ಉಡುಪಿ ಕಾಲೇಜು ವಿಡಿಯೋ ಚಿತ್ರೀಕರಣ ಸ್ಥಳ ಪರಿಶೀಲಿಸಿದ ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್, ಬಳಿಕ ಹೇಳಿದ್ದಿಷ್ಟು

ಉಡುಪಿಯ ಅಂಬಲಪಾಡಿಯಲ್ಲಿರುವ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಮಾಡಿದ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಚುರುಕುಗೊಳಸಿದ್ದಾರೆ. ಈ ಸಂಬಂಧ ಖುದ್ದು ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ಉಡುಪಿಗೆ ಭೇಟಿ ನೀಡಿ ವಿಡಿಯೋ ಚಿತ್ರೀಕರಣದ ಸ್ಥಳ ಪರಿಶೀಲಿಸಿದರು.

ಉಡುಪಿ ಕಾಲೇಜು ವಿಡಿಯೋ ಚಿತ್ರೀಕರಣ ಸ್ಥಳ ಪರಿಶೀಲಿಸಿದ ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್, ಬಳಿಕ ಹೇಳಿದ್ದಿಷ್ಟು
ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್
Follow us
| Updated By: ರಮೇಶ್ ಬಿ. ಜವಳಗೇರಾ

Updated on: Aug 10, 2023 | 2:17 PM

ಉಡುಪಿ, (ಆಗಸ್ಟ್ 10): ರಾಜ್ಯದಲ್ಲಿ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲಿ ಭಾರೀ ಸದ್ದು ಮಾಡಿರುವ ಉಡುಪಿ (Udupi) ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ (Video) ಚಿತ್ರೀಕರಣ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ(CID) ವಹಿಸಿದ್ದು, ಇದೀಗ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ಇಂದು (ಆಗಸ್ಟ್ 10) ಉಡುಪಿಯ ಅಂಬಲಪಾಡಿಯಲ್ಲಿರುವ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಡುಪಿ ಎಸ್​ಪಿಯಿಂದ ಮಾಹಿತಿ ಪಡೆದು ನಂತರ ಕಾಲೇಜಿಗೆ ಭೇಟಿ ನೀಡಿದ ಮನೀಶ್ ಕರ್ಬೀಕರ್, ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಸ್ಥಳ ಪರಿಶೀಲಿಸಿ ಬಳಿಕ ಕಾಲೇಜು ಆಡಳಿತಾಧಿಕಾರಿಯಿಂದ ಮಾಹಿತಿ ಪಡೆದುಕೊಂಡರು.

ಇದನ್ನೂ ಓದಿ: ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿಯಲ್ಲಿ ನಡೆದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಉಡುಪಿ ಪೊಲೀಸರು ನಡೆಸಿದ ತನಿಖೆ ರಿಪೋರ್ಟ್ ಪಡೆದುಕೊಳ್ಳಲಾಗಿದೆ. ಪೊಲೀಸ್ ಮತ್ತು ಸಿಐಡಿ ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆ ಮಾಡಿದ್ದು, ಮುಂದೆ ಏನೇನು ತನಿಖಾ ಪ್ರಕ್ರಿಯೆ ನಡೆಸಬೇಕು ಈ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

ತನಿಖಾಧಿಕಾರಿಯಾಗಿ ಸಿಐಡಿ ಡಿವೈಎಸ್ಪಿ ಅಂಜುಮಾಲ ಅವರನ್ನು ನೇಮಕ ಮಾಡಲಾಗಿದೆ. ತನಿಖೆಯ ಮೇಲ್ವಿಚಾರಣೆಯನ್ನು ಸಿಐಡಿ ಎಸ್.ಪಿ ರಾಘವೇಂದ್ರ ಹೆಗಡೆ ನಡೆಸುತ್ತಾರೆ. ಶೀಘ್ರದಲ್ಲೇ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ತನಿಖಾಧಿಕಾರಿ ಕೈ ಸೇರಲಿದ್ದು, ಪ್ರಕರಣದ ತನಿಖೆ ಆದ ನಂತರ ಕೋರ್ಟಿಗೆ ಮುಂದಿನ ವರದಿ ಕೊಡುತ್ತೇವೆ. ಮೂರು ಮೊಬೈಲ್ ಎಫ್ಎಸ್ಎಲ್ ವರದಿ ತನಿಖೆಯ ಒಂದು ಭಾಗವಾಗಿ ನಾವು ತೆಗೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

ಇನ್ನಷ್ಟು ಉಡುಪಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ