಭಾಗಿಯಾಗಿದ್ದಾರೆ. ಕಾರ್ಕಳ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕರುಣಾಕರ ಕೋಟ್ಯಾನ್, ಕಾಂತಾವರ ಪಂಚಾಯತ್ ಅಧ್ಯಕ್ಷ ರಾಜೇಶ್ ಕೋಟ್ಯಾನ್, ಯುವ […]

ಕ್ವಾರಂಟೈನ್ ಕೇಂದ್ರದಲ್ಲಿ ಬರ್ತ್ ಡೇ ಪಾರ್ಟಿ, ಬಿಜೆಪಿ ಮುಖಂಡ ಭಾಗಿ
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Jun 04, 2020 | 3:47 PM

ಉಡುಪಿ: ಕಾರ್ಕಳ ಕ್ವಾರಂಟೈನ್ ಕೇಂದ್ರದಲ್ಲಿ ಬರ್ತ್ ಡೇ ಪಾರ್ಟಿ ಆಯೋಜನೆಗೊಂಡಿದ್ದು, ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಮಾತ್ರವಲ್ಲ ಕ್ವಾರಂಟೈನ್ ಕೇಂದ್ರಗಳು ಮೋಜು ಮಸ್ತಿಯ ತಾಣಗಳಾಗುತ್ತಿವೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಪ್ರಕೃತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ಈ ಪಾರ್ಟಿ ಆಯೋಜನೆಗೊಂಡಿತ್ತು. ಗಮನಾರ್ಹ ಸಂಗತಿ ಎಂದರೆ ಸ್ಥಳೀಯ ಜನಪ್ರತಿನಿಧಿಗಳೇ ಇದರಲ್ಲಿ ಭಾಗಿಯಾಗಿದ್ದಾರೆ. ಕಾರ್ಕಳ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕರುಣಾಕರ ಕೋಟ್ಯಾನ್, ಕಾಂತಾವರ ಪಂಚಾಯತ್ ಅಧ್ಯಕ್ಷ ರಾಜೇಶ್ ಕೋಟ್ಯಾನ್, ಯುವ ಮೋರ್ಚಾ ಕಾರ್ಯದರ್ಶಿ ನವೀನ್ ಕಾಂತಾವರ ಕ್ವಾರಂಟೈನ್ ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ.

ಮುಂಬೈನಿಂದ ಬಂದು ಕ್ವಾರಂಟೈನ್​ನಲ್ಲಿರುವವರ ಜೊತೆಗೆ ಹುಟ್ಟುಹಬ್ಬ ಆಚರಣೆ ಮಾಡಿರುವ ಇವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಆಗ್ರಹಿಸಿದೆ. ಈ ಘಟನೆ ಮತ್ತೆ ಮರುಕಳಿಸಬಾರದು. ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಯೂತ್ ಕಾಂಗ್ರೆಸ್ ಆಗ್ರಹಿಸಿದೆ.

Published On - 3:00 pm, Thu, 4 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us