AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಕ್ತರೇ ಎಚ್ಚರ: ಕೊಲ್ಲೂರು ಮೂಕಾಂಬಿಕಾ ದೇಗುಲದ ಹೆಸರಿನಲ್ಲಿ ನಕಲಿ ವೆಬ್​ಸೈಟ್ ತೆರೆದು ವಂಚಿಸ್ತಿದ್ದಾರೆ ಸೈಬರ್ ವಂಚಕರು

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಭಕ್ತರಿಗೆ ಕೊಠಡಿ ಬುಕಿಂಗ್ ಹೆಸರಿನಲ್ಲಿ ಹಣ ವಂಚನೆ ನಡೆಸಿದ ಸೈಬರ್ ಕಳ್ಳರ ಕೃತ್ಯ ಬೆಳಕಿಗೆ ಬಂದಿದೆ. QR ಕೋಡ್, PhonePe ಬಳಸಿ ವಂಚಿಸಲಾಗಿದ್ದು, ಹಲವು ಭಕ್ತರು ಮೋಸ ಹೋಗಿದ್ದಾರೆ. ಅಧಿಕೃತ ವೆಬ್‌ಸೈಟ್ ಮೂಲಕ ಮಾತ್ರ ಬುಕ್ ಮಾಡುವಂತೆ ದೇವಾಲಯ ಆಡಳಿತ ಮನವಿ ಮಾಡಿದೆ.

ಭಕ್ತರೇ ಎಚ್ಚರ: ಕೊಲ್ಲೂರು ಮೂಕಾಂಬಿಕಾ ದೇಗುಲದ ಹೆಸರಿನಲ್ಲಿ ನಕಲಿ ವೆಬ್​ಸೈಟ್ ತೆರೆದು ವಂಚಿಸ್ತಿದ್ದಾರೆ ಸೈಬರ್ ವಂಚಕರು
ಕೊಲ್ಲೂರು ಮೂಕಾಂಬಿಕಾ ದೇಗುಲ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Nov 06, 2025 | 11:08 AM

Share

ಉಡುಪಿ, ನವೆಂಬರ್ 6: ರಾಜ್ಯದ ಪ್ರಸಿದ್ಧ ಹಾಗೂ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ (Kollur Mookambika Temple) ಹೆಸರಿನಲ್ಲಿ ನಕಲಿ ವೆಬ್‌ಸೈಟ್ ನಿರ್ಮಿಸಿ ಭಕ್ತರಿಂದ ಹಣ ವಂಚನೆ ನಡೆಸಿದ ಸೈಬರ್ ಕಳ್ಳರ ಕೃತ್ಯ ಇದೀಗ ಬೆಳಕಿಗೆ ಬಂದಿದೆ. ದೇವಾಲಯಕ್ಕೆ ಬರುವ ಭಕ್ತರು ಕೊಠಡಿ ಕಾಯ್ದಿರಿಸಲು ಬಳಸುವ ವೆಬ್​ಸೈಟ್ ರೀತಿ ನಕಲಿ ವೆಬ್​ಸೈಟ್ ನಿರ್ಮಿಸಿ ವಂಚನೆ ಎಸಗಲಾಗುತ್ತಿರುವುದು ಬೆಳಕಿಗೆ ಬಂದಿದೆ. ‘ಕರ್ನಾಟಕ ಟೆಂಪಲ್ ಅಕಮಡೇಶನ್’ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆಯಲಾಗಿತ್ತು. ಈ ಸೈಟ್‌ನಲ್ಲಿ QR ಕೋಡ್ ಮತ್ತು ಫೋನ್‌ಪೇ ಪಾವತಿ ಆಯ್ಕೆಗಳು ನೀಡಲಾಗಿದ್ದು, ಮುಂಗಡ ಬುಕಿಂಗ್ ಹೆಸರಿನಲ್ಲಿ ಹಣ ಪಡೆದು ಭಕ್ತರನ್ನು ವಂಚಿಸಲಾಗುತ್ತಿತ್ತು.

ವಾಟ್ಸಾಪ್ ಮೂಲಕ QR ಕೋಡ್ ಕಳುಹಿಸಿ ಯುಪಿಐ ಪಾವತಿಗೆ ಸೂಚಿಸಿ ಭಕ್ತರಿಂದ ಹಣ ವಂಚಿಸಲಾಗುತ್ತಿತ್ತು. ಪಾವತಿ ಮಾಡಿದ ಭಕ್ತರಿಗೆ ನಕಲಿ ರಶೀದಿ ಕಳುಹಿಸಲಾಗುತ್ತಿತ್ತು. ಆದರೆ, ಭಕ್ತರು ಕೊಲ್ಲೂರಿಗೆ ಬಂದಾಗ ನೋಂದಣಿ ದಾಖಲೆ ಇಲ್ಲದೇ ಇರುವುದರಿಂದ ಸಂಕಷ್ಟಕ್ಕೀಡಾಗುತ್ತಿದ್ದರು. ಇದರಿಂದಾಗಿ ವಂಚನೆ ಬಯಲಿಗೆ ಬಂದಿದೆ.

ಈ ಘಟನೆ ದೇವಾಲಯದ ಆಡಳಿತಾಧಿಕಾರಿಗಳ ಗಮನಕ್ಕೆ ಬಂದ ತಕ್ಷಣ, ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವಾಲಯದ ಪಕ್ಕದಲ್ಲಿರುವ ಲಲಿತಾಂಬಿಕಾ ಅತಿಥಿ ಗೃಹದಲ್ಲಿ ಕೊಠಡಿ ಬುಕ್ ಮಾಡುವ ಹೆಸರಿನಲ್ಲಿ ಈ ನಕಲಿ ವೆಬ್​ಸೈಟ್ ದಂಧೆ ನಡೆದಿರುವ ಬಗ್ಗೆ ಶಂಕಿಸಲಾಗಿದೆ.

ಭಕ್ತರೇ, ವೆಬ್​ಸೈಟ್ ಮೂಲಕ ಕೊಠಡಿ ಕಾಯ್ದಿರುಸುವಾಗ ಎಚ್ಚರ

ನಕಲಿ ವೆಬ್​ಸೈಟ್ ಮೂಲಕ ವಂಚನೆ ಬಗ್ಗೆ ದೇವಾಲಯದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಅವರು ‘ಟಿವಿ9’ ಹೇಳಿಕೆ ನೀಡಿದ್ದು, ರಾಜ್ಯದ ಎ-ಗ್ರೇಡ್ ದೇವಾಲಯಗಳಿಗೆ ಸರ್ಕಾರದಿಂದ ಅಧಿಕೃತ ವೆಬ್‌ಸೈಟ್ ಇದೆ. ಅದು ‘ಕರ್ನಾಟಕ ಟೆಂಪಲ್ಸ್ ಅಕಮಡೇಶನ್’ ಎಂಬ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಸರ್ಕಾರಿ ಸೈಟ್‌ನಲ್ಲಿ ಯಾವುದೇ ಕ್ಯೂಆರ್ ಕೋಡ್ ಪಾವತಿ ವ್ಯವಸ್ಥೆ ಇಲ್ಲ. ಭಕ್ತರು ನಕಲಿ ಲಿಂಕ್‌ಗಳಿಗೆ ಹೋಗದೆ ಅಧಿಕೃತ ಸೈಟ್‌ನಿಂದ ಮಾತ್ರ ಬುಕಿಂಗ್ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: EPFO ಸ್ಟಾಫ್ ಕೋ-ಆಪರೇಟಿವ್ ಸೊಸೈಟಿ ವಂಚನೆ ಪ್ರಕರಣ: ಸಿಇಒ​ಗಿಂತಲೂ ಅಧಿಕ ಆಸ್ತಿ ಗಳಿಸಿರುವ ಅಕೌಂಟೆಂಟ್ ಜಗದೀಶ್!

2024ರ ಫೆಬ್ರವರಿ ತಿಂಗಳಲ್ಲಿಯೂ ಇದೇ ರೀತಿಯ ನಕಲಿ ಲಿಂಕ್ ಮೂಲಕ ಭಕ್ತರು ಮೋಸ ಹೋಗಿದ್ದ ಘಟನೆ ವರದಿಯಾಗಿತ್ತು. ಆಗ ‘Kollur Devotees Trust’ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಲಿಂಕ್ ಹರಡಲಾಗಿತ್ತು. ಈಗ ಮತ್ತೆ ಅದೇ ರೀತಿಯ ವಂಚನೆ ಪುನರಾವರ್ತನೆಯಾಗಿದ್ದು, ಸರ್ಕಾರ ಹಾಗೂ ಪೊಲೀಸರು ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ದೇವಾಲಯದ ಆಡಳಿತ ಮಂಡಳಿ ಮತ್ತು ಭಕ್ತರು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್