ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಎಂಟನೇ ಆರೋಪಿ ಪ್ರಸಾದ್​ನನ್ನು ಮತ್ತೆ ವಶಕ್ಕೆ ಪಡೆದ ಸಿಸಿಬಿ

ಬಿಜೆಪಿ ಎಂಎಲ್​ಎ ಟಿಕೆಟ್ ಕೊಡುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಮತ್ತು ಇತರ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಹಣಕಾಸಿನ ವ್ಯವಹಾರ, ಸಂಪರ್ಕಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಚಾರಣೆ ಎದುರಿಸಿದ್ದ ಎಂಟನೇ ಆರೋಪಿ ಪ್ರಸಾದ್​ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ.

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಎಂಟನೇ ಆರೋಪಿ ಪ್ರಸಾದ್​ನನ್ನು ಮತ್ತೆ ವಶಕ್ಕೆ ಪಡೆದ ಸಿಸಿಬಿ
ಪ್ರಸಾದ್ ಬೈಂದೂರು ಮತ್ತು ಚೈತ್ರಾ ಕುಂದಾಪುರ
Follow us
| Updated By: Rakesh Nayak Manchi

Updated on:Sep 16, 2023 | 9:51 AM

ಉಡುಪಿ, ಸೆ.16: ಬಿಜೆಪಿ ಎಂಎಲ್​ಎ ಟಿಕೆಟ್ ಕೊಡುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ (Chaitra Kundapura) ಮತ್ತು ಇತರ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಹಣಕಾಸಿನ ವ್ಯವಹಾರ, ಸಂಪರ್ಕಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಚಾರಣೆ ಎದುರಿಸಿದ್ದ ಎಂಟನೇ ಆರೋಪಿ ಪ್ರಸಾದ್​ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ.

ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿರುವ ಪ್ರಸಾದ್ ಬೈಂದೂರು ಉದ್ಯಮಿ ಗೋವಿಂದ ಬಾಬು ಪೂಜಾರಿ ಆಪ್ತರಾಗಿದ್ದಾರೆ. ಹಣಕಾಸಿನ ವ್ಯವಹಾರ, ಸಂಪರ್ಕಗಳಿಗೆ ಸಂಬಂಧಿಸಿದಂತೆ ಎರಡು ದಿನದ ಹಿಂದೆ ವಿಚಾರಣೆ ನಡೆಸಿ ಕಳುಹಿಸಿದ್ದ ಪ್ರಸಾದ್​ನನ್ನು ಸಿಸಿಬಿ ಪೊಲೀಸರು ಮತ್ತೊಮ್ಮೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಚೈತ್ರಾ ಕಬಾಬ್ ಗ್ಯಾಂಗ್ ಡೀಲಿಂಗ್​ ಆಡಿಯೋ ಬಹಿರಂಗ, ಸುನಿಲ್ ಕುಮಾರ್ ಹೆಸರು ಪ್ರಸ್ತಾಪ

ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ಈ ನಡುವೆ, ಚೈತ್ರಾ ಮತ್ತು ಪ್ರಸಾದ್ ಮಾತನಾಡಿರುವ ಆಡಿಯೋ ಬಹಿರಂಗವಾಗಿದೆ. ಈ ಸಂಭಾಷಣೆ ವೇಳೆ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರನ್ನು ಪ್ರಸಾದ್ ಚೈತ್ರಾಗೆ ಪರಿಚಯಿಸಿದ್ದಾನೆ. ಅಷ್ಟು ಮಾತ್ರವಲ್ಲದೆ, ಮಾಜಿ ಸಚಿವ ಸುನಿಲ್ ಕುಮಾರ್ ಹೆಸರು ಕೂಡ ಪ್ರಸ್ತಾಪವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:50 am, Sat, 16 September 23