AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi News: ಕಾಂಗ್ರೆಸ್ ಡೋಂಗಿ ದೇಶಭಕ್ತರನ್ನು ಇಟ್ಟುಕೊಂಡಿದೆ: ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ವಾಗ್ದಾಳಿ

ಪಿಎಫ್ಐ ಸಂಘಟನೆ ದೇಶದ ಅನಾಗರಿಕ ಸಂಘಟನೆಯಾಗಿದ್ದು, ಯಾರು ದೇಶಪ್ರೇಮಿ ಎಂದು PFI ಮತ್ತು ಎಸ್ಡಿಪಿಐಗೆ ಗೊತ್ತಿಲ್ಲ. ಕಾಂಗ್ರೆಸ್ ಡೋಂಗಿ ದೇಶಭಕ್ತರನ್ನು ಇಟ್ಟುಕೊಂಡಿದೆ ಎಂದು ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ವಾಗ್ದಾಳಿ ಮಾಡಿದ್ದಾರೆ.

Udupi News: ಕಾಂಗ್ರೆಸ್ ಡೋಂಗಿ ದೇಶಭಕ್ತರನ್ನು ಇಟ್ಟುಕೊಂಡಿದೆ: ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ವಾಗ್ದಾಳಿ
ಕಾಂಗ್ರೆಸ್ ಡೋಂಗಿ ದೇಶಭಕ್ತರನ್ನು ಇಟ್ಟುಕೊಂಡಿದೆ: ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ
TV9 Web
| Edited By: ವಿವೇಕ ಬಿರಾದಾರ|

Updated on: Aug 17, 2022 | 1:23 PM

Share

ಉಡುಪಿ: ಬ್ರಹ್ಮಗಿರಿ ಸರ್ಕಲ್‌ನಲ್ಲಿ ಸಾವರ್ಕರ್ (Veer Savarkar) ಬ್ಯಾನರ್ ಹಾಕಿರುವ ವಿಚಾರವಾಗಿ, ಪಿಎಫ್ಐ ಸಂಘಟನೆ ದೇಶದ ಅನಾಗರಿಕ ಸಂಘಟನೆಯಾಗಿದ್ದು, ಯಾರು ದೇಶಪ್ರೇಮಿ ಎಂದು PFI ಮತ್ತು ಎಸ್​ಡಿಪಿಐಗೆ ಗೊತ್ತಿಲ್ಲ. ಕಾಂಗ್ರೆಸ್ ಡೋಂಗಿ ದೇಶಭಕ್ತರನ್ನು ಇಟ್ಟುಕೊಂಡಿದೆ ಎಂದು ಬಿಜೆಪಿ (BJP) ಮುಖಂಡ ಯಶ್ ಪಾಲ್ ಸುವರ್ಣ (Yash Pal Suvarna) ವಾಗ್ದಾಳಿ ಮಾಡಿದ್ದಾರೆ. ಬ್ರಹ್ಮಗಿರಿ ಸರ್ಕಲ್‌ನಲ್ಲಿ ಸಾವರ್ಕರ್ ಬ್ಯಾನರ್ ಹಾಕಿರುವುದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿರುವ ವಿಚಾರಕ್ಕೆ ಮಾತನಾಡಿದ ಅವರು ಬ್ರಹ್ಮಗಿರಿ ಸರ್ಕಲಲ್ಲಿ ಸಾವರ್ಕರ್ ಪುತ್ಥಳಿಯನ್ನು ಅನಾವರಣ ಮಾಡುತ್ತೇವೆ. ಕಾಂಗ್ರೆಸ್ ನಾಯಕರ ಅಂಗಳದಲ್ಲಿ ಸಾವರ್ಕರ್ ಭಾವಚಿತ್ರ ಹಾಕುತ್ತೇವೆ ಎಂದು ಎಂದರು.

ಅಂದು ಜಿನ್ನಾ ದೇಶ ವಿಭಜನೆ ಮಾಡಿದರು. ವಿಪಕ್ಷ ನಾಯಕ ಸಿದ್ದರಾಮಯ್ಯ ಜಿನ್ನಾನ ಮತ್ತೊಂದು ರೂಪ. ಸಿದ್ದರಾಮಯ್ಯ ಮತ್ತೆ ದೇಶ ವಿಭಜನೆ ಮಾಡಲು ಹೊರಟಿದ್ದಾರೆ. ಸಿದ್ದರಾಮಯ್ಯ ಅರಳು-ಮರಳಿನ ಹೇಳಿಕೆಯನ್ನ ಕೊಟ್ಟಿದ್ದಾರೆ. ಸಿದ್ದರಾಮಯ್ಯನ ಮನೆ ಅಂಗಳದಲ್ಲೂ ಸಾವರ್ಕರ್ ಭಾವಚಿತ್ರ ಹಾಕುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವೀರ ಸಾವರ್ಕರ್ ದೇಶಭಕ್ತಿ ಏನು ಎಂಬುದು ಕಾಂಗ್ರೆಸ್​ಗೆ ತೋರಿಸಿ ಕೊಡುತ್ತೇವೆ. ವೀರ ಸಾವರ್ಕರ್​ ಅವರ ಹೋರಾಟ ಸಾಧನೆ ಏನು ಎಂದು ತಿಳಿದುಕೊಳ್ಳಿ. ಸಾವರ್ಕರ್ಗೆ ಎರಡು ಬಾರಿ ಜೀವಾವಧಿ ಶಿಕ್ಷೆಯನ್ನು ಬ್ರಿಟಿಷರು ಕೊಟ್ಟಿದ್ದರು ಎಂದು ಹೇಳಿದರು.

ಹಿಂದೂ ಮಹಾಸಭಾ ಮುಖಂಡ ಪ್ರಮೋದ್ ಉಚ್ಚಿಲ್ ಮಾತನಾಡಿ ಎಸ್​ಡಿಪಿಐ ಪಿಎಫ್​ಐ ನಾಯಕರು ಕಟೌಟ್ ತೆಗೆಯಲು ಕಂಪ್ಲೇಂಟ್ ಕೊಟ್ಟಿದ್ದಾರೆ. ಪಾಕಿಸ್ತಾನ ಮತ್ತು ಜಿಹಾದಿ ಮನಸ್ಥಿತಿಯವರಿಂದ ವಿರೋಧ ಬಂದಿದೆ. ವೀರ ಸಾವರ್ಕರ್ ಮತ್ತು ನೇತಾಜಿ ಬೋಸ್ ಬಗ್ಗೆ ಇವರಿಗೆ ಏನು ಗೊತ್ತಿದೆ ? ಎಂದು ಪ್ರಶ್ನಿಸಿದರು.

ನಿಜವಾಗಿ ದೇಶಕ್ಕೆ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ್ದು ಸಾವರ್ಕರ್ ಮತ್ತು ನೇತಾಜಿ. ಇಂದಿರಾಗಾಂಧಿಯವರು ಸಾವರ್ಕರ್​ಗೆ ಗೌರವ ಕೊಟ್ಟದ್ದು ಯಾಕೆ? ಕಾಂಗ್ರೆಸ್, ಎಸ್​ಡಿಪಿಐಯವರಿಗೆ ಇತಿಹಾಸ ಗೊತ್ತಿಲ್ಲ. ಕಾಂಗ್ರೆಸ್ ರಾಜಕೀಯ ಬಿಟ್ಟು ಬುದ್ಧಿವಂತರಾಗಲಿ. ನೈಜ ಹೋರಾಟಗಾರರಿಗೆ ಕಾಂಗ್ರೆಸ್ ಬೆಲೆ ಕೊಡುತ್ತಿಲ್ಲ ಎಂದು ಆರೋಪಿಸಿದರು.

ಬ್ರಹ್ಮಗಿರಿ ಸರ್ಕಲ್‌ನಲ್ಲಿ ಸಾವರ್ಕರ್ ಬ್ಯಾನರ್ ವಿಚಾರವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮೂರನೇ ದಿನವೂ ಬಿಗಿ ಭದ್ರತೆ ಮಾಡಿದ್ದಾರೆ.

ಬ್ರಹ್ಮಗಿರಿಯಲ್ಲಿರುವ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ BJP ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಸಾವರ್ಕರ್ ಬ್ಯಾನರ್​ಗೆ ವಿರೋಧಿಸಿದ್ದ ಹಿನ್ನೆಲೆ ಮುತ್ತಿಗೆಗೆ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಬಿಜೆಪಿ ಕಾಯಕರ್ತರನ್ನು ತಡೆದು ವಾಪಸ್ ಕಳುಹಿಸಿದ್ದಾರೆ.

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ