AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್​ ಮಂಡಳಿಯಿಂದ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ 10 ಹೊಸ ಕಾಲೇಜು: ಸರ್ಕಾರಿ ಕಾಲೇಜುಗಳ ಪಠ್ಯಕ್ರಮ

ಪ್ರತಿ ಕಾಲೇಜಿಗೆ ₹ 2.50 ಕೋಟಿ ಅನುದಾನ ಮತ್ತು ಅಗತ್ಯ ಪ್ರಮಾಣದ ಭೂಮಿಯನ್ನು ವಕ್ಫ್ ಮಂಡಳಿಯೇ ಒದಗಿಸಲಿದೆ.

ವಕ್ಫ್​ ಮಂಡಳಿಯಿಂದ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ 10 ಹೊಸ ಕಾಲೇಜು: ಸರ್ಕಾರಿ ಕಾಲೇಜುಗಳ ಪಠ್ಯಕ್ರಮ
ಕರ್ನಾಟಕ
TV9 Web
| Edited By: |

Updated on:Nov 30, 2022 | 1:20 PM

Share

ಬೆಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ವಕ್ಫ್​ ಮಂಡಳಿ ಮುಂದಾಗಿದೆ. ಹೀಗೆ ನಿರ್ಮಿಸುವ ಪ್ರತಿ ಕಾಲೇಜಿಗೆ ₹ 2.50 ಕೋಟಿ ಅನುದಾನ ಮತ್ತು ಅಗತ್ಯ ಪ್ರಮಾಣದ ಭೂಮಿಯನ್ನು ವಕ್ಫ್ ಮಂಡಳಿಯೇ ಒದಗಿಸಲಿದೆ. ಮುಂದಿನ ತಿಂಗಳು ಮುಸ್ಲಿಂ ವಿದ್ಯಾರ್ಥಿನಿಯರ ಕಾಲೇಜು ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದು, ಉದ್ಘಾಟನಾ ಸಮಾರಂಭದ ಆಹ್ವಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ನೀಡಲಾಗಿದೆ.  ‘ದಕ್ಷಿಣ‌ ಕನ್ನಡ‌ ಜಿಲ್ಲೆಯ ಅಡ್ಯಾರ್ ಕಣ್ಣೂರಿನಲ್ಲಿ, ಉಡುಪಿ,‌ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರಕರ್ನಾಟಕ ಸೇರಿದಂತೆ ರಾಜ್ಯದ ಹತ್ತು ಕಡೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜು ಸ್ಥಾಪಿಸಲಾಗುವುದು’ ಎಂದು ವಕ್ಫ್ ಬೋರ್ಡ್​ ಅಧ್ಯಕ್ಷ ಶಫಿ ಸಅದಿ ಹೇಳಿದರು.

‘ಬಾಲಕಿಯರ ಶಿಕ್ಷಣಕ್ಕಾಗಿ ಕ್ರಮ ತೆಗೆದುಕೊಳ್ಳಬೇಕೆಂದು ನಾವು ಈ ಮೊದಲೇ ಚಿಂತನೆ ನಡೆಸಿದ್ದೆವು. ಹಿಜಾಬ್ ವಿವಾದಕ್ಕೂ ನಮ್ಮ ನಿರ್ಧಾರಕ್ಕೂ ಯಾವುದೇ ಸಂಬಂಧವಿಲ್ಲ. ರಾಜ್ಯದ ಬೇರೆಲ್ಲಾ ಶಾಲಾ-ಕಾಲೇಜುಗಳ ರೀತಿಯಲ್ಲಿಯೂ ಈ ಶಾಲಾ-ಕಾಲೇಜುಗಳು ಕಾರ್ಯನಿರ್ವಹಿಸುತ್ತವೆ. ರಾಜ್ಯದ ಹಲವು ಜಿಲ್ಲೆಗಳಿಂದ ಈ ಸಂಬಂಧ ಬೇಡಿಕೆ ಬಂದಿದೆ. ಎಲ್ಲವನ್ನೂ ಪರಿಶೀಲಿಸುತ್ತೇವೆ’ ಎಂದು ಅವರು ತಿಳಿಸಿದರು.

‘ದಯವಿಟ್ಟು ಹೆಣ್ಣುಮಕ್ಕಳ ಶಿಕ್ಷಣವನ್ನು ಹಿಜಾಬ್ ನೆರಳಿನಲ್ಲಿ ನೋಡಬೇಡಿ. ರಾಜ್ಯದಲ್ಲಿ ಮೊದಲಿನಿಂದಲೇ ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸಿಯೇ ಶಾಲೆ-ಕಾಲೇಜುಗಳಿಗೆ ಹೋಗುತ್ತಿದ್ದರು. ಕೆಲವರು ಹೋಗುತ್ತಿರಲಿಲ್ಲ. ಈಗಲೂ ಕೆಲವೆಡೆ ಹೋಗುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ವಿಚಾರಣೆ ಸುಪ್ರೀಂಕೋರ್ಟ್​ನಲ್ಲಿ ನಡೆಯುತ್ತಿದೆ. ಹಿಜಾಬ್ ಕಾರಣಕ್ಕೆ ಶಿಕ್ಷಣ ಸಂಸ್ಥೆಗಳಿಂದ ಹೊರ ಬಂದ ಹೆಣ್ಣುಮಕ್ಕಳಿಗೂ ನಾವು ಆರಂಭಿಸಲಿರುವ ಶಾಲಾ-ಕಾಲೇಜುಗಳಲ್ಲಿ ಪ್ರವೇಶಾವಕಾಶ ಇರುತ್ತದೆ’ ಎಂದು ಅವರು ಸ್ಪಷ್ಟಪಡಿಸಿದರು.

‘ಹಿಜಾಬ್​ಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ನ್ಯಾಯಾಲಯದ ಆದೇಶಗಳು ಸರ್ಕಾರಿ ಪಿಯು ಕಾಲೇಜುಗಳಿಗೆ ಮಾತ್ರವೇ ಅನ್ವಯವಾಗುತ್ತವೆ. ಇಸ್ಲಾಮಿಕ್ ಷರಿಯತ್ ನಿಯಮಗಳ ಪ್ರಕಾರ ಹಿಜಾಬ್​ ಧರಿಸಿಯೇ ಹೆಣ್ಣುಮಕ್ಕಳು ಶಾಲಾ-ಕಾಲೇಜುಗಳಿಗೆ ಹೋಗಬೇಕಾಗುತ್ತದೆ’ ಎಂದು ಅವರು ತಿಳಿಸಿದರು.

ಇದನ್ನೂಓದಿ: ಉಡುಪಿ: 10 ಮಾರ್ಕ್ಸ್ ಕಡಿಮೆ ಬಂದಿದ್ದಕ್ಕೆ ಫೈನ್ ಹಾಕುವುದಾಗಿ ಗದರಿದ ಪ್ರಿನ್ಸಿಪಾಲ್, ಮನನೊಂದು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:38 am, Wed, 30 November 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ