AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

ಉಡುಪಿ ಜಿಲ್ಲೆಯ ಬ್ರಹ್ಮಾವರ(Bramavara) ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಉಡುಪಿ: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು
ಮೃತ ಯುವಕರು
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Mar 26, 2024 | 5:36 PM

Share

ಉಡುಪಿ, ಮಾ.26: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ(Bramavara) ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ನಡೆದಿದೆ. ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಮೃತ ರ್ದುದೈವಿಗಳು. ಮೀನು ಹಿಡಿಯಲೆಂದು ಇಂದು(ಮಾ.26) ಬೆಳಿಗ್ಗೆ ನಾಗರ ಮಠದ ಸೀತಾ ನದಿಗೆ ಹೋಗಿದ್ದರು. ಈ ವೇಳೆ ಮೀನಿಗೆ ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ನೀರು ಪಾಲಾಗಿದ್ದಾರೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

ಹಾಸನ: ಹಾಸನ ತಾಲೂಕಿನ ಉದ್ದೂರು ಕೊಪ್ಪಲು ಗ್ರಾಮದ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆಯಾಗಿದೆ. ಶುಭ(28) ಮೃತ ರ್ದುದೈವಿ. ಪತಿಯೇ ಹಲ್ಲೆಮಾಡಿ ಹತ್ಯೆ ಮಾಡಿರುವ ಬಗ್ಗೆ ಶುಭನಾ ಪೋಷಕರು ಆರೋಪಿಸಿದ್ದಾರೆ. ಮೂರುವರೆ ವರ್ಷದ ಹಿಂದೆ ಹಾಸನದ ಸುನೀಲ್ ಜೊತೆ ಶುಭ ಮದುವೆಯಾಗಿದ್ದರು. ಇದೀಗ ಮೃತಳ ಪತಿಯನ್ನು ಬಂಧಿಸಿ ಕಾನೂನು ಕ್ರಮಕ್ಕೆ‌ ಸಂಬಂಧಿಕರು ಆಗ್ರಹಿಸಿದ್ದಾರೆ. ಈ ಘಟನೆ ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಎಲೆಕ್ಟ್ರಾನಿಕ್ ಸಿಟಿ ಲೇಔಟ್​ ವಿಲ್ಲಾವೊಂದರಲ್ಲಿ ಅಗ್ನಿ ಅವಘಡ; ತಾಯಿ-ಮಗಳು ಜಸ್ಟ್​ ಮಿಸ್​

ಆನೇಕಲ್: ಕಾನ್​ಕಾರ್ಡ್ ಕುಪರ್ಟಿನೊ ಲೇಔಟ್​ನ ವಿಲ್ಲಾದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು,​ ಅಗ್ನಿಶಾಮಕ ಠಾಣಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಾಯಿ-ಮಗಳು ಬಚಾವ್ ಆಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿನ ವಿಲ್ಲಾದಲ್ಲಿ ಅನುಪ್ ಅಂಜನ್ ಮತ್ತು ಮೇಹಾ ದಂಪತಿ ವಾಸವಿದ್ದರು. ದೇವರ ಕೋಣೆಯಲ್ಲಿ ದೀಪ ಹಚ್ಚಿ ಬಾಲ್ಕನಿಯ ರೂಮ್ ನಲ್ಲಿ ತಾಯಿ-ಮಗಳು ಇದ್ದರು. ಈ ವೇಳೆ ದೇವರ ಕೋಣೆಯಲ್ಲಿದ್ದ ದೀಪದಿಂದ ಬೆಂಕಿ ಹೊತ್ತಿಕೊಂಡಿದೆ.

ಇದನ್ನೂ ಓದಿ:ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರ ದುರ್ಮರಣ, ಮಗಳ ರಕ್ಷಣೆಗೆ ಹೋದ ದಂಪತಿ ದುರಂತ ಅಂತ್ಯ

ಗ್ರೌಂಡ್ ಪ್ಲೋರ್​ನಲ್ಲಿ ಸಂಪೂರ್ಣವಾಗಿ ಬೆಂಕಿ ಆವರಿಸಿದ್ದು, ಬಾಲ್ಕನಿಯಿಂದ ಕೆಳಗೆ ಬರಲಾಗದೆ ತಾಯಿ-ಮಗಳ ರೋಧನೆ ಅನುಭವಿಸಿದ್ದರು. ಬಳಿಕ ತಾಯಿ-ಮಗಳ ಕಿರುಚಾಟ ಕೇಳಿದ ಸ್ಥಳೀಯರು, ಕೂಡಲೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಠಾಣಾ ಸಿಬ್ಬಂದಿ, ಅಗ್ನಿ ಅವಘಡದಲ್ಲಿ ಸಿಲುಕಿದ್ದ ತಾಯಿ-ಮಗಳನ್ನು ರಕ್ಷಣೆ ಮಾಡಿ, ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮನೆಯಲ್ಲಿದ್ದ ಬಟ್ಟೆ, ಮಂಚ, ಸೇರಿದಂತೆ ಬೆಲೆಬಾಳುವ ವಸ್ತುಗಳು ಬೆಂಕಿಗಾಹುತಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:49 pm, Tue, 26 March 24

Follow Us
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!