AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಶ್ರೀಕೃಷ್ಣನೂರಿಗೆ ಸಿದ್ದರಾಮಯ್ಯ ಭೇಟಿ, ಕಪ್ಪುಪಟ್ಟಿ ಪ್ರದರ್ಶಿಸಲು ಬಿಜೆಪಿ, ಹಿಂದೂಪರ ಸಂಘಟನೆಗಳು ಪ್ಲ್ಯಾನ್

ಖಾಸಗಿ ಕಾಲೇಜಿನ ಟಾಯ್ಲೆಟ್​ನಲ್ಲಿ ವಿಡಿಯೋ ವಿವಾದದ ಬಳಿಕ ಇದೇ ಮೊದಲ ಬಾರಿಗೆ ಇಂದು ಉಡುಪಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ. ಸರ್ಕಾರ ರಚನೆಯಾದ ಬಳಿಕ ಇದೇ ಮೊದಲ ಭೇಟಿಯಾಗಿದ್ದು, ಸಿದ್ದರಾಮಯ್ಯಗೆ ಪ್ರತಿಭಟನೆಯ ಬಿಸಿ ತಟ್ಟುವ ಎಲ್ಲಾ ಲಕ್ಷಣಗಳು ಗೋಚರಿಸಿದೆ.

ಇಂದು ಶ್ರೀಕೃಷ್ಣನೂರಿಗೆ ಸಿದ್ದರಾಮಯ್ಯ ಭೇಟಿ, ಕಪ್ಪುಪಟ್ಟಿ ಪ್ರದರ್ಶಿಸಲು ಬಿಜೆಪಿ, ಹಿಂದೂಪರ ಸಂಘಟನೆಗಳು ಪ್ಲ್ಯಾನ್
ಸಿದ್ದರಾಮಯ್ಯ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Aug 01, 2023 | 7:35 AM

Share

ಉಡುಪಿ, (ಆಗಸ್ಟ್ 01): ಕಳೆದ 1 ವಾರದಿಂದ ಉಡುಪಿ (Udupi)ವಿವಾದದ ಕೇಂದ್ರ ಬಿಂದುವಾಗಿದೆ. ಖಾಸಗಿ ಕಾಲೇಜಿನ ಟಾಯ್ಲೆಟ್​ನಲ್ಲಿ ವಿಡಿಯೋ ವಿವಾದದ ಬಳಿಕ ಇದೇ ಮೊದಲ ಬಾರಿಗೆ ಇಂದು ಉಡುಪಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಭೇಟಿ ನೀಡುತ್ತಿದ್ದಾರೆ. ಸರ್ಕಾರ ರಚನೆಯಾದ ಬಳಿಕವೂ ಇದೇ ಮೊದಲ ಭೇಟಿಯಾಗಿದ್ದು, ಸಿದ್ದರಾಮಯ್ಯಗೆ ಪ್ರತಿಭಟನೆಯ ಬಿಸಿ ತಟ್ಟುವ ಎಲ್ಲಾ ಲಕ್ಷಣಗಳು ಗೋಚರಿಸಿದೆ. ಹೌದು.. ಉಡುಪಿಯ ಖಾಸಗಿ ಕಾಲೇಜಿನ ಟಾಯ್ಲೆಟ್​ನಲ್ಲಿ ಹಿಂದೂ ಯುವತಿಯ ವಿಡಿಯೋ ಚಿತ್ರೀಕರಣ ವಿವಾದ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಇದೇ ವಿಚಾರ ಧಗಧಗಿಸುತ್ತಿದೆ. ಇದೇ ಹೊತ್ತಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಉಡುಪಿಗೆ ಭೇಟಿ ನೀಡುತ್ತಿದ್ದಾರೆ. ಸಿಎಂ ಭೇಟಿ ವೇಳೆಯೇ ಕಪ್ಪು ಪಟ್ಟಿ ಪ್ರದರ್ಶಿಸಿ, ಪ್ರತಿಭಟನೆ ನಡೆಸಲು ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ಪ್ಲ್ಯಾನ್ ಮಾಡಿವೆ.

ಇದನ್ನೂ ಓದಿ: ವಿದೇಶದಲ್ಲಿ ಕುಳಿತು ವಿದ್ಯಾರ್ಥಿನಿಯರ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ: ಯಶ್​ಪಾಲ್ ಸುವರ್ಣ

ಇಂದು ಬೆಳಗ್ಗೆ 11.30ಕ್ಕೆ ಪಡುಬಿದ್ರೆಗೆ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ, ಕಡಲ ಕೊರೆತದಿಂದ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಬಳಿಕ ಜಿಲ್ಲಾ ಪಂಚಾಯತ್​ನಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ. ಈ ವೇಳೆ ಪ್ರತಿಭಟನೆ ನಡೆಸಿ, ಸಿಎಂಗೆ ಕಪ್ಪುಪಟ್ಟಿ ಪ್ರದರ್ಶನ ಮಾಡಬೇಕು ಎನ್ನುವುದು ಬಿಜೆಪಿಯ ಪ್ಲ್ಯಾನ್ ಆಗಿದೆ.

ಇನ್ನು ವಿಡಿಯೋ ವಿವಾದಕ್ಕೆ ಕಾಲೇಜಿನ ಆಡಳಿತ ಮಂಡಳಿಯೇ ನೇರ ಹೊಣೆ, ಮತ್ತು ಆಡಳಿತಾಧಿಕಾರಿಯ ಬೇಜವಾಬ್ದಾರಿಯೂ ಪ್ರಕರಣ ಇಷ್ಟು ದೊಡ್ಡದಾಗಲು ಕಾರಣ ಎನ್ನುವ ರೀತಿಯಲ್ಲಿ ವಿದ್ಯಾರ್ಥಿನಿ ಹೇಳಿಕೆ ನೀಡಿದ್ದಳು. ಈ ವಿಡಿಯೋ ವೈರಲ್ ಆಗುತ್ತಿರುವ ಬೆನ್ನಲ್ಲೇ ಬೆದರಿಕೆ ಕರೆಗಳು ಬರುತ್ತಿವೆಯಂತೆ ಜಿಗರ್ ಕೋಬ್ರಾ ಎನ್ನುವ ಪ್ರೊಫೈಲ್ ಮೂಲಕ ಸಾಕಷ್ಟು ಬೆದರಿಕೆ, ಅಶ್ಲೀಲ ಕಾಮೆಂಟ್​ಗಳು ಬರ್ತಿವೆ ಅಂತ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆರೋಪಿಸಿದ್ದಾರೆ.

ಸಿಎಂ ಉಡುಪಿ ಜಿಲ್ಲಾ ಪ್ರವಾಸದ ವೇಳಾಪಟ್ಟಿ

ಇಂದು (ಆಗಸ್ಟ್ -1) ಬೆಳಗ್ಗೆ 9.55 ಕ್ಕೆ ಬೆಂಗಳೂರು ಏರ್​ಪೋರ್ಟ್​ನಿಂದ ಹೊರಟು ಮಂಗಳೂರು ವಿಮಾನ ನಿಲ್ದಾಣಕ್ಕೆ 11 ಗಂಟೆಗೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ 12.30ಕ್ಕೆ ಉಡುಪಿ ತಲುಪಲಿದ್ದಾರೆ. 12.30 ರಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಉಡುಪಿಯಿಂದ ಹೊರಟು ಸಂಜೆ 4.15ಕ್ಕೆ ಮಂಗಳೂರಿಗೆ ತೆರಳಲಿದ್ದಾರೆ. 4.15ರಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ. ಬಳಿಕ 9.50 ಕ್ಕೆ ಮಂಗಳೂರು ಏರ್ಪೋರ್ಟ್ ನಿಂದ ಹೊರಟು 10.45 ಕ್ಕೆ ಬೆಂಗಳೂರು ಏರ್ಪೋರ್ಟ್ ವಾಪಸ್ ಆಗಲಿದ್ದಾರೆ.

ಸದ್ಯ ಉಡುಪಿ ಜಿಲ್ಲೆಯಲ್ಲಿ ಖಾಸಗಿ ಕಾಲೇಜಿನ ವಿವಾದ ದಿನೇ ದಿನೇ ಹೊಸ ಆಯಾಮ ಪಡೆದುಕೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಸಿಎಂ ಉಡುಪಿಗೆ ಭೇಟಿ ನೀಡುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಇನ್ನಷ್ಟು ಉಡುಪಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​