AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನು‌ ಮಾತ್ರ ಪರಿಹಾರ ಅಲ್ಲ, ಸಮಾಜ ಜಾಗರೂಕವಾಗಿದ್ರೆ ಕಾನೂನು ಪ್ರಯೋಜನ: ಮತಾಂತರ ನಿಷೇಧದ ಬಗ್ಗೆ ಬಿಎಲ್ ಸಂತೋಷ್

ಲವ್ ಜಿಹಾದ್​ಗೆ ನಮ್ಮ ಹೆಣ್ಣು ಮಕ್ಕಳು ಬಲಿಯಾಗುತ್ತಿದ್ದಾರೆ. ಮನೆ ಮತ್ತು ಸಮಾಜ ಮಕ್ಕಳನ್ನು ಸರಿಯಾಗಿ ಬೆಳಸದ ಪರಿಣಾಮ ಇದು. ನಮ್ಮ ಸುತ್ತಮುತ್ತ ವ್ಯವಸ್ಥೆಯಲ್ಲಿನ ಭಯೋತ್ಪಾದನೆ ಗುರುತಿಸಬೇಕು ಎಂದು ಹೇಳಿದ್ದಾರೆ.

ಕಾನೂನು‌ ಮಾತ್ರ ಪರಿಹಾರ ಅಲ್ಲ, ಸಮಾಜ ಜಾಗರೂಕವಾಗಿದ್ರೆ ಕಾನೂನು ಪ್ರಯೋಜನ: ಮತಾಂತರ ನಿಷೇಧದ ಬಗ್ಗೆ ಬಿಎಲ್ ಸಂತೋಷ್
ಬಿ.ಎಲ್. ಸಂತೋಷ್
TV9 Web
| Edited By: |

Updated on:Dec 15, 2021 | 11:16 PM

Share

ಉಡುಪಿ: ಕರ್ನಾಟಕ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾಗುತ್ತದೆ. ಕಾಯ್ದೆ ಜಾರಿ ಬಗ್ಗೆ ಸಿಎಂ ಹೇಳಿದ್ದಾರೆ. ಕಾಯ್ದೆ ಜಾರಿ ಆಗುತ್ತೆ. ಆದರೆ ಯಾವತ್ತೂ ಕಾನೂನು‌ ಮಾತ್ರ ಪರಿಹಾರ ಅಲ್ಲ. ಸಮಾಜ ಜಾಗರೂಕವಾಗಿದ್ರೆ ಮಾತ್ರ ಕಾನೂನು ಪ್ರಯೋಜನ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಡುಪಿಯಲ್ಲಿ ಬುಧವಾರ ಹೇಳಿಕೆ ನೀಡಿದ್ದಾರೆ.

ಉಡುಪಿಯ ಕೃಷ್ಣ ಮಠದಲ್ಲಿ ನಡೆಯುತ್ತಿರುವ ವಿಶ್ವಾರ್ಪಣಮ್ ಕಾರ್ಯಕ್ರಮದಲ್ಲಿ ಬಿ.ಎಲ್ ಸಂತೋಷ್ ಭಾಗಿ ಆಗಿದ್ದಾರೆ. ಸಮಾಜದಲ್ಲಿ ಜನಸಂಖ್ಯೆಯ ಅನುಪಾತ ಗಮನಿಸಬೇಕು. ವ್ಯತ್ಯಾಸ ಆಗ್ತಾ ಇದ್ಯಾ ನೋಡಿ. ನೆರೆಹೊರೆ ಸುರಕ್ಷಿತವಾಗಿದ್ರೆ ನಾವು ಸುರಕ್ಷಿತ. ಚುನಾವಣೆಯಲ್ಲಿ ಕೆಲವು ಕ್ಷೇತ್ರದಲ್ಲಿ ಮುಸಲ್ಮಾನರೇ ಗೆಲ್ತಾರೆ. ಗೆಲ್ಲಲಿ ಪರ್ವಾಗಿಲ್ಲ. ಆದ್ರೆ ಬೇರೆ ಯಾರೂ ಗೆಲ್ಲೋ ಹಾಗಿಲ್ಲ ಅಂದ್ರೆ ಹೇಗೆ ಸಾಧ್ಯ? ಲವ್ ಜಿಹಾದ್​ಗೆ ನಮ್ಮ ಹೆಣ್ಣು ಮಕ್ಕಳು ಬಲಿಯಾಗುತ್ತಿದ್ದಾರೆ. ಮನೆ ಮತ್ತು ಸಮಾಜ ಮಕ್ಕಳನ್ನು ಸರಿಯಾಗಿ ಬೆಳಸದ ಪರಿಣಾಮ ಇದು. ನಮ್ಮ ಸುತ್ತಮುತ್ತ ವ್ಯವಸ್ಥೆಯಲ್ಲಿನ ಭಯೋತ್ಪಾದನೆ ಗುರುತಿಸಬೇಕು ಎಂದು ಹೇಳಿದ್ದಾರೆ.

ರಾಮ ಕೃಷ್ಣರ ಹೆಸರು ಹೇಳಿಕೊಂಡು ಬದುಕಲು ಸಾಧ್ಯವಿಲ್ಲ. ಈಗ ನಡೆಸ ಬೇಕಾದ ಕರ್ಮ‌ ನಡೆಸಲೇ ಬೇಕು. ಒಗ್ಗಟ್ಟು ಪ್ರದರ್ಶನ‌ ಮಾಡಬೇಕು. ಜಾತಿ, ಊರು, ಧರ್ಮದ ಹೆಸರಲ್ಲಿ ಒಗ್ಗಟ್ಟು ಬೇಕು. ಪ್ರೇಮಕ್ಕೂ, ಪ್ರೀತಿಗೂ ಲವ್ ಜಿಹಾದ್​ಗೂ ಸಂಬಂಧವೇ ಇಲ್ಲ. ವೀರಶೈವ ಮಹಾಸಭಾದವರು ಮತಾಂತರದ ವಿರುದ್ದ ಸಣ್ಣ ಸಣ್ಣ ತಂಡ ಮಾಡಿದ್ದಾರೆ. ಮತಾಂತರದ ಅಪಾಯ ಗ್ರಹಿಸಿದೆ ಎಂದು ಹೇಳಿದ್ದಾರೆ.

ಮತಾಂತರ ನಿಷೇಧ ಕಾಯ್ದೆಯನ್ನ ಜಾರಿಗೆ ತಂದೇ ತರುತ್ತೇವೆ: ಆರಗ ಜ್ಞಾನೇಂದ್ರ ಮತಾಂತರ ನಿಷೇಧ ಕಾಯ್ದೆ ಇದೀಗ ಕೊನೇ ಹಂತದಲ್ಲಿ ಇದೆ. ಮತಾಂತರ ನಿಷೇಧ ಕಾಯ್ದೆಯನ್ನ ಜಾರಿಗೆ ತಂದೇ ತರುತ್ತೇವೆ. ಬೆಳಗಾವಿ ಅಧಿವೇಶನದಲ್ಲೇ ಮತಾಂತರ ಕಾಯ್ದೆ ತರುತ್ತೇವೆ. ಬಲವಂತವಾಗಿ ಮತಾಂತರ ಮಾಡುವವರಿಗೆ ಶಿಕ್ಷೆ ಆಗಬೇಕು ಎಂದು ಬೆಳಗಾವಿಯಲ್ಲಿ ಗೃಹ ಖಾತೆ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಒಬ್ಬ ವ್ಯಕ್ತಿ ಯಾವ ಮತವನ್ನ ಆಚರಿಸಬೇಕು ಎಂದು ಸ್ವಾತಂತ್ರವಿದೆ. ಬಲವಂತವಾಗಿ ಮತಾಂತರ ಮಾಡುವವರಿಗೆ ಶಿಕ್ಷೆ ಆಗಲೇಬೇಕು. ಅದನ್ನು ಈ ಅಧಿವೇಶನಲ್ಲಿ ಮಂಡನೆ ಮಾಡುತ್ತೆವೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಮತಾಂತರಕ್ಕೊಂದು ಚೌಕಟ್ಟು ನಿಗದಿ ಮಾಡುವ ಬಗ್ಗೆ ಚರ್ಚೆ; ಸಿಎಂ ಬಸವರಾಜ ಬೊಮ್ಮಾಯಿ ಸಭೆ

ಇದನ್ನೂ ಓದಿ: ನಮ್ಮ ಧರ್ಮ ಉಳಿಸುವುದಕ್ಕಾಗಿ ಮತಾಂತರ ಕಾಯ್ದೆ ಜಾರಿ ಅನಿವಾರ್ಯ; ಸಚಿವ ಕೆಎಸ್ ಈಶ್ವರಪ್ಪ

Published On - 11:15 pm, Wed, 15 December 21

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ