AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಲ್ಕೊರೆತ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಭೇಟಿ: ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಬೀಚ್​​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿದ್ದಾರೆ.

ಕಡಲ್ಕೊರೆತ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಭೇಟಿ: ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ
ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿ
TV9 Web
| Edited By: ವಿವೇಕ ಬಿರಾದಾರ|

Updated on:Jul 13, 2022 | 10:14 PM

Share

ಉಡುಪಿ: ಉಡುಪಿ (Udupi) ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಬೀಚ್​​ಗೆ (Maravanthe Beach) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಭೇಟಿ ನೀಡಿ, ಕಡಲ ಕೊರೆತ ಎಲ್ಲವನ್ನು ನೋಡಿದ್ದೇನೆ. ಪ್ರತಿ ವರ್ಷ ಸ್ವಲ್ಪ ಸ್ವಲ್ಪ ಕಡಲ ಕೊರೆತ ಸಂಭವಿಸುತ್ತಿದೆ. ಕಡಲಲ್ಲಿ ಬೇರೆ ಕಡೆ ಹಾಕಿರೊ ಕಲ್ಲು ಮತ್ತೊಂದು ಕಡೆ ಬಂದಿದೆ. ಮೊದಲು ಹಾನಿ‌ ತಡೆಯಲು ತಾತ್ಕಾಲಿಕ ಕೆಲಸ ಕೂಡಲೆ ಶುರು ಮಾಡುತ್ತೇವೆ ಎಂದು ಭರವಸೆ ನೀಡಿದರು. ಅದಕ್ಕಾಗಿ ಎಷ್ಟು ಹಣ ಬೇಕು ಅಷ್ಟನ್ನೂ ಕೊಡುತ್ತೇವೆ. ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದರು.

ಕಲ್ಲುಗಳನ್ನು ಸಮರ್ಪಕವಾಗಿ ಹಾಕಿಲ್ಲ. ಒಂದು ಬದಿಯಿಂದ ಮತ್ತೊಂದು ಬದಿಗೆ ಕಲ್ಲು ತಂದು ಹಾಕಿದ್ದಾರೆ.  ಕಳಪೆ ಕಾಮಗಾರಿ ಆಗಿರುವ ಕಡೆ ಕ್ರಮ ಕೈಗೊಳ್ಳುತ್ತೇವೆ. ಬೋಟ್​ಗೆ ಸಂಬಂಧಪಟ್ಟಂತೆ 84 ಕೋಟಿ ಟೆಂಡರ್ ಆಗಿದೆ. ಮನೆಗಳು ಬಿದ್ದರೆ ಐದು ಲಕ್ಷ ಕೊಡಲು ತೀರ್ಮಾನಿಸಿದ್ದೇವೆ ಎಂದರು.

 ಭಾರಿ ಮಳೆಯಿಂದ ಕಡಲ ತೀರದ ನಿವಾಸಿಗಳಿಗೆ ಸಂಕಷ್ಟ

ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ತೊಟ್ಟಂ ಕಡಲ ತೀರದಲ್ಲಿ ಕಡಲ್ಕೊರೆತದಿಂದ  ನೂರಾರು ತೆಂಗಿನ ಮರಗಳು ಕೊಚ್ಚಿಹೋಗಿವೆ. ತೊಟ್ಟಂ ಕಡಲ ತೀರದಲ್ಲಿ ನೂರಾರು ಮನೆಗಳಿದ್ದರೂ ತಡೆಗೋಡೆಯಿಲ್ಲ. ಆದರೆ ಶ್ರೀಮಂತರ ರೆಸಾರ್ಟ್​ ಇರುವ ಭಾಗದಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಸರ್ಕಾರ, ಅಧಿಕಾರಿಗಳ ವಿರುದ್ಧ ತೊಟ್ಟಂ ತೀರದ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಡಜನರು ನೆಲೆಸಿರುವ ಭಾಗದಲ್ಲಿ ತಡೆಗೋಡೆ ನಿರ್ಮಿಸಿಲ್ಲವೆಂದು ಕಿಡಿ ಕಾರಿದ್ದಾರೆ.

Published On - 3:28 pm, Wed, 13 July 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ