Udupi: ಕಾರ್ಕಳದ ವಿವಾದಿತ ಪರಶುರಾಮ ಥೀಮ್ ಪಾರ್ಕ್​​ನ ತಾಮ್ರದ ತಗಡಿಗೆ ಕನ್ನ

ಉಡುಪಿ ಜಿಲ್ಲೆಯ ಕಾರ್ಕಳದ ವಿವಾದಿತ ಪರಶುರಾಮ ಥೀಮ್ ಪಾರ್ಕ್‌ನ ಕಟ್ಟಡದಿಂದ ಕಳ್ಳರು ತಾಮ್ರದ ತಗಡುಗಳನ್ನು ಕದ್ದೊಯ್ದಿದ್ದಾರೆ. ಅನುದಾನವಿಲ್ಲದೆ ಪಾಳುಬಿದ್ದಿರುವ ಈ ಪಾರ್ಕ್, ಕಳ್ಳಕಾಕರ ತಾಣವಾಗಿ ಪರಿಣಮಿಸಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸುನಿಲ್ ಕುಮಾರ್, ಕಳ್ಳತನಕ್ಕೆ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ. ತಕ್ಷಣ ಹಣ ಬಿಡುಗಡೆ ಮಾಡಿ, ಪಾರ್ಕ್ ಸಾರ್ವಜನಿಕರ ಭೇಟಿಗೆ ತೆರೆಯುವಂತೆ ಆಗ್ರಹಿಸಿದ್ದಾರೆ.

Udupi: ಕಾರ್ಕಳದ ವಿವಾದಿತ ಪರಶುರಾಮ ಥೀಮ್ ಪಾರ್ಕ್​​ನ ತಾಮ್ರದ ತಗಡಿಗೆ ಕನ್ನ
ತಾಮ್ರದ ತಗಡನ್ನು ಕತ್ತರಿಸಿರುವುದು.
Edited By:

Updated on: Jan 05, 2026 | 4:16 PM

ಉಡುಪಿ, ಜನವರಿ 05: ಭಾರಿ ವಿವಾದಕ್ಕೆ ಕಾರಣವಾಗಿ ಪಾಳುಬಿದ್ದಿರುವ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿನ ಪರಶುರಾಮ ಥೀಂ ಪಾರ್ಕ್ನನಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಕಟ್ಟಡದ ಬಾಗಿಲನ್ನು ಮುರಿದು ಒಳ ನುಗ್ಗಿರುವ ಚಾಲಾಕಿಗಳು, ಮೇಲ್ಚಾವಣಿಗೆ ಹಾಕಿದ್ದ ತಾಮ್ರದ ಹೊದಿಕೆಗಳನ್ನು ಕಿತ್ತು ಹೊತ್ತೊಯ್ದಿದ್ದಾರೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಥೀಮ್​​ ಪಾರ್ಕ್​​ ನಿರ್ಮಾಣ ಮಾಡಲಾಗಿತ್ತು. ಪರಶುರಾಮ ಪ್ರತಿಮೆ ವಿಚಾರವಾಗಿ ಅವ್ಯವಹಾರ ಆರೋಪ ಕೇಳಿಬಂದಿದ್ದ ಹಿನ್ನೆಲೆ ತನಿಖೆಯೂ ನಡೆದಿತ್ತು. ಅನುದಾನವಿಲ್ಲದೆ ಸದ್ಯ ಥೀಂಪಾರ್ಕ್​​ ಪಾಳು ಬಿದ್ದಿದ್ದು, ಇಲ್ಲಿನ ವಸ್ತುಗಳು ಕಳ್ಳಕಾಕರ ಪಾಲಾಗತೊಡಗಿವೆ.

ಘಟನೆ ಬೆನ್ನಲ್ಲೇ ಕಾರ್ಕಳದ ಬೈಲೂರು ಉಮಿಕಲ್ ಬೆಟ್ಟದಲ್ಲಿರುವ ಥೀಂ ಪಾರ್ಕ್​​ಗೆ ಶಾಸಕ ಸುನಿಲ್ ಕುಮಾರ್ ಭೇಟಿ ನೀಡಿದ್ದಾರೆ. ಈ ಸ್ಥಳಕ್ಕೆ ಎರಡೂವರೆ ವರ್ಷಗಳ ಬಳಿಕ ಶಾಸಕರು ಭೇಟಿ ನೀಡಿದ್ದು, ಅಲ್ಲಿನ ಸ್ಥಿತಿ ನೋಡಿ ಬೇಸರ ಹೊರಹಾಕಿದ್ದಾರೆ. ಬಳಿಕ ಮಾತನಾಡಿದ ಅವರು, ಕಾರ್ಕಳದ ಇತಿಹಾಸಕ್ಕೆ ಇದು ದುರ್ದೈವ. ಕಳ್ಳತನವಾಗಲು ಕಾಂಗ್ರೆಸ್ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣ. ಪರಶುರಾಮ ಥೀಂ ಪಾರ್ಕ್​​ ಈಗ ಅನೈತಿಕ ಚಟುವಟಿಕೆಯ ತಾಣವಾಗುತ್ತಿದ್ದು, ಬಿಜೆಪಿ ಸರಕಾರ ಮಂಜೂರು ಮಾಡಿದ ನಾಲ್ಕೂವರೆ ಕೋಟಿ ಹಣ ಇನ್ನೂ ಬರಬೇಕಿದೆ. ತಕ್ಷಣ ಈ ಹಣ ಬಿಡುಗಡೆ ಮಾಡಿ, ಥೀಂ ಪಾರ್ಕ್​​ಗೆ ಸಾರ್ವಜನಿಕರ ಭೇಟಿಗೆ ಅವಕಾಶ ಮಾಡಿಕೊಡಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಪ್ರಕರಣ; ಶಿಲ್ಪಿ ಬಂಧನ

ಧರ್ಮಸ್ಥಳದಲ್ಲಿ ಬುರುಡೆ ಗ್ಯಾಂಗ್ ರೀತಿ ಇಲ್ಲೊಂದು ಫೈಬರ್ ಗ್ಯಾಂಗ್ ಇದೆ. ಎಲ್ಲ ಕಾಮಗಾರಿಗಳು ದಾಖಲೆ ಪ್ರಕಾರವೇ ನಡೆದಿದೆ. ಇದು ಫೈಬರ್ ಪ್ರತಿಮೆ ಅಲ್ಲ ಅನ್ನೋದು ಚಾರ್ಜ್​​ಶೀಟ್​​ನಲ್ಲಿ ಸ್ಪಷ್ಟವಾಗಿದ್ದು, ವಿವಾದಗಳು ಅಲ್ಲಿಗೆ ಮುಗಿದಿವೆ. ಹೀಗಾಗಿ ಇನ್ನೂ ರಾಜಕೀಯ ಮಾಡುವುದು ಬೇಡ.  ಅಭಿವೃದ್ಧಿ ದೃಷ್ಟಿಯಿಂದ ಕೆಲಸ ಮಾಡೋಣ. ರಾಜಕೀಯ ಕಾರಣಕ್ಕೆ ಸರಕಾರ ಹಣ ಬಿಡುಗಡೆ ಮಾಡಿಲ್ಲ. ಸಾರ್ವಜನಿಕರ ತಾಳ್ಮೆಯ ಕಟ್ಟೆ ಒಡೆಯುವ ಮುಂಚೆ ಎಚ್ಚೆತ್ತುಕೊಳ್ಳಿ . ಜೊತೆಗೆ ಮುಂದಿನ ಮಸ್ತಕಾಭಿಷೇಕದ ವೇಳೆ ಪ್ರವಾಸಿಗರು ಇಲ್ಲಿಗೆ ಬರುವಂತಾಗಬೇಕು ಎಂದು ಸುನಿಲ್​​ ಕುಮಾರ್​ ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.