AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಹ್ಮಾವರ: ಐಟಿ ದಾಳಿ ಮಾದರಿಯಲ್ಲಿ ದರೋಡೆಗೆ ಯತ್ನ, ದೂರು ದಾಖಲು

ಉಡುಪಿ ಜಿಲ್ಲೆಯಲ್ಲಿ ಖತರ್ನಾಕ್ ಗ್ಯಾಂಗ್​ ಒಂದು ಆ್ಯಕ್ಟಿವ್ ಆಗಿದೆ. ಐಟಿ ಅಧಿಕಾರಿಗಳ ಮಾದರಿಯಲ್ಲಿ ಮನೆಯ ಮೇಲೆ ದಾಳಿ ಮಾಡಿ, ದರೋಡೆ ಮಾಡುತ್ತಿದೆ. ಬ್ರಹ್ಮಾವರ ತಾಲೂಕಿನ ಮಣೂರು ಗ್ರಾಮದ ಕವಿತಾ ಎಂಬುವರ ನಿವಾಸಕ್ಕೆ ಇದೇ ಗ್ಯಾಂಗ್ ನುಗ್ಗಿತ್ತು. ಆದರೆ ದರೋಡೆ ಯತ್ನ ವಿಫಲಗಿದೆ.

ಬ್ರಹ್ಮಾವರ: ಐಟಿ ದಾಳಿ ಮಾದರಿಯಲ್ಲಿ ದರೋಡೆಗೆ ಯತ್ನ, ದೂರು ದಾಖಲು
ಅಕ್ರಮವಾಗಿ ಮನೆಯೋಳಗೆ ನುಗ್ಗಿದ ಅಪರಿಚಿತರು
ಹರೀಶ್ ಜಿ.ಆರ್​.
| Edited By: |

Updated on:Jul 29, 2024 | 10:42 AM

Share

ಉಡುಪಿ, ಜುಲೈ 29: ಬ್ರಹ್ಮಾವರ (Brahmavara) ತಾಲೂಕಿನ ಮಣೂರು ಗ್ರಾಮದ ಕವಿತಾ (34) ಎಂಬುವರ ನಿವಾಸಕ್ಕೆ ಸುಮಾರು 6-8 ಜನರು ನುಗ್ಗಿ ದಾಂಧಲೆ ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜುಲೈ 25ರ ಬೆಳಗ್ಗೆ 8.30ರ ಸುಮಾರಿಗೆ ಯಾರೋ ಕವಿತಾ ಅವರ ಮನೆ ಬಾಗಿಲು ತಟ್ಟಿದ್ದಾರೆ. ಆದರೆ, ಕವಿತಾ ಅವರು 9 ಗಂಟೆ ಸುಮಾರಿಗೆ ಬಾಗಿಲು ತೆರೆದು ಹೊರಗೆ ಬಂದು ನೋಡಿದಾಗ ಯಾರು ಇರಲಿಲ್ಲ.

ಬಳಿಕ, ಮನೆಯ ಸಿಸಿಟಿವಿ ದೃಶ್ಯಗಳನ್ನು ಮೇಲ್ವಿಚಾರಣೆ ಮಾಡುವ ಸೈನ್​ ಇನ್​ ಸೆಕ್ಯುರಿಟಿಯು ಕವಿತಾ ಅವರಿಗೆ ಕರೆ ಮಾಡಿದ್ದಾರೆ. 6-8 ಜನರ ಇನ್ನೋವಾ, ಸ್ವಿಫ್ಟ್ ಕಾರಿನಲ್ಲಿ ಮನೆ ಬಳಿ ಬಂದಿದ್ದರು. ಬಳಿಕ ಕಾಂಪೌಂಡ್ ಹಾರಿ ಮನೆಯ ಆವರಣ ಪ್ರವೇಶೀಸಿದ್ದರು. ನಂತರ ಬಾಗಿಲು ಬಡಿದು ಮನೆಯವರನ್ನ ಕರೆದಿದ್ದಾರೆ. ಆದರೆ, ಮನೆ ಬಾಗಿಲು ತೆರೆಯದಿದ್ದರಿಂದ ಕಿಟಕಿಗಳನ್ನು ತೆರೆಯಲು ಯತ್ನಿಸಿದ್ದರು.

ಇದನ್ನೂ ಓದಿ: ಹಳೆಯ ಪೈಪ್, ಲಾರಿ ಚಸ್ಸಿಯಲ್ಲೇ ಸಿದ್ದವಾಯ್ತು ಸೇತುವೆ; ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಪರಿಕಲ್ಪನೆಗೆ ಜನರು ಫಿದಾ

ಆದರೆ, ಸಾಧ್ಯವಾಗದ ಹಿನ್ನೆಲೆಯಲ್ಲಿ ವಾಪಸ್​ ಹೋದರು. ಹೋಗುವಾಗ ಗೇಟ್​ಗೆ ಹಾನಿ ಮಾಡಿದ್ದಾರೆ ಎಂದು ಸೈನ್​ ಇನ್​ ಸೆಕ್ಯೂರಿಟಿ ಮಾಹಿತಿ ನೀಡಿದ್ದಾರೆ. ತಂಡ ಐಟಿ ಅಧಿಕಾರಿಗಳಂತೆ ಮನೆಗೆ ಆಗಮಿಸಿತ್ತು. ಜೊತೆಯಲ್ಲಿ ಓರ್ವ ಪೊಲೀಸ್ ಪೇದೆಯೂ ಇದ್ದ ಎಂಬ ಮಾಹಿತಿ ಗೊತ್ತಾಗಿದೆ. ಘಟನೆ ಸಂಬಂಧ ಕೋಟ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಸೈನ್ ಇನ್ ಸೆಕ್ಯೂರಿಟಿ ಕುಂದಾಪುರ ವ್ಯಾಪ್ತಿಯಲ್ಲಿ ಹಲವು ಮನೆ ಕಳ್ಳತನವನ್ನು ವಿಫಲಗೊಳಿಸಿದೆ. ಸಿಸಿಟಿವಿ ಅಳವಡಿಸಿರುವ ಮನೆಗೆ 24 ಗಂಟೆಯೂ ಭದ್ರತೆ ನೀಡಲಾಗುತ್ತದೆ. ಯಾವುದೇ ಅನಪೇಕ್ಷಿತ ವಿಚಾರದ ಬಗ್ಗೆ ಸೈನ್ ಇನ್ ಸೆಕ್ಯೂರಿಟಿ ಅಲರ್ಟ್ ಮಾಡುತ್ತೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:35 am, Mon, 29 July 24

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ