AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಅಪಾಯದ ಅಂಚಿನಲ್ಲಿದೆ ದೀಪಕ್ ತೂಗು ಸೇತುವೆ; ದುರಸ್ತಿ ಕಾರ್ಯ ಆರಂಭಕ್ಕೆ ಜನರ ಆಗ್ರಹ

ಪಡುಕುದ್ರು ಮತ್ತು ತಿಮ್ಮಣ್ಣಕುದ್ರುವಿಗೆ ಹಿಂದೆ ದೋಣಿ ಮೂಲಕ ಸಂಪರ್ಕ ಇತ್ತು. ನಂತರ ಸುಳ್ಯದ ಗಿರೀಶ್‌ ಭಾರಧ್ವಜ್‌ ಅವರ ಮಾರ್ಗದರ್ಶನದಲ್ಲಿ 1991 ರಲ್ಲಿ ತೂಗು ಸೇತುವೆ ನಿರ್ಮಾಣ ಮಾಡಿ, ದೀಪಕ್ ತೂಗು ಸೇತುವೆ ಅಂತ ನಾಮಕರಣ ಮಾಡಲಾಯಿತು.

ಉಡುಪಿ: ಅಪಾಯದ ಅಂಚಿನಲ್ಲಿದೆ ದೀಪಕ್ ತೂಗು ಸೇತುವೆ;  ದುರಸ್ತಿ ಕಾರ್ಯ ಆರಂಭಕ್ಕೆ ಜನರ ಆಗ್ರಹ
ದೀಪಕ್ ತೂಗು ಸೇತುವೆ
TV9 Web
| Edited By: |

Updated on: Oct 16, 2021 | 4:28 PM

Share

ಉಡುಪಿ: ಅದು ಪ್ರವಾಸಿಗರ ಮೆಚ್ಚಿನ ತೂಗು ಸೇತುವೆ. ವೀಕೆಂಡ್‌ಗಳಲ್ಲಿ ಪ್ರವಾಸಿಗರಿಂದ ತುಂಬಿರುವ ಈ ತೂಗು ಸೇತುವೆಯಲ್ಲಿ, ಸ್ಯಾಂಡಲ್‌ವುಡ್‌ನ ಖ್ಯಾತನಾಮರ ಸಿನಿಮಾ ಚಿತ್ರೀಕರಣ ಕೂಡ ನಡೆದಿದೆ. ಆದರೆ ಸದ್ಯ ಸರ್ಕಾರದ ನಿರ್ಲಕ್ಷ್ಯದಿಂದ, ನಿರ್ವಹಣೆ ಇಲ್ಲದೇ ಅಪಾಯವನ್ನು ಎದುರು ನೋಡುತ್ತಿದೆ.  ಎರಡು ಊರಗಳ ಕೊಂಡಿಯಂತಿರುವ ತೂಗು ಸೇತುವೆ ಕಳಚಿ ಬೀಳುವ ಭೀತಿ ಎದುರಾಗಿದೆ.

ಉಡುಪಿಯಿಂದ ಕೇವಲ 10 ಕಿ.ಮೀ ದೂರದಲ್ಲಿರುವ ದೀಪಕ್ ತೂಗು ಸೇತುವೆಯ ಸದ್ಯದ ಪರಿಸ್ಥಿತಿ ಇದಾಗಿದೆ. ಪಡುಕುದ್ರು ಮತ್ತು ತಿಮ್ಮಣ್ಣಕುದ್ರುವಿಗೆ ಹಿಂದೆ ದೋಣಿ ಮೂಲಕ ಸಂಪರ್ಕ ಇತ್ತು. ನಂತರ ಸುಳ್ಯದ ಗಿರೀಶ್‌ ಭಾರಧ್ವಜ್‌ ಅವರ ಮಾರ್ಗದರ್ಶನದಲ್ಲಿ 1991 ರಲ್ಲಿ ತೂಗು ಸೇತುವೆ ನಿರ್ಮಾಣ ಮಾಡಿ, ದೀಪಕ್ ತೂಗು ಸೇತುವೆ ಅಂತ ನಾಮಕರಣ ಮಾಡಲಾಯಿತು. ಆರಂಭದಲ್ಲಿ ಕುದ್ರುವಿಗೆ ಸಂಪರ್ಕಕ್ಕೆ ಮಾತ್ರ ಸೀಮಿತವಾಗಿದ್ದ ಈ ತೂಗು ಸೇತುವೆ ನಂತರದ ದಿನಗಳಲ್ಲಿ ದೊಡ್ಡ ಪ್ರವಾಸಿ ತಾಣವಾಗಿದೆ ಮಿಂಚಿದೆ. ಆದರೆ ಸದ್ಯ ತೂಗು ಸೇತುವೆ ನಿರ್ವಹಣೆ ಇಲ್ಲದೇ ಅಪಾಯಕ್ಕೆ ಕರೆ ಗಂಟೆ ಬಾರಿಸುತ್ತಿದೆ.

ಕನ್ನಡದ ಹಲವಾರು ಸಿನಿಮಾಗಳು, ಶಾರ್ಟ್ ಮೂವಿಗಳು ಇಲ್ಲಿ ಚಿತ್ರಿಕರಣಗೊಂಡಿದೆ. ವೆಡ್ಡಿಂಗ್ ಶೂಟ್‌ಗಳು ದಿನ ನಿತ್ಯ ನಡೆಯುತ್ತಿದೆ. ವೀಕೆಂಡ್‌ಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಇಲ್ಲಿಗೆ ಬರುವ ಪ್ರವಾಸಿಗರು, ಸ್ವರ್ಣನದಿ ಕಾಯಕಿಂಗ್ ಮಾಡಿ ತೂಗು ಸೇತುವೆಯಲ್ಲಿ ಸೆಲ್ಫಿ‌ ಕ್ಲಿಕಿಸಿ ಖುಷಿ ಪಡುತ್ತಾರೆ. ಇಂತಹ ಪ್ರಸಿದ್ಧಿ ಪಡೆದ ತೂಗು ಸೇತುವೆ ನಿರ್ವಹಣೆ ಇಲ್ಲದೇ ಸೊರಗುತ್ತಿದೆ ಎಂದು ಸ್ಥಳೀಯರಾದ ಪ್ರಮೋದ್ ತಿಳಿಸಿದ್ದಾರೆ.

ಕಾಂಕ್ರೀಟ್‌ ಹಲಗೆಗಳಲ್ಲಿ ಮಧ್ಯೆ ಒಂದೆರಡು ಹಲಗೆಗಳು ಒಡೆದಿದ್ದು, ಈ ಭಾಗದಲ್ಲಿ ಎಚ್ಚರ ತಪ್ಪಿ ಕಾಲಿಟ್ಟರೆ ಅಪಾಯ ತಪ್ಪಿದ್ದಲ್ಲ. ಸೇತುವೆಯ ಎರಡೂ ಬದಿಗೆ ಸುರಕ್ಷತೆಗಾಗಿ ಅಳವಡಿಸಿರುವ ಕಬ್ಬಿಣದ ರಾಡ್‌ಗಳು ತುಂಡಾಗಿ ನೇಲಾಡುತ್ತಿದೆ. ಸೇತುವೆಯನ್ನು ಹಿಡಿದಿಟ್ಟುಕೊಳ್ಳುವ ಪ್ರಮುಖ ವೈಯರ್‌ ರೋಪ್‌ಗ್ಳಿಗೆ ಗ್ರೀಸಿಂಗ್‌ ಮಾಡದೇ ಅನೇಕ ವರ್ಷಗಳು ಕಳೆದಿವೆ. ಎಲ್ಲ ನಟ್‌ ಬೋಲ್ಟ್‌ಗಳು ತುಕ್ಕು ಹಿಡಿದು ಹಾಳಾಗುತ್ತಿದೆ ಎಂದು ಪ್ರವಾಸಿಗರಾದ ಪಲ್ಲವಿ ಬೇಸರ ವ್ಯಕ್ತಪಡಿಸಿದ್ದಾರೆ.

ನಡೆದಾಡಲು ಭಯವಾಗುವ ತೂಗು ಸೇತುವೆಯನ್ನು ಆದಷ್ಟು ಬೇಗ ಸರಿ ಪಡಿಸಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಿ ಎನ್ನುವುದು ಸದ್ಯ ಊರಿನವರ ಆಗ್ರಹ. ಯಾಕೆಂದರೆ ಇಲ್ಲಿಗೆ ಬರುವ ಪ್ರವಾಸಿಗರನ್ನೇ ನಂಬಿ ಹಲವಾರು ಮಂದಿ ಜೀವನ ನಡೆಸುತ್ತಿದ್ದಾರೆ. ದುರದೃಷ್ಟವಶಾತ್ ಪ್ರವಾಸಿಗರು ತುಂಬಿರುವಾಗಲೇ ಏನಾದರೂ ಅಪಾಯ ಸಂಭವಿಸಿದರೆ ದೊಡ್ಡ ಸಾವು ನೋವು ಉಂಟಾಗಬಹುದು. ಹೀಗಾಗಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಆದಷ್ಟು ಬೇಗ ಓ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ.

ವರದಿ: ಹರೀಶ್ ಪಾಲೆಚ್ಚಾರ್

ಇದನ್ನೂ ಓದಿ: ವಿಜಯಪುರ: ಸೇತುವೆಯಲ್ಲಿ ಬಿರುಕು, ರಾಜ್ಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ

ಸ್ಮಾರ್ಟ್ ಸಿಟಿ ಯೋಜನೆ ಕಳಪೆ ಕಾಮಗಾರಿ; ಟಿವಿ9 ವರದಿ ಪ್ರಸಾರದ ಬಳಿಕ ಎಚ್ಛೆತ್ತ ರಾಜ್ಯ ಸರ್ಕಾರ

ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?