AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi: ಕಾರ್ಕಳದ ವಿವಾದಿತ ಪರಶುರಾಮ ಥೀಮ್ ಪಾರ್ಕ್​​ನ ತಾಮ್ರದ ತಗಡಿಗೆ ಕನ್ನ

ಉಡುಪಿ ಜಿಲ್ಲೆಯ ಕಾರ್ಕಳದ ವಿವಾದಿತ ಪರಶುರಾಮ ಥೀಮ್ ಪಾರ್ಕ್‌ನ ಕಟ್ಟಡದಿಂದ ಕಳ್ಳರು ತಾಮ್ರದ ತಗಡುಗಳನ್ನು ಕದ್ದೊಯ್ದಿದ್ದಾರೆ. ಅನುದಾನವಿಲ್ಲದೆ ಪಾಳುಬಿದ್ದಿರುವ ಈ ಪಾರ್ಕ್, ಕಳ್ಳಕಾಕರ ತಾಣವಾಗಿ ಪರಿಣಮಿಸಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸುನಿಲ್ ಕುಮಾರ್, ಕಳ್ಳತನಕ್ಕೆ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ. ತಕ್ಷಣ ಹಣ ಬಿಡುಗಡೆ ಮಾಡಿ, ಪಾರ್ಕ್ ಸಾರ್ವಜನಿಕರ ಭೇಟಿಗೆ ತೆರೆಯುವಂತೆ ಆಗ್ರಹಿಸಿದ್ದಾರೆ.

Udupi: ಕಾರ್ಕಳದ ವಿವಾದಿತ ಪರಶುರಾಮ ಥೀಮ್ ಪಾರ್ಕ್​​ನ ತಾಮ್ರದ ತಗಡಿಗೆ ಕನ್ನ
ತಾಮ್ರದ ತಗಡನ್ನು ಕತ್ತರಿಸಿರುವುದು.
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Jan 05, 2026 | 4:16 PM

Share

ಉಡುಪಿ, ಜನವರಿ 05: ಭಾರಿ ವಿವಾದಕ್ಕೆ ಕಾರಣವಾಗಿ ಪಾಳುಬಿದ್ದಿರುವ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿನ ಪರಶುರಾಮ ಥೀಂ ಪಾರ್ಕ್ನನಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಕಟ್ಟಡದ ಬಾಗಿಲನ್ನು ಮುರಿದು ಒಳ ನುಗ್ಗಿರುವ ಚಾಲಾಕಿಗಳು, ಮೇಲ್ಚಾವಣಿಗೆ ಹಾಕಿದ್ದ ತಾಮ್ರದ ಹೊದಿಕೆಗಳನ್ನು ಕಿತ್ತು ಹೊತ್ತೊಯ್ದಿದ್ದಾರೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಥೀಮ್​​ ಪಾರ್ಕ್​​ ನಿರ್ಮಾಣ ಮಾಡಲಾಗಿತ್ತು. ಪರಶುರಾಮ ಪ್ರತಿಮೆ ವಿಚಾರವಾಗಿ ಅವ್ಯವಹಾರ ಆರೋಪ ಕೇಳಿಬಂದಿದ್ದ ಹಿನ್ನೆಲೆ ತನಿಖೆಯೂ ನಡೆದಿತ್ತು. ಅನುದಾನವಿಲ್ಲದೆ ಸದ್ಯ ಥೀಂಪಾರ್ಕ್​​ ಪಾಳು ಬಿದ್ದಿದ್ದು, ಇಲ್ಲಿನ ವಸ್ತುಗಳು ಕಳ್ಳಕಾಕರ ಪಾಲಾಗತೊಡಗಿವೆ.

ಘಟನೆ ಬೆನ್ನಲ್ಲೇ ಕಾರ್ಕಳದ ಬೈಲೂರು ಉಮಿಕಲ್ ಬೆಟ್ಟದಲ್ಲಿರುವ ಥೀಂ ಪಾರ್ಕ್​​ಗೆ ಶಾಸಕ ಸುನಿಲ್ ಕುಮಾರ್ ಭೇಟಿ ನೀಡಿದ್ದಾರೆ. ಈ ಸ್ಥಳಕ್ಕೆ ಎರಡೂವರೆ ವರ್ಷಗಳ ಬಳಿಕ ಶಾಸಕರು ಭೇಟಿ ನೀಡಿದ್ದು, ಅಲ್ಲಿನ ಸ್ಥಿತಿ ನೋಡಿ ಬೇಸರ ಹೊರಹಾಕಿದ್ದಾರೆ. ಬಳಿಕ ಮಾತನಾಡಿದ ಅವರು, ಕಾರ್ಕಳದ ಇತಿಹಾಸಕ್ಕೆ ಇದು ದುರ್ದೈವ. ಕಳ್ಳತನವಾಗಲು ಕಾಂಗ್ರೆಸ್ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣ. ಪರಶುರಾಮ ಥೀಂ ಪಾರ್ಕ್​​ ಈಗ ಅನೈತಿಕ ಚಟುವಟಿಕೆಯ ತಾಣವಾಗುತ್ತಿದ್ದು, ಬಿಜೆಪಿ ಸರಕಾರ ಮಂಜೂರು ಮಾಡಿದ ನಾಲ್ಕೂವರೆ ಕೋಟಿ ಹಣ ಇನ್ನೂ ಬರಬೇಕಿದೆ. ತಕ್ಷಣ ಈ ಹಣ ಬಿಡುಗಡೆ ಮಾಡಿ, ಥೀಂ ಪಾರ್ಕ್​​ಗೆ ಸಾರ್ವಜನಿಕರ ಭೇಟಿಗೆ ಅವಕಾಶ ಮಾಡಿಕೊಡಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಪ್ರಕರಣ; ಶಿಲ್ಪಿ ಬಂಧನ

ಧರ್ಮಸ್ಥಳದಲ್ಲಿ ಬುರುಡೆ ಗ್ಯಾಂಗ್ ರೀತಿ ಇಲ್ಲೊಂದು ಫೈಬರ್ ಗ್ಯಾಂಗ್ ಇದೆ. ಎಲ್ಲ ಕಾಮಗಾರಿಗಳು ದಾಖಲೆ ಪ್ರಕಾರವೇ ನಡೆದಿದೆ. ಇದು ಫೈಬರ್ ಪ್ರತಿಮೆ ಅಲ್ಲ ಅನ್ನೋದು ಚಾರ್ಜ್​​ಶೀಟ್​​ನಲ್ಲಿ ಸ್ಪಷ್ಟವಾಗಿದ್ದು, ವಿವಾದಗಳು ಅಲ್ಲಿಗೆ ಮುಗಿದಿವೆ. ಹೀಗಾಗಿ ಇನ್ನೂ ರಾಜಕೀಯ ಮಾಡುವುದು ಬೇಡ.  ಅಭಿವೃದ್ಧಿ ದೃಷ್ಟಿಯಿಂದ ಕೆಲಸ ಮಾಡೋಣ. ರಾಜಕೀಯ ಕಾರಣಕ್ಕೆ ಸರಕಾರ ಹಣ ಬಿಡುಗಡೆ ಮಾಡಿಲ್ಲ. ಸಾರ್ವಜನಿಕರ ತಾಳ್ಮೆಯ ಕಟ್ಟೆ ಒಡೆಯುವ ಮುಂಚೆ ಎಚ್ಚೆತ್ತುಕೊಳ್ಳಿ . ಜೊತೆಗೆ ಮುಂದಿನ ಮಸ್ತಕಾಭಿಷೇಕದ ವೇಳೆ ಪ್ರವಾಸಿಗರು ಇಲ್ಲಿಗೆ ಬರುವಂತಾಗಬೇಕು ಎಂದು ಸುನಿಲ್​​ ಕುಮಾರ್​ ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​