AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ದರ್ಶನ ಪಡೆಯಲು ಅಂಗಿ-ಬನಿಯನ್ ತೆಗೆಯಬೇಕೆಂಬ ನಿಯಮಕ್ಕೆ ಆಕ್ಷೇಪ: ಕುಕ್ಕೆ, ಕೊಲ್ಲೂರು ದೇಗುಲ ಆಡಳಿತ ಮಂಡಳಿ ವಿರುದ್ಧ ದೂರು

‘ಹಿಂದೂ ಧರ್ಮದ ಯಾವುದೇ ಧರ್ಮಗ್ರಂಥಗಳಲ್ಲಿ ಇಂಥ ನಿಯಮಗಳ ಉಲ್ಲೇಖ ಇಲ್ಲ’ ಎಂದು ಮನವಿ ಸಲ್ಲಿಸಿರುವವರು ತಿಳಿಸಿದ್ದಾರೆ.

ದೇವರ ದರ್ಶನ ಪಡೆಯಲು ಅಂಗಿ-ಬನಿಯನ್ ತೆಗೆಯಬೇಕೆಂಬ ನಿಯಮಕ್ಕೆ ಆಕ್ಷೇಪ: ಕುಕ್ಕೆ, ಕೊಲ್ಲೂರು ದೇಗುಲ ಆಡಳಿತ ಮಂಡಳಿ ವಿರುದ್ಧ ದೂರು
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂಕು ಮೂಕಾಂಬಿಕೆ ದೇಗುಲ (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 23, 2022 | 8:02 AM

Share

ಉಡುಪಿ: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲ ಹಾಗೂ ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಕೊಲ್ಲೂರು ಮೂಕಾಂಬಿಕಾ ದೇಗುಲಗಳಲ್ಲಿ ಪುರುಷ ಭಕ್ತರು ಅಂಗಿ-ಬನಿಯನ್ ತೆಗೆದು ದೇವರ ದರ್ಶನಕ್ಕೆ ಬರಬೇಕು ಎನ್ನುವ ನಿಯಮ ಬದಲಿಸಬೇಕೆಂದು ಮಂಗಳೂರು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟವು ಧಾರ್ಮಿಕ ದತ್ತಿ‌ ಇಲಾಖೆಗೆ ಲಿಖಿತ ಮನವಿ ಸಲ್ಲಿಸಿದೆ. ‘ದೇವಸ್ಥಾನಗಳಲ್ಲಿ ಅಂಗಿ-ಬನಿಯನ್ ತೆಗೆದು ದರ್ಶನ ಪಡೆಯುವ ಪದ್ಧತಿ ತಪ್ಪು. ದೇಗುಲಗಳಲ್ಲಿ ಅಳವಡಿಸಿರುವ ಸೂಚನಾ ಫಲಕ ತೆರವು ಮಾಡಬೇಕು. ಹಿಂದೂ ಸಂಪ್ರದಾಯದಲ್ಲಿ ಈ ಪದ್ಧತಿ ಇಲ್ಲ’ ಎಂದು ಒಕ್ಕೂಟವು ಆಕ್ಷೇಪಿಸಿದೆ.

ಇಂಥ ಆಚರಣೆಗಳ ಮೂಲಕ ಭಕ್ತರಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ. ಚರ್ಮ ರೋಗವಿದ್ದವರು ಅಂಗಿ ಕಳಚಿದರೆ ಅದು ಇತರರಿಗೂ ಹರಡುವ ಸಾಧ್ಯತೆಯಿದೆ. ದಿವ್ಯಾಂಗರು (ಅಂಗವಿಕಲರು) ಬಟ್ಟೆ ಕಳಚಿ ದರ್ಶನ ಪಡೆಯುವುದು ಕಷ್ಟವಾಗುತ್ತದೆ. ಇದು ಸಂವಿಧಾನದ ಮೂಲಭೂತ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಹೀಗಾಗಿ ತಕ್ಷಣ ದೇವಸ್ಥಾನಗಳಲ್ಲಿ ಅಳವಡಿಸಿರುವ ಫಲಕ ತೆರವುಗೊಳಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

‘ಕಡ್ಡಾಯವಾಗಿ ಅಂಗಿ-ಬನಿಯನ್​ ತೆಗೆದು ಪ್ರವೇಶ ಮಾಡಬೇಕು’ ಎಂಬ ಫಲಕಗಳನ್ನು ದೇಗುಲಗಳಿಂದ ತೆಗೆಸಬೇಕು. ಇಂಥ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಮಾಡಲು ಕೆಲವರನ್ನು ಬೆತ್ತ ಹಿಡಿದು ನಿಲ್ಲಿಸುವುದನ್ನೂ ಕೂಡ ನಿಲ್ಲಿಸಬೇಕು. ಮನವಿಗೆ ಸಂಬಂಧಿಸಿದಂತೆ 15 ದಿನದ ಒಳಗೆ ಪ್ರತಿಕ್ರಿಯಿಸಬೇಕು’ ಎಂದೂ ಒಕ್ಕೂಟವು ಕೋರಿದೆ.

Devotees Oppose Rules about removing Shirt in Kollur and Kukke Temple

ಮುಜರಾಯಿ ಇಲಾಖೆಗೆ ಬರೆದಿರುವ ಪತ್ರ

‘ಹಿಂದೂ ಧರ್ಮದ ಯಾವುದೇ ಧರ್ಮಗ್ರಂಥಗಳಲ್ಲಿ ಇಂಥ ನಿಯಮಗಳ ಉಲ್ಲೇಖ ಇಲ್ಲ. ಈ ಕುರಿತು ಯಾವುದೇ ಸರ್ಕಾರಿ ಆದೇಶವೂ ಪ್ರಕಟವಾಗಿಲ್ಲ. ಆದರೂ ಯಾತ್ರಿಗಳಿಗೆ ಮುಜುಗರ ಆಗುವ ಇಂಥ ನಿಯಮಗಳು ಹಲವು ವರ್ಷಗಳಿಂದ ಜಾರಿಯಲ್ಲಿರುವುದು ಏಕೆ’ ಎಂದು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.

Published On - 8:01 am, Fri, 23 September 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು