AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಕಾಲೇಜು ವಿಡಿಯೋ ಚಿತ್ರೀಕರಣ ಸ್ಥಳ ಪರಿಶೀಲಿಸಿದ ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್, ಬಳಿಕ ಹೇಳಿದ್ದಿಷ್ಟು

ಉಡುಪಿಯ ಅಂಬಲಪಾಡಿಯಲ್ಲಿರುವ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಮಾಡಿದ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಚುರುಕುಗೊಳಸಿದ್ದಾರೆ. ಈ ಸಂಬಂಧ ಖುದ್ದು ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ಉಡುಪಿಗೆ ಭೇಟಿ ನೀಡಿ ವಿಡಿಯೋ ಚಿತ್ರೀಕರಣದ ಸ್ಥಳ ಪರಿಶೀಲಿಸಿದರು.

ಉಡುಪಿ ಕಾಲೇಜು ವಿಡಿಯೋ ಚಿತ್ರೀಕರಣ ಸ್ಥಳ ಪರಿಶೀಲಿಸಿದ ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್, ಬಳಿಕ ಹೇಳಿದ್ದಿಷ್ಟು
ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Aug 10, 2023 | 2:17 PM

Share

ಉಡುಪಿ, (ಆಗಸ್ಟ್ 10): ರಾಜ್ಯದಲ್ಲಿ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲಿ ಭಾರೀ ಸದ್ದು ಮಾಡಿರುವ ಉಡುಪಿ (Udupi) ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ (Video) ಚಿತ್ರೀಕರಣ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ(CID) ವಹಿಸಿದ್ದು, ಇದೀಗ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ಇಂದು (ಆಗಸ್ಟ್ 10) ಉಡುಪಿಯ ಅಂಬಲಪಾಡಿಯಲ್ಲಿರುವ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಡುಪಿ ಎಸ್​ಪಿಯಿಂದ ಮಾಹಿತಿ ಪಡೆದು ನಂತರ ಕಾಲೇಜಿಗೆ ಭೇಟಿ ನೀಡಿದ ಮನೀಶ್ ಕರ್ಬೀಕರ್, ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಸ್ಥಳ ಪರಿಶೀಲಿಸಿ ಬಳಿಕ ಕಾಲೇಜು ಆಡಳಿತಾಧಿಕಾರಿಯಿಂದ ಮಾಹಿತಿ ಪಡೆದುಕೊಂಡರು.

ಇದನ್ನೂ ಓದಿ: ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿಯಲ್ಲಿ ನಡೆದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಉಡುಪಿ ಪೊಲೀಸರು ನಡೆಸಿದ ತನಿಖೆ ರಿಪೋರ್ಟ್ ಪಡೆದುಕೊಳ್ಳಲಾಗಿದೆ. ಪೊಲೀಸ್ ಮತ್ತು ಸಿಐಡಿ ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆ ಮಾಡಿದ್ದು, ಮುಂದೆ ಏನೇನು ತನಿಖಾ ಪ್ರಕ್ರಿಯೆ ನಡೆಸಬೇಕು ಈ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

ತನಿಖಾಧಿಕಾರಿಯಾಗಿ ಸಿಐಡಿ ಡಿವೈಎಸ್ಪಿ ಅಂಜುಮಾಲ ಅವರನ್ನು ನೇಮಕ ಮಾಡಲಾಗಿದೆ. ತನಿಖೆಯ ಮೇಲ್ವಿಚಾರಣೆಯನ್ನು ಸಿಐಡಿ ಎಸ್.ಪಿ ರಾಘವೇಂದ್ರ ಹೆಗಡೆ ನಡೆಸುತ್ತಾರೆ. ಶೀಘ್ರದಲ್ಲೇ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ತನಿಖಾಧಿಕಾರಿ ಕೈ ಸೇರಲಿದ್ದು, ಪ್ರಕರಣದ ತನಿಖೆ ಆದ ನಂತರ ಕೋರ್ಟಿಗೆ ಮುಂದಿನ ವರದಿ ಕೊಡುತ್ತೇವೆ. ಮೂರು ಮೊಬೈಲ್ ಎಫ್ಎಸ್ಎಲ್ ವರದಿ ತನಿಖೆಯ ಒಂದು ಭಾಗವಾಗಿ ನಾವು ತೆಗೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

ಇನ್ನಷ್ಟು ಉಡುಪಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK