AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಎಂಟನೇ ಆರೋಪಿ ಪ್ರಸಾದ್​ನನ್ನು ಮತ್ತೆ ವಶಕ್ಕೆ ಪಡೆದ ಸಿಸಿಬಿ

ಬಿಜೆಪಿ ಎಂಎಲ್​ಎ ಟಿಕೆಟ್ ಕೊಡುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಮತ್ತು ಇತರ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಹಣಕಾಸಿನ ವ್ಯವಹಾರ, ಸಂಪರ್ಕಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಚಾರಣೆ ಎದುರಿಸಿದ್ದ ಎಂಟನೇ ಆರೋಪಿ ಪ್ರಸಾದ್​ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ.

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಎಂಟನೇ ಆರೋಪಿ ಪ್ರಸಾದ್​ನನ್ನು ಮತ್ತೆ ವಶಕ್ಕೆ ಪಡೆದ ಸಿಸಿಬಿ
ಪ್ರಸಾದ್ ಬೈಂದೂರು ಮತ್ತು ಚೈತ್ರಾ ಕುಂದಾಪುರ
ಪ್ರಜ್ವಲ್ ಅಮೀನ್​, ಉಡುಪಿ
| Edited By: Rakesh Nayak Manchi|

Updated on:Sep 16, 2023 | 9:51 AM

Share

ಉಡುಪಿ, ಸೆ.16: ಬಿಜೆಪಿ ಎಂಎಲ್​ಎ ಟಿಕೆಟ್ ಕೊಡುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ (Chaitra Kundapura) ಮತ್ತು ಇತರ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಹಣಕಾಸಿನ ವ್ಯವಹಾರ, ಸಂಪರ್ಕಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಚಾರಣೆ ಎದುರಿಸಿದ್ದ ಎಂಟನೇ ಆರೋಪಿ ಪ್ರಸಾದ್​ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ.

ಪ್ರಕರಣದಲ್ಲಿ ಎಂಟನೇ ಆರೋಪಿಯಾಗಿರುವ ಪ್ರಸಾದ್ ಬೈಂದೂರು ಉದ್ಯಮಿ ಗೋವಿಂದ ಬಾಬು ಪೂಜಾರಿ ಆಪ್ತರಾಗಿದ್ದಾರೆ. ಹಣಕಾಸಿನ ವ್ಯವಹಾರ, ಸಂಪರ್ಕಗಳಿಗೆ ಸಂಬಂಧಿಸಿದಂತೆ ಎರಡು ದಿನದ ಹಿಂದೆ ವಿಚಾರಣೆ ನಡೆಸಿ ಕಳುಹಿಸಿದ್ದ ಪ್ರಸಾದ್​ನನ್ನು ಸಿಸಿಬಿ ಪೊಲೀಸರು ಮತ್ತೊಮ್ಮೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಚೈತ್ರಾ ಕಬಾಬ್ ಗ್ಯಾಂಗ್ ಡೀಲಿಂಗ್​ ಆಡಿಯೋ ಬಹಿರಂಗ, ಸುನಿಲ್ ಕುಮಾರ್ ಹೆಸರು ಪ್ರಸ್ತಾಪ

ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ಈ ನಡುವೆ, ಚೈತ್ರಾ ಮತ್ತು ಪ್ರಸಾದ್ ಮಾತನಾಡಿರುವ ಆಡಿಯೋ ಬಹಿರಂಗವಾಗಿದೆ. ಈ ಸಂಭಾಷಣೆ ವೇಳೆ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರನ್ನು ಪ್ರಸಾದ್ ಚೈತ್ರಾಗೆ ಪರಿಚಯಿಸಿದ್ದಾನೆ. ಅಷ್ಟು ಮಾತ್ರವಲ್ಲದೆ, ಮಾಜಿ ಸಚಿವ ಸುನಿಲ್ ಕುಮಾರ್ ಹೆಸರು ಕೂಡ ಪ್ರಸ್ತಾಪವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:50 am, Sat, 16 September 23

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ