AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಹ್ಮಾವರ: ಐಟಿ ದಾಳಿ ಮಾದರಿಯಲ್ಲಿ ದರೋಡೆಗೆ ಯತ್ನ, ದೂರು ದಾಖಲು

ಉಡುಪಿ ಜಿಲ್ಲೆಯಲ್ಲಿ ಖತರ್ನಾಕ್ ಗ್ಯಾಂಗ್​ ಒಂದು ಆ್ಯಕ್ಟಿವ್ ಆಗಿದೆ. ಐಟಿ ಅಧಿಕಾರಿಗಳ ಮಾದರಿಯಲ್ಲಿ ಮನೆಯ ಮೇಲೆ ದಾಳಿ ಮಾಡಿ, ದರೋಡೆ ಮಾಡುತ್ತಿದೆ. ಬ್ರಹ್ಮಾವರ ತಾಲೂಕಿನ ಮಣೂರು ಗ್ರಾಮದ ಕವಿತಾ ಎಂಬುವರ ನಿವಾಸಕ್ಕೆ ಇದೇ ಗ್ಯಾಂಗ್ ನುಗ್ಗಿತ್ತು. ಆದರೆ ದರೋಡೆ ಯತ್ನ ವಿಫಲಗಿದೆ.

ಬ್ರಹ್ಮಾವರ: ಐಟಿ ದಾಳಿ ಮಾದರಿಯಲ್ಲಿ ದರೋಡೆಗೆ ಯತ್ನ, ದೂರು ದಾಖಲು
ಅಕ್ರಮವಾಗಿ ಮನೆಯೋಳಗೆ ನುಗ್ಗಿದ ಅಪರಿಚಿತರು
ಹರೀಶ್ ಜಿ.ಆರ್​.
| Edited By: |

Updated on:Jul 29, 2024 | 10:42 AM

Share

ಉಡುಪಿ, ಜುಲೈ 29: ಬ್ರಹ್ಮಾವರ (Brahmavara) ತಾಲೂಕಿನ ಮಣೂರು ಗ್ರಾಮದ ಕವಿತಾ (34) ಎಂಬುವರ ನಿವಾಸಕ್ಕೆ ಸುಮಾರು 6-8 ಜನರು ನುಗ್ಗಿ ದಾಂಧಲೆ ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜುಲೈ 25ರ ಬೆಳಗ್ಗೆ 8.30ರ ಸುಮಾರಿಗೆ ಯಾರೋ ಕವಿತಾ ಅವರ ಮನೆ ಬಾಗಿಲು ತಟ್ಟಿದ್ದಾರೆ. ಆದರೆ, ಕವಿತಾ ಅವರು 9 ಗಂಟೆ ಸುಮಾರಿಗೆ ಬಾಗಿಲು ತೆರೆದು ಹೊರಗೆ ಬಂದು ನೋಡಿದಾಗ ಯಾರು ಇರಲಿಲ್ಲ.

ಬಳಿಕ, ಮನೆಯ ಸಿಸಿಟಿವಿ ದೃಶ್ಯಗಳನ್ನು ಮೇಲ್ವಿಚಾರಣೆ ಮಾಡುವ ಸೈನ್​ ಇನ್​ ಸೆಕ್ಯುರಿಟಿಯು ಕವಿತಾ ಅವರಿಗೆ ಕರೆ ಮಾಡಿದ್ದಾರೆ. 6-8 ಜನರ ಇನ್ನೋವಾ, ಸ್ವಿಫ್ಟ್ ಕಾರಿನಲ್ಲಿ ಮನೆ ಬಳಿ ಬಂದಿದ್ದರು. ಬಳಿಕ ಕಾಂಪೌಂಡ್ ಹಾರಿ ಮನೆಯ ಆವರಣ ಪ್ರವೇಶೀಸಿದ್ದರು. ನಂತರ ಬಾಗಿಲು ಬಡಿದು ಮನೆಯವರನ್ನ ಕರೆದಿದ್ದಾರೆ. ಆದರೆ, ಮನೆ ಬಾಗಿಲು ತೆರೆಯದಿದ್ದರಿಂದ ಕಿಟಕಿಗಳನ್ನು ತೆರೆಯಲು ಯತ್ನಿಸಿದ್ದರು.

ಇದನ್ನೂ ಓದಿ: ಹಳೆಯ ಪೈಪ್, ಲಾರಿ ಚಸ್ಸಿಯಲ್ಲೇ ಸಿದ್ದವಾಯ್ತು ಸೇತುವೆ; ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಪರಿಕಲ್ಪನೆಗೆ ಜನರು ಫಿದಾ

ಆದರೆ, ಸಾಧ್ಯವಾಗದ ಹಿನ್ನೆಲೆಯಲ್ಲಿ ವಾಪಸ್​ ಹೋದರು. ಹೋಗುವಾಗ ಗೇಟ್​ಗೆ ಹಾನಿ ಮಾಡಿದ್ದಾರೆ ಎಂದು ಸೈನ್​ ಇನ್​ ಸೆಕ್ಯೂರಿಟಿ ಮಾಹಿತಿ ನೀಡಿದ್ದಾರೆ. ತಂಡ ಐಟಿ ಅಧಿಕಾರಿಗಳಂತೆ ಮನೆಗೆ ಆಗಮಿಸಿತ್ತು. ಜೊತೆಯಲ್ಲಿ ಓರ್ವ ಪೊಲೀಸ್ ಪೇದೆಯೂ ಇದ್ದ ಎಂಬ ಮಾಹಿತಿ ಗೊತ್ತಾಗಿದೆ. ಘಟನೆ ಸಂಬಂಧ ಕೋಟ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಸೈನ್ ಇನ್ ಸೆಕ್ಯೂರಿಟಿ ಕುಂದಾಪುರ ವ್ಯಾಪ್ತಿಯಲ್ಲಿ ಹಲವು ಮನೆ ಕಳ್ಳತನವನ್ನು ವಿಫಲಗೊಳಿಸಿದೆ. ಸಿಸಿಟಿವಿ ಅಳವಡಿಸಿರುವ ಮನೆಗೆ 24 ಗಂಟೆಯೂ ಭದ್ರತೆ ನೀಡಲಾಗುತ್ತದೆ. ಯಾವುದೇ ಅನಪೇಕ್ಷಿತ ವಿಚಾರದ ಬಗ್ಗೆ ಸೈನ್ ಇನ್ ಸೆಕ್ಯೂರಿಟಿ ಅಲರ್ಟ್ ಮಾಡುತ್ತೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:35 am, Mon, 29 July 24

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!