AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM Siddaramaiah: ಆ.​ 1ರಂದು ಮಳೆಹಾನಿ ಜಿಲ್ಲೆಗಳಿಗೆ ಸಿದ್ದರಾಮಯ್ಯ ಭೇಟಿ, ಮೊದಲು ಸಿಎಂ ಹೋಗುವುದೆಲ್ಲಿಗೆ?

ಆಗಸ್ಟ್​ 1ರಂದು ಮಳೆಹಾನಿ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಮಳೆ ಹಿನ್ನೆಲೆ  ಭೇಟಿ ನೀಡಲಿದ್ದಾರೆ.

CM Siddaramaiah: ಆ.​ 1ರಂದು ಮಳೆಹಾನಿ ಜಿಲ್ಲೆಗಳಿಗೆ ಸಿದ್ದರಾಮಯ್ಯ ಭೇಟಿ, ಮೊದಲು ಸಿಎಂ ಹೋಗುವುದೆಲ್ಲಿಗೆ?
ಸಿಎಂ ಸಿದ್ದರಾಮಯ್ಯImage Credit source: IANS Photo
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Jul 30, 2023 | 12:01 PM

Share

ಬೆಂಗಳೂರು, ಜುಲೈ 30: ರಾಜ್ಯದಲ್ಲಿ ಮುಂಗಾರು(Monsoon) ಮಳೆ ಚುರುಕುಗೊಂಡಿದ್ದು ವರುಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ರಾಜ್ಯದಲ್ಲಿ ಮಳೆಯಿಂದಾಗಿ ಭಾರಿ ಅನಾಹುತಗಳು ಸಂಭವಿಸಿದ್ದು ಜಲಾಶಯಗಳು ತುಂಬಿ ಹರಿದಿವೆ. ಮಳೆ ನೀರು ಮನೆ, ತೋಟಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯನವರು(Siddaramaiah) ಮಳೆಹಾನಿ ಜಿಲ್ಲೆಗಳಿಗೆ ಭೇಟಿ ನೀಡಲು ನಿರ್ಧರಿಸಿದ್ದಾರೆ. ಆದ್ರೆ ಜುಲೈ 31ರ ಬದಲಿಗೆ ಆಗಸ್ಟ್​ 1ರಂದು ಮಳೆಹಾನಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.

ಈ ಹಿಂದೆ ಜುಲೈ 31ರಿಂದ ಮಳೆಪೀಡಿತ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದರು. ಆದ್ರೆ ನಾಳೆ ಎಸ್​ಸಿಪಿ-ಟಿಪಿಎಸ್​​ಪಿ ಸಭೆ ಹಿನ್ನೆಲೆ ಭೇಟಿ ದಿನಾಂಕವನ್ನು ಬದಲಾವಣೆ ಮಾಡಲಾಗಿದ್ದು ಆಗಸ್ಟ್​ 1ರಂದು ಮಳೆಹಾನಿ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಮಳೆ ಹಿನ್ನೆಲೆ  ಭೇಟಿ ನೀಡಲಿದ್ದಾರೆ. ಉಡುಪಿ ಕಾಲೇಜು ವಿಡಿಯೋ ಪ್ರಕರಣದ ವಿವಾದದ ಬೆನ್ನಲ್ಲೇ ಸಿಎಂ ಖುದ್ದು ಜಿಲ್ಲೆಗಳಿಗೆ ತೆರಳಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ: ಕರಾವಳಿಯಲ್ಲಿ ಮಳೆ ಕಡಿಮೆಯಾದರು ನಿಲ್ಲದ ಕಡಲ ಅಬ್ಬರ, ಮಂಗಳೂರು ಬೀಚ್​ಗಳಿಗೆ ಪ್ರವಾಸಿಗರಿಗೆ ನಿರ್ಬಂಧ

ಉಡುಪಿ ಮತ್ತು ಮಂಗಳೂರಿನಲ್ಲಿ ಮಳೆ ಪ್ರಮಾಣ ಹೆಚ್ಚಾಗಿ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಹಾನಿಯಾಗಿದ್ದರಿಂದ ಖುದ್ದು ಜಿಲ್ಲೆಗಳಿಗೆ ತೆರಳಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಆಗಸ್ಟ್​ 1ರಂದು ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಉಡುಪಿಯಲ್ಲಿ ಕಾಲೇಜು ವಿಡಿಯೋ ಪ್ರಕರಣ ಸಾಕಷ್ಟು ಸದ್ದು ಮಾಡ್ತಿರೋದ್ರಿಂದ ಜಿಲ್ಲೆಯ ಅಧಿಕಾರಿಗಳಿಂದ ಈ ಬಗ್ಗೆ ಮಾಹಿತಿ ಪಡೆಯುವ ಸಾಧ್ಯತೆ ಇದೆ. ಮಂಗಳವಾರ ಉಡುಪಿ ಮತ್ತು ಮಂಗಳೂರು ಪ್ರವಾಸ ಮುಗಿಸಿ ಅಂದು ರಾತ್ರಿಯೇ ಬೆಂಗಳೂರಿಗೆ ಸಿಎಂ ವಾಪಸ್ ಆಗಲಿದ್ದಾರೆ.

ಎಸ್​ಸಿಪಿ-ಟಿಪಿಎಸ್​​ಪಿ ಸಭೆ ಹಿನ್ನೆಲೆ ಸಚಿವರ ಜೊತೆ ಸಿಎಂ ಚರ್ಚೆ

ಇನ್ನು ಮತ್ತೊಂದೆಡೆ ನಾಳೆ ಎಸ್​ಸಿಪಿ-ಟಿಪಿಎಸ್​​ಪಿ ಸಭೆ ಹಿನ್ನೆಲೆ ಸಿಎಂ ನಿವಾಸ ಕಾವೇರಿಗೆ ಸಚಿವರು ಭೇಟಿ ನೀಡುತ್ತಿದ್ದಾರೆ. ಸಚಿವರಾದ ಡಾ.ಪರಮೇಶ್ವರ್​​, ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚೆ ಮಾಡ್ತಿದ್ದಾರೆ. ದಲಿತರ ಮೇಲೆ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಕಾಯ್ದೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಉಭಯ ಸಚಿವರು ನಾಳೆ ಮೀಟಿಂಗ್ ನಲ್ಲಿ ಚರ್ಚೆ ಮಾಡುವ ಮುನ್ನ ಪೂರ್ವಬಾವಿಯಾಗಿ ಸಿಎಂ ಜೊತೆ ಚರ್ಚಿಸುತ್ತಿದ್ದಾರೆ. ಸಿಎಂ ಜೊತೆ ಉಡುಪಿ ಪ್ರಕರಣದ ಬಗ್ಗೆಯೂ ಗೃಹ ಸಚಿವ ಪರಮೇಶ್ವರ್ ಚರ್ಚೆ ನಡೆಸುವ ಸಾಧ್ಯತೆ ಇದೆ. ಮಂಗಳವಾರ ಸಿಎಂ ಉಡುಪಿ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಹೀಗಾಗಿ ತೆರಳುವ ಮುನ್ನ ಪ್ರಸ್ತುತ ನಡೆದಿರುವ ಬೆಳವಣಿಗೆ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಸದ್ಯ ಸಿಎಂ ಭೇಟಿಗೆ ಡಿಜಿಐಜಿಪಿ ಅಲೋಕ್ ಮೋಹನ್ ಅವರು ಆಗಮಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!