AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಸರ್ಕಾರಿ ಹಾಸ್ಟೆಲ್​ಗೆ ಸಿಎಂ ದಿಢೀರ್​ ಭೇಟಿ: ಸಿದ್ದರಾಮಯ್ಯ ಮುಂದೆ ಮಹತ್ವದ ಬೇಡಿಕೆಯಿಟ್ಟ ವಿದ್ಯಾರ್ಥಿನಿಯರು

ಜಿಲ್ಲೆಯಲ್ಲಾದ ಮಳೆ ಹಾನಿ ಪ್ರದೇಶಗಳಿಗೆ ಇಂದು(ಆ.1) ಸಿಎಂ ಸಿದ್ದರಾಮಯ್ಯನವರು ಭೇಟಿ ನೀಡಲು ಆಗಮಿಸಿದ್ದಾರೆ. ಈ ವೇಳೆ ಉಡುಪಿ ಜಿಲ್ಲೆಯ ಬನ್ನಂಜೆಯಲ್ಲಿರುವ ಸರ್ಕಾರಿ ಹಾಸ್ಟೆಲ್​ಗೆ ಸಿಎಂ ದಿಢೀರ್ ಭೇಟಿ ನೀಡಿದ್ದು, ವಿದ್ಯಾರ್ಥಿನಿಯರ ಜೊತೆ ಸಿಎಂ ಮಾತುಕತೆ ನಡೆಸಿದ್ದಾರೆ.

ಉಡುಪಿ ಸರ್ಕಾರಿ ಹಾಸ್ಟೆಲ್​ಗೆ ಸಿಎಂ ದಿಢೀರ್​ ಭೇಟಿ: ಸಿದ್ದರಾಮಯ್ಯ ಮುಂದೆ ಮಹತ್ವದ ಬೇಡಿಕೆಯಿಟ್ಟ ವಿದ್ಯಾರ್ಥಿನಿಯರು
ಸಿಎಂ ಸಿದ್ದರಾಮಯ್ಯ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Aug 01, 2023 | 2:47 PM

Share

ಉಡುಪಿ, ಆ.1: ಜಿಲ್ಲೆಯಲ್ಲಾದ ಮಳೆ ಹಾನಿ ಪ್ರದೇಶಗಳಿಗೆ ಇಂದು(ಆ.1) ಸಿಎಂ ಸಿದ್ದರಾಮಯ್ಯ(CM Siddaramaiah)ನವರು ಭೇಟಿ ನೀಡಲು ಆಗಮಿಸಿದ್ದಾರೆ. ಈ ವೇಳೆ ಉಡುಪಿ(Udupi) ಜಿಲ್ಲೆಯ ಬನ್ನಂಜೆಯಲ್ಲಿರುವ ಸರ್ಕಾರಿ ಹಾಸ್ಟೆಲ್ಗೆ ಸಿಎಂ ದಿಢೀರ್ ಭೇಟಿ ನೀಡಿದ್ದು, ವಿದ್ಯಾರ್ಥಿನಿಯರ ಜೊತೆ ಸಿಎಂ ಮಾತುಕತೆ ನಡೆಸಿದ್ದಾರೆ. ಹೌದು, ‘ಗೃಹಲಕ್ಷ್ಮೀ ಯೋಜನೆ ಬಗ್ಗೆ ವಿದ್ಯಾರ್ಥಿನಿಯರ ಜೊತೆ ಮಾತುಕತೆ ನಡೆಸಿದ ಸಿಎಂ, ‘ಈ ಯೋಜನೆಯಿಂದ ನಿಮಗೆ ಹಣ ಸಿಗುವುದಿಲ್ಲ, ಬದಲಾಗಿ ನಿಮ್ಮ ಅಮ್ಮನಿಗೆ ಹಣ ಸಿಗುತ್ತದೆ ಎಂದಿದ್ದಾರೆ. ಇದೇ ವೇಳೆ ‘ಡಿಗ್ರಿ ಪಾಸಾದ ಮೇಲೆ ನಿಮಗೆ ಕೆಲಸ ಸಿಗುವ ತನಕ ಯುವನಿಧಿ ನೀಡುತ್ತೇವೆ. ನಿಮ್ಮ ಭವಿಷ್ಯಕ್ಕೆ ಒಳ್ಳೆಯದಾಗಲಿ ಎಂದರು.

ಸಿಎಂ ಬಳಿ ನಮಗೆ ಲ್ಯಾಪ್ ಟಾಪ್ ಕೊಡಿ ಎಂದು ಬೇಡಿಕೆಯಿಟ್ಟ ವಿದ್ಯಾರ್ಥಿನಿಯರು

ಇನ್ನು ವಿದ್ಯಾರ್ಥಿಗಳ ಜೊತೆ ಮಾತನಾಡುವಾಗ ‘ನಮಗೆ ಲ್ಯಾಪ್​ಟಾಪ್ ಅವಶ್ಯಕತೆಯಿದ್ದು ಅದನ್ನು ಕೊಡಬೇಕಾಗಿ ಬೇಡಿಕೆಯಿಟ್ಟಿದ್ದಾರೆ. ಹೌದು, ಸರ್ಕಾರಿ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ತಮ್ಮ ಬೇಡಿಕೆಯನ್ನು ಸಿಎಂ ಮುಂದಿಟ್ಟಿದ್ದಾರೆ. ಕೊನೆಯ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಅಗತ್ಯವಿದೆ. ನಮಗೆ ಲ್ಯಾಪ್ ಟಾಪ್ ಕೊಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಇನ್ನು ಈ ವೇಳೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಉಪಸ್ಥಿತರಿದ್ದರು.

ಇದನ್ನೂ ಓದಿ:ಬಿಜೆಪಿ ಸರ್ಕಾರದ ಅವಧಿಯಲ್ಲೇ ತಿರುಪತಿಗೆ ತುಪ್ಪ ಪೂರೈಕೆ ಸ್ಥಗಿತ, ಬೊಮ್ಮಾಯಿ ಹಿಂದೂ ವಿರೋಧಿಯೋ? ನಳಿನ್ ಕುಮಾರ್ ಕಟೀಲ್​ಗೆ​ ಸಿದ್ದರಾಮಯ್ಯ ತಿರುಗೇಟು

Published On - 2:45 pm, Tue, 1 August 23

ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?