AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ವರ್ಷಗಳ ಕಾಲ ಬಾಕಿ ಉಳಿದಿದ್ದ ಅಷ್ಟಬಂಧ ಬ್ರಹ್ಮಕಳಶ ಕೊಲ್ಲೂರು ಮೂಕಾಂಬಿಕಾ ದೇವಿಗೆ ಸಮರ್ಪಣೆ

ಬರೋಬ್ಬರಿ12 ವರ್ಷಗಳ ಕಾಲ ಬಾಕಿ ಉಳಿದಿದ್ದ ಅಷ್ಟಬಂಧ ಬ್ರಹ್ಮಕಳಶ ಕೊಲ್ಲೂರು ಮೂಕಾಂಬಿಕಾ ದೇವಿಗೆ ಸಮರ್ಪಣೆ ಆಗಲಿದೆ. ಇದೀಗ ಏಪ್ರಿಲ್ 30 ರಿಂದ ಮೇ 11 ರವರೆಗೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಒಟ್ಟು ಐದು ಕೋಟಿ ವೆಚ್ಚದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ.

12 ವರ್ಷಗಳ ಕಾಲ ಬಾಕಿ ಉಳಿದಿದ್ದ ಅಷ್ಟಬಂಧ ಬ್ರಹ್ಮಕಳಶ ಕೊಲ್ಲೂರು ಮೂಕಾಂಬಿಕಾ ದೇವಿಗೆ ಸಮರ್ಪಣೆ
12 ವರ್ಷಗಳ ಕಾಲ ಬಾಕಿ ಉಳಿದಿದ್ದ ಅಷ್ಟಬಂಧ ಬ್ರಹ್ಮಕಳಶ ಕೊಲ್ಲೂರು ಮೂಕಾಂಬಿಕಾ ದೇವಿಗೆ ಸಮರ್ಪಣೆ ಮಾಡಲಾಗುವುದು ಎಂದು ಹೇಳಿದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on:Mar 01, 2023 | 12:20 PM

Share

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ದಕ್ಷಿಣ ಭಾರತದಲ್ಲಿ ಪ್ರಸಿದ್ಧಿ ಪಡೆದ ಶಕ್ತಿಪೀಠ. ರಾಜ್ಯ ಮಾತ್ರ ಅಲ್ಲ ಹೊರ ರಾಜ್ಯ, ಹೊರದೇಶದ ಭಕ್ತರು ಕೊಲ್ಲೂರಿನ ಕಾರಣಿಕಕ್ಕೆ ಸಾಕ್ಷಿ. ರಾಜ್ಯದ ಎರಡನೇ ಅತಿ ಹೆಚ್ಚು ವರಮಾನದ ದೇವಸ್ಥಾನದಲ್ಲಿ ಕಳೆದ 12 ವರ್ಷಗಳಿಂದ ಧಾರ್ಮಿಕ ಸಂಪ್ರದಾಯ ಒಂದು ನಿಂತುಬಿಟ್ಟಿತ್ತು. 2007 ರ ನಂತರ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆದೇ ಇಲ್ಲ ಎಂಬುದು ಅಚ್ಚರಿಯ ಸಂಗತಿ. ಇದರಿಂದ ಕಂಟಕಗಳು ಇವೆ ಎಂಬ ಅರಿವಿದ್ದರೂ ಅರ್ಚಕ, ಜನಪ್ರತಿನಿಧಿಗಳು ಹಾಗೂ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಜಟಾಪಟಿಯಿಂದ ನಿಂತಿತ್ತು. ಇದೀಗ ಈ ಕಾರ್ಯಕ್ರಮಕ್ಕೆ ಏಪ್ರಿಲ್ ತಿಂಗಳಲ್ಲಿ ದಿನಾಂಕ ನಿಗದಿಯಾಗಿದೆ.

ಅಷ್ಟಬಂಧ ಬ್ರಹ್ಮ ಕಲಶ ಎಂದರೆ, ಎಂಟು ಬಗೆಯ ದ್ರವ್ಯಗಳ ದೇವರ ಪೀಠಕ್ಕೆ ಲೇಪಿಸಲಾಗುತ್ತದೆ. ಪೀಠಕ್ಕೆ ಲೇಪ ಹಾಕಿ 48 ದಿನಗಳ ಕಾಲ ಅದನ್ನು ಒಣಗಲು ಬಿಡಬೇಕು. ಉತ್ಸವ, ಮೂಕಾಂಬಿಕಾ ದೇವಾಲಯದ ಜಾತ್ರೆ ಇರುವ ಕಾರಣ ಅಭಿಷೇಕಾಧಿಗಳು ನಡೆಯುತ್ತಿರುತ್ತದೆ. ಬ್ರಹ್ಮ ಕಲಶ ಯಾರ ಕಾಲದಲ್ಲಿ ಆಗಬೇಕು ಎಂಬ ಅರ್ಚಕರ ನಡುವೆ ವಿಳಂಬವಾಗಿತ್ತು. ಇದೀಗ ಏಪ್ರಿಲ್ 30 ರಿಂದ ಮೇ 11 ರವರೆಗೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಒಟ್ಟು ಐದು ಕೋಟಿ ವೆಚ್ಚದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ.

ಇದನ್ನೂ ಓದಿ:ಉಡುಪಿ: ಜಿಲ್ಲೆಯ ಪ್ರಸಿದ್ಧ ಕಂಬಳ ಅದ್ದೂರಿಯಾಗಿ ನಡೆದಿದ್ದು, ಕೋಣಗಳ ಓಟ ನೋಡಿ ಕಂಬಳ ಪ್ರಿಯರು ಸಂತಸ ಪಟ್ಟರು; ಫೋಟೋಗಳಲ್ಲಿ ನೋಡಿ

ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿರುವುದರಿಂದ ರಾಜಕಾರಣಿಗಳ ಅಬ್ಬರ ಇಲ್ಲದೆ ಶಾಸ್ತ್ರೋತ್ಸವವಾಗಿ ಮೂಕಾಂಬಿಕಾ ದೇವಸ್ಥಾನದ ಬ್ರಹ್ಮಕಲಶ ನಡೆಯಬಹುದು. ಚುನಾವಣಾ ನಿಯಮಗಳ ಕಡಿವಾಣ ಇರುವುದರಿಂದ ಕೇಂದ್ರ ರಾಜ್ಯದ ನಾಯಕರು ಕೇವಲ ಭಕ್ತರಾಗಿ ದೇಗುಲಕ್ಕೆ ಭೇಟಿ ಕೊಡುವ ಅವಕಾಶವನ್ನು ಮಾತ್ರ ಪಡೆಯಲಿದ್ದಾರೆ. ತರಾತುರಿ ಬೇಡ, ವೈಭವದಿಂದ ಬ್ರಹ್ಮಕಲಶ ನಡೆಸೋಣ ಎಂಬುದು ಸ್ಥಳೀಯ ಶಾಸಕ ಸುಕುಮಾರ್ ಶೆಟ್ಟರ ಅಭಿಪ್ರಾಯವಾಗಿತ್ತು. ಸಮಿತಿ ಅರ್ಚಕರ ತೀರ್ಮಾನದ ನಂತರ ಏನೇನು ಬೆಳವಣಿಗೆಗಳು ಆಗುತ್ತದೆ ಎಂಬ ಕುತೂಹಲ ಭಕ್ತರಲ್ಲಿದೆ.

ದಿನೇಶ್ ಯಲ್ಲಾಪುರ್ ಟಿವಿ9 ಉಡುಪಿ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:30 am, Wed, 1 March 23

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್